Breaking News

Yearly Archives: 2026

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಕೇವಲ ಒಂದು ಪ್ರಯೋಗ, ಮುಂದಿನ ವರ್ಷದೊಳಗೆ ಫಲಿತಾಂಶ: ಕೇಂದ್ರ ಸರ್ಕಾರ

ನವದೆಹಲಿ: ಎಥೆನಾಲ್(Ethanol) ಮಿಶ್ರಣವು ಪ್ರಸ್ತುತ ಒಂದು ಪ್ರಯೋಗದ ಹಂತದಲ್ಲಿದೆ ಮತ್ತು ಇದರ ಸಂಪೂರ್ಣ ಹಾಗೂ ನಿಖರ ಫಲಿತಾಂಶಗಳು ಮುಂದಿನ ವರ್ಷದೊಳಗೆ ಹೊರಬರಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕೇಂದ್ರ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಎಥೆನಾಲ್ ಮಿಶ್ರಣ ಕಾರ್ಯಕ್ರಮವು ನಡೆಯುತ್ತಿರುವ ಪ್ರಯೋಗವಾಗಿದ್ದು, ಮುಂದಿನ ವರ್ಷದ ವೇಳೆಗೆ ನೀತಿಯ ಪರಿಣಾಮವು ಸ್ಪಷ್ಟವಾಗುತ್ತದೆ ತಿಳಿಸಿದರು. ಏನಿದು ಪ್ರಕರಣ? 2025-26ರ ಎಥೆನಾಲ್ ಪೂರೈಕೆ ವರ್ಷಕ್ಕೆ  ಸಂಬಂಧಿಸಿದಂತೆ, ಖಾಸಗಿ …

Read More »

ಮನೆಗೆ ಬಂದು ನಡೆಯಲಿದೆ ಪರಿಶೀಲನೆ – ಮಾಲೀಕರು ಏನು ದಾಖಲೆ ಕೊಡಬೇಕು?

ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ  ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್‌ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ …

Read More »

ಎಂಜಿನಿಯರಿಂಗ್‌ ಪರೀಕ್ಷೆ ಮುಗಿಸಿದ 5 ನಿಮಿಷದಲ್ಲಿ ಫಲಿತಾಂಶ – VTU ಸಾಧನೆ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಧೀನದ ರಾಜ್ಯದ ವಿವಿಧ ಎಂಜನಿಯರಿಂಗ್ ‌ಕಾಲೇಜುಗಳಲ್ಲಿ 6 ನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ಸುಮಾರು 60 ಸಾವಿರ ವಿದ್ಯಾರ್ಥಿಗಳು ಇಂದು ಸಂಜೆ 5:30ಕ್ಕೆ ಕೊನೆಯ ಪ್ರಾಯೋಗಿಕ ಪರೀಕ್ಷೆ ಮುಗಿಸಿ ಹೊರ ಬರುವಷ್ಟರಲ್ಲಿ ಅಂದರೆ 5 ನಿಮಿಷದಲ್ಲಿ ವಿಟಿಯು ಫಲಿತಾಂಶ ಪ್ರಕಟಿಸಿ ದಾಖಲೆ ಸೃಷ್ಟಿಸಿದೆ. ಕಳೆದ 15 ದಿನಗಳಿಂದ ನಡೆದ ಲಿಖಿತ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಒಂದು ವಾರಕಾಲ ಪೂರ್ಣಗೊಳಿಸಿ ಅಂಕಗಳನ್ನು ಅಪ್ಲೋಡ್ ಮಾಡಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಯಾ …

Read More »

ಹಾನಗಲ್‌ ಕಾರಹುಣ್ಣಿಮೆ ವೇಳೆ ಗಲಾಟೆ; 24 ಹಿಂದೂಗಳು, 26 ಮುಸ್ಲಿಂ ಯುವಕರ ವಿರುದ್ಧ ಕೇಸ್‌ ದಾಖಲು

ಹಾವೇರಿ: ಹಾವೇರಿ ಸಮೀಪದ ನರೇಗಲ್‌ ಗ್ರಾಮದಲ್ಲಿ ಕಾರಹುಣ್ಣಿಮೆ ಆಚರಣೆ ವೇಳೆ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದು 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೀಗ ಎರಡು ಗುಂಪುಗಳ ನಡುವೆ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಈ ಗಲಾಟೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೊನ್ನೆ ಕಾರಹುಣ್ಣಿಮೆಯಂದು ಹೋರಿಗಳಿಗೆ ಬಣ್ಣ ಹಚ್ಚಿ ಓಡಿಸುತ್ತಾ ಪಟಾಕಿ ಹಚ್ಚಲಾಗುತ್ತಿತ್ತು. ಮಸೀದಿ ಮುಂದೆ ಪಟಾಕಿ …

Read More »

ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರ ಮದ್ಯ ಸೇವಿಸುವವರ ವಿರುದ್ಧ ಪೊಲೀಸ ಕಠಿಣ ಕ್ರಮ

ಬೆಳಗಾವಿ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವಿಸುವವರ ವಿರುದ್ಧ ಉದ್ಯಮಬಾಗ ಠಾಣೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಿನ್ನೆ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ದಿನಾಂಕ 28/06/2026 ರಂದು ಬೆಳಗಾವಿಯ ಉದ್ಯಮಬಾಗ ಪೊಲೀಸ್ ವ್ಯಾಪ್ತಿಯ ಸರ್ವೋ ಕಂಟ್ರೋಲ್ ಫ್ಯಾಕ್ಟರಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯಪಾನ ಮಾಡುತ್ತಿದ್ದ ಆರೋಪಿಗಳಾದ ತಾನಾಜಿ ಗಲ್ಲಿಯ …

Read More »

ಹೋಂಸ್ಟೇನಲ್ಲಿ ಯುವತಿ ಸಾವು; ಸಂಜೀತ್ ಅಲಿ ಸಹವಾಸ ಮಾಡಿ ತಪ್ಪು ಮಾಡಿಬಿಟ್ಟೆ ಹೊಸ ಬದುಕು ಕಟ್ಟಿಕೊಳ್ತೀನಿ ಎಂದಿದ್ದ ಸುರಭಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ನಂದಿಗಿರಿಧಾಮದ ಮುದ್ದೇನಹಳ್ಳಿಯ ಹೋಂಸ್ಟೇನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಸಾಯಿ ಸುರಭಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆಕೆಯ ಸಾವಿಗೆ ಕೆಲ ತಿಂಗಳ ಮೊದಲು ಬರೆದಿದ್ದ ಗ್ರಾಟಿಟ್ಯೂಡ್ ಜರ್ನಲ್ ಇದೀಗ ಬೆಳಕಿಗೆ ಬಂದಿದೆ. ಜರ್ನಲ್‌ನಲ್ಲಿ ಸುರಭಿಯ ಮನಸ್ಥಿತಿ, ಹಳೆಯ ಬದುಕಿನಿಂದ ಹೊರಬಂದು ಹೊಸ ಜೀವನ ಕಟ್ಟಿಕೊಳ್ಳುವ ಆಸೆ ಹಾಗೂ ಭವಿಷ್ಯದ ಬಗ್ಗೆ ಹೊಂದಿದ್ದ ನಿರೀಕ್ಷೆಗಳು ವ್ಯಕ್ತವಾಗಿವೆ. 2025ರ ಡಿಸೆಂಬರ್ 30ರಂದು ಬರೆದಿರುವ ಈ ದಿನಚರಿಯಲ್ಲಿ ಸಂಜೀತ್ ಅಲಿ ಜೊತೆಗಿನ ಬ್ರೇಕಪ್ …

Read More »

ಹಾವೇರಿಯ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬೊಮ್ಮಾಯಿ

ಹಾವೇರಿ: ಜಿಲ್ಲೆಯ ಹಾನಗಲ್  ತಾಲೂಕಿನ ನರೇಗಲ್  ಗ್ರಾಮದಲ್ಲಿ ಸೋಮವಾರ ನಡೆದ ಹಿಂಸಾತ್ಮಕ ಘಟನೆ ಅತ್ಯಂತ ಹೇಯ ಕೃತ್ಯ. ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಯತ್ನ ನಡೆದಿದ್ದು, ಉದ್ದೇಶ ಪೂರ್ವಕವಾಗಿ ಹೋರಿ ಬೆದರಿಸುವ ಯುವಕರ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಖಂಡನೀಯ. ಕೂಡಲೇ ತಪ್ಪಿತಸ್ಥರ ಮೇಲೆ ಅತ್ಯಂತ ಕಠಿಣ ಶಿಸ್ತಿನ ಕ್ರಮ ತೆಗೆದುಕೊಂಡು ಅವರನ್ನು ಜೈಲಿಗೆ ಕಳುಹಿಸಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಟ್ಟು ಸರ್ಕಾರ ಪರಿಹಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ …

Read More »

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ರಾಮ ಮಂದಿರ ದೇಣಿಗೆ ಹಗರಣದಲ್ಲಿ ಕರ್ನಾಟಕದ  ನಂಟಿದೆ ಎಂಬ ಅಖಿಲೇಶ್ ಯಾದವ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಖಿಲೇಶ್ ಯಾದವ್ ಹೇಳಿಕೆ ಬಗ್ಗೆ ಗೊತ್ತಿಲ್ಲ. ಅದ್ರೆ ಬಿಜೆಪಿಗೆ RSSಗೆ ನೇಷನ್ ಫಸ್ಟ್ ಅಲ್ಲ. ಬಿಜೆಪಿ-RSSಗೆ ಡೊನೇಷನ್ ಫಸ್ಟ್ ಎಂದು ಕಿಡಿಕಾರಿದ್ದಾರೆ. ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು …

Read More »

15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್

ಬಾಗಲಕೋಟೆ: ಮುಂದಿನ ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್  ಹೇಳಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾವು ತಾತ್ಕಾಲಿಕ ಮಾತ್ರ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ನಿಮ್ಮ ಜಿಲ್ಲೆಯವರಿಗೇ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು. ಇದೇ ವೇಳೆ ಜಿಲ್ಲೆಗೆ ಸಚಿವ …

Read More »

ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್

ಬೆಂಗಳೂರು: ಕೆಂಪೇಗೌಡ ಜಯಂತಿ ಆಚರಣೆ ವೇಳೆ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ, ಚಿಕ್ಕಬಳ್ಳಾಪುರ  ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗಾದ ಅವಮಾನವನ್ನು ವಿವರಿಸಿ ಕಣ್ಣೀರು ಹಾಕಿದ್ದಾರೆ. ನಡೆದ ಗಲಾಟೆಯನ್ನು ಸಿದ್ದರಾಮಯ್ಯ ಅವರಿಗೆ ವಿವರಿಸಿದ ಶಾಸಕ ಪ್ರದೀಪ್ ಈಶ್ವರ್  ತೀವ್ರ ಭಾವುಕರಾದರು. ವಿರೋಧ ಪಕ್ಷಗಳಾದ ಜೆಡಿಎಸ್  ಮತ್ತು ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಚಪ್ಪಲಿ ಎಸೆದಿದ್ದಲ್ಲದೆ, ನನ್ನ ಹಾಗೂ ನನ್ನ ಕುಟುಂಬದವರನ್ನು …

Read More »