ಅಹಮದಾಬಾದ್: ಬೌಲರ್ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಧೂಳೀಪಟ ಮಾಡಿದ ಆರ್ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ …
Read More »Yearly Archives: 2026
ಫೇಸ್ಬುಕ್ ಪ್ರೀತಿ 7.05 ಲಕ್ಷ ರೂ. ವಂಚನೆ
ಬೆಳಗಾವಿ: ಫೇಸ್ಬುಕ್ನಲ್ಲಿ ಪ್ರೀತಿಯ ಬಲೆ ಬೀಸಿ ವಿದೇಶದಿಂದ ಲವ್ಗಿಫ್ಟ್ ಕಳುಹಿಸುವುದಾಗಿ ನಂಬಿಸಿ, 7.05 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಯರಗಟ್ಟಿ ತಾಲೂಕಿನ ಕುರುಬಗಟ್ಟಿಯ ಲಕ್ಕಪ್ಪ ಸನ್ನಿಂಗನವರ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರೋಸಂಜೆಲ್ ಪಾಜ್ ಹೆಸರಿನ ಫೇಸ್ಬುಕ್ ಖಾತೆಯಿಂದ ಸ್ನೇಹದ ಕೋರಿಕೆ ಸಲ್ಲಿಸಿ, ಪರಿಚಯ ಬೆಳೆಸಿಕೊಂಡು, ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್ ಮೂಲಕ ನಿರಂತರ ಕರೆ ಹಾಗೂ ಚಾಟ್ ನಡೆಸಿ ಪ್ರೀತಿಯ ನಾಟಕವಾಗಿದ್ದಾರೆ. ನಂತರ …
Read More »ಸೈನಿಕನ ಜೀವನದಲ್ಲಿ ಶಿಸ್ತು, ದೈಹಿಕ ಸಾಮರ್ಥ್ಯ ಬಹುಮುಖ್ಯ
ಬೆಳಗಾವಿ :ತರಬೇತಿ ಪೂರ್ಣಗೊಳಿಸಿ ಕರ್ತವ್ಯಕ್ಕೆ ಹಾಜರಾಗುವ ಪ್ರತಿಯೊಬ್ಬ ಸೈನಿಕನಿಗೆ ವೃತ್ತಿಯಲ್ಲಿ ಮಾತ್ರವಲ್ಲ ವೈಯಕ್ತಿಕ ಜೀವನದಲ್ಲೂ ಶಿಸ್ತು ಮತ್ತು ದೈಹಿಕ ಸಾಮರ್ಥ್ಯ ಅತ್ಯಂತ ಮುಖ್ಯವಾಗಿರುತ್ತದೆ. ಇದನ್ನು ಕಾಪಾಡಿಕೊಳ್ಳಬೇಕು ಎಂದು ಮರಾಠಾ ಲಘು ಪದಾತಿದಳದ ಕಮಾಂಡೆಂಟ್ ಬ್ರಿಗೇಡಿಯರ್ ಗಿರೀಶ ಉಪಾಧ್ಯ ಹೇಳಿದರು. ಇಲ್ಲಿನ ಮರಾಠಾ ಲಘು ಪದಾತಿದಳ(ಎಂಎಲ್ಐಆರ್ಸಿ)ದಲ್ಲಿ ಶನಿವಾರ ಜರುಗಿದ ಅಗ್ನಿಫಥ್ ಯೋಜನೆಯಡಿ ತರಬೇತಿ ಪೂರ್ಣಗೊಳಿಸಿದ ಅಗ್ನಿವೀರರ 7ನೇ ಬ್ಯಾಚ್ನ ಪ್ರಮಾಣ ವಚನ ಸ್ವೀಕಾರದಲ್ಲಿ ಪೆರೇಡ್ ಪರಿವೀಕ್ಷಣೆ ಕೈಗೊಂಡು ಮಾತನಾಡಿದ ಅವರು, ಭಾರತೀಯ …
Read More »ಕಂಟ್ರಿ ಬಂದೂಕು ತಯಾರಿಕೆ ಮತ್ತು ಮಾರಾಟ ಜಾಲ ಭೇಧಿಸಿದ ಖಾನಾಪುರ ಪೊಲೀಸರು
ಬೆಳಗಾವಿ : ಖಾನಾಪುರ ತಾಲೂಕಿನ ಹಳ್ಳಿಯೊಂದರಿಂದ ಬೆಳಗಾವಿ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಯವರೆಗೂ ವ್ಯಾಪಿಸಿದ್ದ ಕಂಟ್ರಿ ಬಂದೂಕು ತಯಾರಿಕೆ ಮತ್ತು ಮಾರಾಟ ಜಾಲವೊಂದನ್ನು ಭೇಧಿಸಿರುವ ಖಾನಾಪುರ ಠಾಣೆ ಪೊಲೀಸರು ಒಟ್ಟು 13 ಜನರನ್ನು ಬಂಧಿಸಿ, 9 ಕಂಟ್ರಿ ಬಂದೂಕು, 48 ಜೀವಂತ ಕಾಡತೊಸು ಹಾಗೂ ತಯಾರಿಕೆ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಖಾನಾಪುರ ತಾಲೂಕಿನ …
Read More »ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆ
ಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಜೂನ್ 1ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ. ಮೇ 29ರಂದು ಉದ್ಯಮಬಾಗದ ಚೆಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಸಭಾಭವನದಲ್ಲಿ ನಡೆದ ಎಲ್ಲಾ ವ್ಯಾಪಾರ ಮತ್ತು ಕೈಗಾರಿಕಾ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜಂಟಿ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸರ್ಕಾರದ ಕ್ರಮದ …
Read More »ತಂಬಾಕು ದೇಹದ ಪ್ರತಿಯೊಂದು ಅಂಗವನ್ನು ಹಾನಿಗೊಳಿಸುತ್ತದೆ: ಡಾ. ಕರ್ನಲ್ ಎಂ ದಯಾನಂದ
ಬೆಳಗಾವಿ: ತಂಬಾಕು ಬಳಕೆ ಕೇವಲ ಶ್ವಾಸಕೋಶ ಕ್ಯಾನ್ಸರ್ಗೆ ಮಾತ್ರ ಕಾರಣವಾಗುವುದಿಲ್ಲ. ಅದು ಮಾನವ ದೇಹದ ಪ್ರತಿಯೊಂದು ಅಂಗವನ್ನೂ ವಿಭಿನ್ನ ರೀತಿಯಲ್ಲಿ ಹಾನಿಗೊಳಿಸುತ್ತದೆ. ಹೃದಯ, ಯಕೃತ್, ಮೆದುಳು ಸೇರಿದಂತೆ ಎಲ್ಲಾ ಅಂಗಾಂಗಗಳ ಮೇಲೂ ಹಾನಿಯನ್ನುಂಟು ಮಾಡುತ್ತದೆ. ಆದ್ದರಿಂದ ತಂಬಾಕು ಸೇವನೆ ಜೀವನದ ಮೇಲೆ ದುಷ್ಪರಿಣಾಮ ಬೀರಬಲ್ಲದು ಎಂದು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. ಕರ್ನಲ್ ಎಂ ದಯಾನಂದ ಅವರಿಂದಿಲ್ಲಿ …
Read More »ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ
ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಪ್ರತಿ ಹನಿಗೆ ಅಧಿಕ ಬೆಳೆ ಯೋಜನೆಯಡಿ ಹನಿ ನೀರಾವರಿ ವಿವಿಧ ರೀತಿಯ ತುಂತುರು ನೀರಾವರಿ ಘಟಕಕ್ಕೆ ಸಹಾಯಧನ ಲಭ್ಯವಿದ್ದು, ಕಾಫಿ, ಟೀ, ರಬ್ಬರ್ ಹಾಗೂ ಅಡಿಕೆ ಬೆಳೆಗಳನ್ನು ಹೊರತು ಪಡಿಸಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ಹನಿ ನೀರಾವರಿ ಅಳವಡಿಸಿ ಸಹಾಯಧನ ನೀಡಲಾಗುತ್ತಿದೆ. ಹನಿ ನೀರಾವರಿ ಮತ್ತು ತುಂತುರು ನೀರಾವರಿ …
Read More »ಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪ
ಬೆಂಗಳೂರು: ಡಿಸಿಎಂಗಳ ಹುದ್ದೆಬೇಡವೇ ಬೇಡ ಎಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಭಾವಿ ಸಿಎಂ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಪ್ರಸ್ತಾಪ ಇಟ್ಟಿದ್ದಾರೆ. ನೂತನ ಕ್ಯಾಬಿನೆಟ್ಗೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಈ ಪ್ರಸ್ತಾಪ ನಡೆದಿದೆ. ದಲಿತ, ಲಿಂಗಾಯತ, ಅಲ್ಪಸಂಖ್ಯಾತ, ಓಬಿಸಿ ಸಮುದಾಯಗಳಿಗೆ ಮಣೆ ಹಾಕಬೇಕು. ಯಾರಿಗಾದರೂ ಇಬ್ಬರಿಗೆ ಕೊಟ್ಟರೂ ಅಸಮಾಧಾನ ಸಾಧ್ಯತೆಯಿದೆ. ನಾಲ್ಕು ಡಿಸಿಎಂ ಸೃಷ್ಟಿ ಮಾಡಿದ್ರೆ ಹಾಸ್ಯಾಸ್ಪದ ಎಂದು ಹೈಕಮಾಂಡ್ ಬಳಿ ಪ್ರಸ್ತಾಪವಿಟ್ಟಿದ್ದಾರೆ. ಈ ಕುರಿತು ಸೋಮವಾರ ರಾಹುಲ್ …
Read More »ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ
ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ. ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ. ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್ ಮುನೀರ್ ಅಹಮದ್ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್ ಮಾಡಿ ವಿಕೃತಿ ಮೆರೆದಿರುವ ಅಮಾನುಷ …
Read More »ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ
ಶಿವಮೊಗ್ಗ: ಜಿಲ್ಲೆಯ ಹಲವೆಡೆ ಮರಳು ಮತ್ತು ಕ್ವಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು , ಮರಳು ಗಣಿಗಾರಿಕೆ ಹಾಗೂ ಸಂಗ್ರಹವನ್ನ ಪರಿಶೀಲಿಸಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಸಂಬಂಧ ಸಾಲು ಸಾಲು ದೂರುಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ, ನಿಂಬೆಗೊಂದಿ, ಮಂಗೋಟೆ, ಸನ್ಯಾಸಿ ಕೊಡಮಗ್ಗಿ, ಹಾಡೋನಹಳ್ಳಿ, ಕೂಡಲಿ, ಮಂಡುವಳ್ಳಿ, ತೂದೂರು, ದಬ್ಬಣಗದ್ದೆ, ಹೊಸನಗರ ತಾಲೂಕಿನ ಹರಿದ್ರಾವತಿ, ಸಂಪಕಟ್ಟೆ ಮತ್ತು ಸಾಗರದ ಆವಿನಹಳ್ಳಿಯ ಕ್ವಾರಿಗಳ …
Read More »
Laxmi News 24×7