Breaking News

Yearly Archives: 2026

ಝೆನ್‌-ಜಿ, ಆಲ್ಫಾ ಅಂತ ಕರೆಯಬೇಡಿ.. ‘ಮಗ-ಮಗಳು’ ಎಂದು ಕರೆಯಿರಿ: ಅಸ್ಸಾಂ ಸಿಎಂ

ಗುವಾಹಟಿ: ಝೆನ್‌-ಜಿ , ಆಲ್ಫಾ ಅನ್ನೋದೆಲ್ಲಾ ಯುರೋಪಿಯನ್‌ ಪರಿಕಲ್ಪನೆಯನ್ನು ಲೇಬಲ್‌ ಮಾಡುತ್ತದೆ. ಅವರನ್ನು ‘ಮಗ-ಮಗಳು’ ಅಂತ ಕರೆಯಬೇಕು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ  ತಿಳಿಸಿದ್ದಾರೆ. ಅಸ್ಸಾಂ ಯುವಜನತೆ ಮತ್ತು ಅಭಿವೃದ್ಧಿಗೆ ತನ್ನದೇ ಆದ ವಿಧಾನವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಗುವಾಹಟಿಯಲ್ಲಿ 80ನೇ ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶರ್ಮಾ, ‘ನಾನು ಝೆನ್‌-ಜಿ ಅಥವಾ ಜನರಲ್ ಆಲ್ಫಾ ಪರಿಕಲ್ಪನೆಯನ್ನು ನಂಬುವುದಿಲ್ಲ. ಅದು ಪಾಶ್ಚಿಮಾತ್ಯ …

Read More »

ಸ್ವಾತಂತ್ರ್ಯ ದಿನಾಚರಣೆ ವೇಳೆ ಶಾಲೆಯ ಕಾಂಕ್ರೀಟ್‌ ಛಾವಣಿ ಕುಸಿತ – ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ  ಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾಂಕ್ರೀಟ್ ಛಾವಣಿ ಕುಸಿದು ಒಂದು ಮಗು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಧ್ವಜಾರೋಹಣ ಸಮಾರಂಭದ ನಂತರ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆಲವು ಮಕ್ಕಳು ಶಾಲೆಯ ಮುಖ್ಯ ದ್ವಾರದ ಮೇಲಿದ್ದ ಛಾವಣಿ ಹತ್ತಿದಾಗ, ತೂಕ ಹೆಚ್ಚಾಗಿ ರಚನೆ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಎಸ್‌ಡಿಎಂ, ವೃತ್ತ ಅಧಿಕಾರಿ (ಸಿಒ) ಮತ್ತು …

Read More »

ಡೇವಿಡ್ ಡಿಸೋಜಾ ಹತ್ಯೆ ಕೇಸ್; ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ

ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಡೇವಿಡ್ ಡಿಸೋಜಾ  ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ನೀಡಿ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.7ರಂದು ಮಧ್ಯಾಹ್ನ 3:45ರ ಸುಮಾರಿಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್ಪ್ರೈಸರ್ಸ್‌ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಬೈಕ್‌ನಲ್ಲಿ ಬಂದ ಆರೋಪಿಗಳು ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಈ ಬಗ್ಗೆ ಶಿರ್ವ …

Read More »

ಆಷಾಢ ಮುಗಿದರೂ ತವರಿನಿಂದ ಬಾರದ ಪತ್ನಿ – ಮನನೊಂದು ನೇಣಿಗೆ ಶರಣಾದ ಪತಿ

ತುಮಕೂರು: ಆಷಾಢಕ್ಕೆ ತವರು ಮನೆಗೆ ಹೋದ ಪತ್ನಿ  ವಾಪಸ್ ಬರದೇ ಇದ್ದಿದ್ದಕ್ಕೆ ಮನನೊಂದು ಪತಿ ನೇಣಿಗೆ ಶರಣಾದ ಘಟನೆ ಕುಣಿಗಲ್ ಪಟ್ಟಣದ ಮಹಾವೀರ ನಗರದಲ್ಲಿ ನಡೆದಿದೆ. ಅವಿನಾಶ್ (28) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ 6 ತಿಂಗಳ ಹಿಂದಷ್ಟೇ ಹಾಸನದ ಅರಸೀಕೆರೆ ಮೂಲದ ಯುವತಿಯನ್ನು ಅವಿನಾಶ್‌ ಪ್ರೀತಿಸಿ ಮದುವೆಯಾಗಿದ್ದ. ಆಷಾಢಕ್ಕೆ ಪತ್ನಿ ತವರಿಗೆ ತೆರಳಿದ್ದಳು. ಕರೆ ಮಾಡಿ ಬರುವಂತೆ ಅವಿನಾಶ್‌ ತಿಳಿಸಿದ್ದ. ಆದರೆ ನಾನು ಬರಲ್ಲ ಎಂದು ಪತ್ನಿ ಹೇಳಿದ್ದಳು. …

Read More »

ಆಸ್ಟ್ರೇಲಿಯಾ ಶಿಖರದ ತುತ್ತತುದಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಕೊಡಗಿನ ಮಹಿಳೆ

ಮಡಿಕೇರಿ: ಸ್ವಾತಂತ್ರ್ಯ  ದಿನದಂದು ಆಸ್ಟ್ರೇಲಿಯಾದ ಅತಿ ಎತ್ತರದ ಮೌಂಟ್ ಕೊಸ್ಸಿಯಸ್ಕೊ ಶಿಖರದ ತುತ್ತತುದಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹೆಮ್ಮೆಯಿಂದ ಹಾರಾಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದವರು ಕೊಡಗಿನ ದಿಟ್ಟ ಮಹಿಳೆ ಜಮ್ಮಡ ಪ್ರೀತ್ ಅಪ್ಪಯ್ಯ. ಹಿಮ, ಕೊರೆವ ಚಳಿ ಮತ್ತು ಪ್ರಬಲ ಗಾಳಿಯ ನಡುವೆಯೂ ಶಿಖರ ತಲುಪಿ, ಕೊಡವ ಸಾಂಪ್ರದಾಯಿಕ ಉಡುಪಿನಲ್ಲೇ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಪ್ರೇಮದ ಜೊತೆಗೆ ಕೊಡಗಿನ ಅಸ್ಮಿತೆಯನ್ನೂ ವಿಶ್ವದ ಮುಂದೆ ಅನಾವರಣಗೊಳಿಸಿದ್ದಾರೆ. ಆಗಸ್ಟ್ 10ರಿಂದ 19ರವರೆಗೆ …

Read More »

ಸ್ವಾತಂತ್ರ್ಯೋತ್ಸವ ಸಂಭ್ರಮ – ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ಕಡೇನಂದಿಹಳ್ಳಿ ಸರ್ಕಾರಿ ಶಾಲೆ ಮಕ್ಕಳು

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ  ತಾಲೂಕಿನ ಕಡೇನಂದಿಹಳ್ಳಿ  ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು  80ನೇ ಸ್ವಾತಂತ್ರ್ಯ ದಿನಾಚರಣೆಯನ್ನ  ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಸ್ವಾತಂತ್ರ್ಯೋತ್ಸವದ ವಿಶೇಷ ದಿನದಂದು ಶಾಲೆಯ 12 ಪ್ರತಿಭಾವಂತ ವಿದ್ಯಾರ್ಥಿಗಳು ಹೆಲಿಕಾಪ್ಟರ್‌ನಲ್ಲಿ ಹಾರಾಡಿ ಸಂಭ್ರಮಿಸಿದ್ದಾರೆ. ಕಡೇನಂದಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಮತ್ತು ಕ್ರೀಡೆಯಲ್ಲಿ ಪ್ರತಿಭಾನ್ವಿತರಾದ ಮಕ್ಕಳನ್ನು ಹೆಲಿಕಾಪ್ಟರ್‌ ಪ್ರಯಾಣಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಆದರಂತೆ ಜಾನ್ಹವಿ, ಧ್ರುವ, ಹೇಮಂತ್, ಜೀವಿತಾ, ಚಂದನ್, ನಂದನ್, ವಿದ್ಯಾಶ್ರೀ, ಪೃಥ್ವಿಕ್, ರಚಿತಾ, ವಿಜಯ್, ಅನುಶ್ರೀ …

Read More »

ಅರಣ್ಯಕ್ಕೆ ಅಕ್ರಮ ಪ್ರವೇಶ ಮಾಡಿದ್ರು, 4 ಬ್ಯಾಗ್‌ನಲ್ಲಿ ಜಿಂಕೆ ಮಾಂಸ ವಶಕ್ಕೆ: ಬೇಟೆಗಾರರ ಎನ್‌ಕೌಂಟರ್ ಬಗ್ಗೆ ರಾಮಲಿಂಗಾರೆಡ್ಡಿ ರಿಯಾಕ್ಷನ್

ಬೆಂಗಳೂರು: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ  ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗ್ಗೆ 6:30 ಕೋಲಾರಗೆ ಹೋಗುವಾಗ ಮೆಸೇಜ್ ಬಂತು. ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ರಿಪೋರ್ಟ್ ಕೊಡಿ ಅಂತ ಹಿರಿಯ ಅಧಿಕಾರಿಗಳಿಗೆ ಕೇಳಿದ್ದೆ. ಮೀಸಲು ಅರಣ್ಯ ಪ್ರದೇಶ ಅದು. ನಾಡ ಬಂದೂಕುಧಾರಿಗಳು ಯಾವುದೇ ಬಂದೂಕಿಗೆ ಲೈಸೆನ್ಸ್ ಇಲ್ಲ. ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದ್ದಾರೆ. ನಾಲ್ಕು …

Read More »

ವಿಕಸಿತ ಭಾರತಕ್ಕಾಗಿ ಶ್ರಮಿಸೋಣ: ಮೂಗನೂರಮಠ

ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಸ್ವತಂತ್ರ ದಿನಾಚರಣೆ ಬಾಗಲಕೋಟೆ: ಸರ್ವೋತ್ತಮ ಆಡಳಿತ, ಸುಭದ್ರ ರಾಜ್ಯ ನಿರ್ಮಾಣಕ್ಕಾಗಿ ಜ್ಞಾನ, ಕೌಶಲ್ಯ ಮತ್ತು ಸದ್ಗುಣಗಳಿಂದ ಹೋರಾಡುವುದರ ಮೂಲಕ ಸ್ವತಂತ್ರ ಭಾರತವನ್ನು ವಿಕಸಿತ ಭಾರತವನ್ನಾಗಿ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮೂಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾಹಾವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದರು. ಹೋರಾಟಗಾರರ ಪ್ರಾಣ ಬಲಿದಾನದಿಂದ ಬಂದ ಸ್ವಾತಂತ್ರ್ಯ ಭಾರತವನ್ನು ವಿಕಸಿತ …

Read More »

ನೈಜಿರಿಯಾದ ಕತ್ತಲಲ್ಲಿ ಕಾರಿನ ಬಾಗಿಲು ಬಡಿದ ಮಕ್ಕಳು ಇಂದು ವೈದ್ಯರು: ಸದ್ಗುರು ಶ್ರೀ ಮಧುಸೂದನ ಸಾಯಿ

ಬೆಂಗಳೂರು: ನೈಜಿರಿಯಾದಲ್ಲಿ ನನ್ನ ಕಾರು ಹೋಗುತ್ತಿದ್ದಾಗ ಕತ್ತಲಿನಲ್ಲಿ ಇಬ್ಬರು ಮಕ್ಕಳು ನನ್ನ ಕಾರಿನ ಬಾಗಿಲು ತಟ್ಟಿದ್ದರು. ಅದು ಅಪಾಯಕಾರಿ ಸನ್ನಿವೇಶವಾಗಿದ್ದರೂ ನಾನು ಗಾಜು ಇಳಿಸಿ ಮಕ್ಕಳನ್ನು ನೋಡಿದೆ. ಅವರು ವೈದ್ಯರಾಗಬೇಕು (Doctor) ಎಂದು ಕೋರಿದರು. ಆ ಬಾಲಕ, ಬಾಲಕಿಯರು ಇಂದು ಮುದ್ದೇನಹಳ್ಳಿಯಲ್ಲಿ  ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ ಎಂದು “ಒನ್ ವಲ್ಡ್ ಒನ್ ಫ್ಯಾಮಿಲಿ ಮಿಷನ್” ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ವಿವರಿಸಿದರು. ನಗರದ  ಅರಮನೆ ಮೈದಾನದಲ್ಲಿ ಶುಕ್ರವಾರ (ಆ …

Read More »

ಅಂಡಮಾನ್‌ ಸಮುದ್ರದಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ – ಆರ್‌.ಅಶೋಕ್‌ ಪುತ್ರ ಶರತ್‌ಗೆ ಸನ್ಮಾನ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸ್ವರಾಜ್‌ ದ್ವೀಪ್‌ನಲ್ಲಿ ಸಮುದ್ರದ ನೀರಿನಲ್ಲಿ ಅತಿ ದೊಡ್ಡ ರಾಷ್ಟ್ರಧ್ವಜ  ಹಾರಿಸುವ ಮೂಲಕ ಐತಿಹಾಸಿಕ ಸಾಧನೆಯಲ್ಲಿ ಭಾಗಿಯಾದ ಬೆಂಗಳೂರಿನ ಶರತ್ ಅಶೋಕ್  ಅವರನ್ನು ಅಂಡಮಾನ್‌ ನಿಕೋಬಾರ್‌ನ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ.ಜೋಶಿ ಸನ್ಮಾನಿಸಿದರು. ಲೋಕ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಲೆಪ್ಟಿನೆಂಟ್‌ ಗರ್ವನರ್‌ ಅಡ್ಮಿರಲ್ ಡಿ.ಕೆ.ಜೋಶಿ, ಶರತ್‌ ಅಶೋಕ್‌ ಅವರಿಗೆ ನೀಡಿ ಸನ್ಮಾನಿಸಿದರು. 2026 ರ ಮೇ 2 …

Read More »