Breaking News

Yearly Archives: 2026

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ*

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ* ಬೆಂಗಳೂರು ಜ3: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ …

Read More »

ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್

ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್…… ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಶಾಲಾ ಬಸ್ ಹರಿದ ಘಟನೆ ಗೋಕಾಕ ತಾಲೂಕಿನ ಮಲ್ಲಾಪುರ ಪಿಜಿ ತೋಟದ ಹತ್ತಿರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದರ. ಶಾಲಾ ಬಸ್ ಚಾಲಕನ ದಿವ್ಯ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ರಸ್ತೆ ಬದಿಯಲ್ಲಿ ಸೈಕಲ್ ಮೇಲೆ …

Read More »

ಏಯ್ ಭರತ್ ರೆಡ್ಡಿಗೆ ಸರಿಯಾಗಿ ಬುದ್ಧಿ ಹೇಳ್ರೀ’! ಕಾಂಗ್ರೆಸ್ ಶಾಸಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ

ಏಯ್ ಭರತ್ ರೆಡ್ಡಿಗೆ ಸರಿಯಾಗಿ ಬುದ್ಧಿ ಹೇಳ್ರೀ’! ಕಾಂಗ್ರೆಸ್ ಶಾಸಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ (Bellary)ಬ್ಯಾನರ್​ (Banner) ಕಟ್ಟುವವಿಚಾರಕ್ಕೆಶುರುವಾದಗಲಾಟೆ (Attack)ಕೊನೆಗೆಓರ್ವಕಾರ್ಯಕರ್ತನಸಾವಲ್ಲಿಅಂತ್ಯವಾಗಿದೆ.ಗುಂಡಿನದಾಳಿಗೆಕಾರ್ಯಕರ್ತನೊಬ್ಬಬಲಿಯಾಗಿದ್ದಾನೆ. ಈವಿಚಾರರಾಜ್ಯರಾಜಕಾರಣದಲ್ಲಿಭಾರೀಸದ್ದುಮಾಡಿದೆ. ಈ ಘಟನೆಯಲ್ಲಿಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು , ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಗರಂ ಆಗಿದ್ದಾರೆ . ಜೊತೆಗೆ ಪೊಲೀಸರ ಮೇಲೂ ಅಸಮಾಧಾನ ಹೊರಹಾಕಿದ್ದಾರೆ . ಬಳ್ಳಾರಿಉಸ್ತುವಾರಿಸಚಿವಜಮೀರ್ಅಹಮದ್ಖಾನ್ಘಟನೆಯಮಾಹಿತಿನೀಡಲುತೆರಳಿದ್ದವೇಳೆಸಿಎಂಸಿದ್ದರಾಮಯ್ಯಗರಂಆಗಿದ್ದಾರೆ. ಫೋನ್ಮಾಡಿದ್ರೂಸ್ವೀಕರಿಸದಸಿದ್ದರಾಮಯ್ಯಜಮೀರ್​​ ಮುಂದೆಯೇಅಸಮಾಧಾನಹೊರಹಾಕಿಎಚ್ಚರಿಕೆನೀಡಿದ್ದಾರೆ. ಗುಂಡು ತಗುಲಿ ಕಾರ್ಯಕರ್ತ ರಾಜಶೇಖರ್​ ಬಲಿ ಬಳ್ಳಾರಿಯಲ್ಲಿಫ್ಲೆಕ್ಸ್​ ವಿಚಾರಕ್ಕೆಶುರುವಾದಗಲಾಟೆಯಲ್ಲಿಗುಂಡಿನದಾಳಿನಡೆದಿದೆ, ಈವೇಳೆಕಾರ್ಯಕರ್ತರಾಜಶೇಖರ್​ ಗುಂಡುತಗುಲಿಮೃತಪಟ್ಟಿದ್ದಾರೆ. ಈ …

Read More »

ಜ.3ರಂದು ಸೂರ್ಯ, ಚಂದ್ರರ ಅಪರೂಪದ ಸಂಗಮ:

ಜ.3ರಂದು ಸೂರ್ಯ, ಚಂದ್ರರ ಅಪರೂಪದ ಸಂಗಮ: ಮಿಸ್​ ಮಾಡದೆ ನೋಡಿ 2026ರ ಮೊದಲ ಸೂಪರ್‌ಮೂನ್ ಉಡುಪಿ: ನಾಳೆ ಸೂರ್ಯ ಸುಮಾರು 30 ಲಕ್ಷ ಕಿ.ಮೀ ಭೂಮಿಗೆ ಸಮೀಪ ಬಂದು ದೊಡ್ಡದಾಗಿ ಕಾಣುತ್ತಾನೆ. ಚಂದ್ರನೂ ಕೂಡ ಸುಮಾರು 27 ಸಾವಿರ ಕಿ.ಮೀ ಸಮೀಪಿಸಿ ದೊಡ್ಡದಾಗಿಯೇ ಕಾಣುತ್ತಾನೆ. ಈ ವಿಸ್ಮಯ ನಡೆಯುವುದು ಒಂದೇ ದಿನ, ಅದೇ ವಿಶೇಷ. 2026ನ ಮೊದಲ ಸೂಪರ್​ ಮೂನ್: ಚಂದ್ರ ಭೂಮಿಯಿಂದ ಸಾಮಾನ್ಯಕ್ಕಿಂತ ಕಡಿಮೆ ದೂರ ತಲುಪಿದಾಗ ಅದರ ಗಾತ್ರ ಮತ್ತು …

Read More »

ಬಳ್ಳಾರಿ ಘಟನೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

ಬಳ್ಳಾರಿ: ಶಾಸಕ ಭರತ ರೆಡ್ಡಿ ನೇತೃತ್ವದಲ್ಲಿ ನಿನ್ನೆ ಇಲ್ಲಿ ಗುಂಡಾಗರ್ದಿ ನಡೆದಿದೆ. ಸಾವಿರಾರು ಗೂಂಡಾಗಳನ್ನು ಕರೆತಂದು ಗೂಂಡಾಗಿರಿ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬ್ಯಾನರ್ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಗೆ ಆಗಮಿಸಿದ ಅವರು, ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸತೀಶ್ ರೆಡ್ಡಿ ಅನ್ನೋ ವ್ಯಕ್ತಿ ಖಾಸಗಿ ವ್ಯಕ್ತಿಗಳನ್ನು ಬಳಸಿ ಫೈರ್ ಮಾಡಿರುವ ಮಾಹಿತಿ ಇದೆ. …

Read More »

ಸಮಗ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಮಾರ್ಗದರ್ಶಿ ಬಿಡುಗಡೆಗೊಳಿಸಿದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

ಬೆಂಗಳೂರು: ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಪ್ರವೇಶ ಪ್ರಕ್ರಿಯೆಯ ಸಮಯದಲ್ಲಿ ಉಂಟಾಗುವ ಗೊಂದಲ ಕಡಿಮೆ ಮಾಡುವ ಉದ್ದೇಶದಿಂದ ಸಮಗ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯಿಂದ ಬಂದವರು, ಅರ್ಜಿ ಸಲ್ಲಿಸುವ ವಿಧಾನಗಳು, ಕೌನ್ಸೆಲಿಂಗ್ ಹಂತಗಳು ಮತ್ತು ಫಾರ್ಮ್ ಭರ್ತಿ ಮಾಡುವಾಗ ಅರ್ಥಮಾಡಿಕೊಳ್ಳಲು ಕಷ್ಟಪಡುತ್ತಾರೆ ಎಂದು ಹೇಳಿದರು. ಈ ಅಂತರ …

Read More »

ಇ-ಸ್ವತ್ತು: ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ- ಪ್ರಿಯಾಂಕ್‌ ಖರ್ಗೆ

ಇ-ಸ್ವತ್ತು: ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ- ಪ್ರಿಯಾಂಕ್‌ ಖರ್ಗೆ ಬೆಂಗಳೂರು: ಇ-ಸ್ವತ್ತು ಆನ್‌ಲೈನ್​​ ಅರ್ಜಿ ಸಲ್ಲಿಕೆಯಲ್ಲಿ NIC ತಾಂತ್ರಿಕ ದೋಷ ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು, ಆತಂಕ ಬೇಡ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ. “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ ರಾಜ್​​ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್​​ ಮತ್ತು ಪಂಚಾಯತ್​ ರಾಜ್​ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ …

Read More »

ಹಿಂದೂ ಉತ್ತರಾಧಿಕಾರ ಕಾಯಿದೆ ಸೆಕ್ಷನ್ 6ರ ಗೊಂದಲ ಸರಿಪಡಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಹಿಂದೂ ಉತ್ತರಾಧಿಕಾರ ಕಾಯಿದೆ-1956ರ ಸೆಕ್ಷನ್ 6ರಲ್ಲಿರುವ ತಿದ್ದುಪಡಿಯಲ್ಲಿ ಮೃತಪಟ್ಟ ವ್ಯಕ್ತಿಯ ತಾಯಿ ಮತ್ತು ವಿಧವಾ ಪತ್ನಿಯ ಹಕ್ಕುಗಳ ಕುರಿತ ಅಸ್ಪಷ್ಟತೆಗಳ ಕುರಿತಂತೆ ಕೇಂದ್ರ ಸರ್ಕಾರ ಕೆಲವು ನಿಬಂಧನೆಗಳಿಗೆ ಮರು ತಿದ್ದುಪಡಿ ಮಾಡಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್‌ ತಿಳಿಸಿದೆ. ತನ್ನ ಮೃತಪಟ್ಟ ಪತಿಗೆ ಸೇರಿದ ಆಸ್ತಿಗಳ ಮೇಲಿನ ಹಕ್ಕುಗಳ ಕುರಿತಂತೆ ಸಿವಿಲ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ, ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಕೊಪ್ಪದ ಶರಣವ್ವ ಎಂಬವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವನ್ಯಜೀವಿ ಮಂಡಳಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಸಫಾರಿಗೆ ಅನುಮತಿ ನೀಡುವ ಬಗ್ಗೆ ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ವನ್ಯಜೀವಿ ಮಂಡಳಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸಭೆ ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಿತು. ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು? ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ …

Read More »

ಕಾಲ್ತುಳಿತದಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಕ್ರಿಕೆಟ್ ಟೂರ್ನಿ ನಡೆಸಬೇಕು ಎಂದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

ಬೆಂಗಳೂರು: ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸುವುದು ಪರಿಹಾರವಲ್ಲ ಎಂದು ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, “ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಪಂದ್ಯಾವಳಿ ನಿಲ್ಲಿಸೋದು ಪರಿಹಾರವಲ್ಲ. ಮತ್ತೆ ಅಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಆಟವಾಡಿಸಬೇಕು. ಪಂದ್ಯಾವಳಿ ನಡೆಯಬೇಕೆಂಬುದು ಎಲ್ಲರ ಬಯಕೆ. ದುರಂತ ಆಗಬಾರದಾಗಿತ್ತು, ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಈ ನೋವು ಸಾವನ್ನಪ್ಪಿದ ಕುಟುಂಬದವರಿಗೆ ಇದೆ” ಎಂದರು. ಕರ್ನಾಟಕ …

Read More »