ಬೆಳಗಾವಿ: ಖಾನಾಪುರ ತಾಲೂಕಿನ ಶಾಹುನಗರದಲ್ಲಿ ಡೊಂಬರ ಸಮುದಾಯದ ಸ್ಮಶಾನ ಭೂಮಿ ಕಬಳಿಸುವ ಹುನ್ನಾರ ನಡೆದಿದ್ದು, ಇದನ್ನು ಉಳಿಸಿಕೊಡುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿಯಲ್ಲಿ ಆಗಮಿಸಿದ ನಿವಾಸಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ರಿಗೆ ಮನವಿ ಸಲ್ಲಿಸಿದರು. ಖಾನಾಪುರ ತಾಲೂಕಿನ ಶಾಹುನಗರದ ಸರ್ವೆ ನಂ 39/ಎ1 ರಲ್ಲಿ ಬರುವ …
Read More »Yearly Archives: 2026
ಮಲ್ಲಮ್ಮ ಉತ್ಸವ ಹಿನ್ನೆಲೆ ಬೆಳವಡಿಯಲ್ಲಿ ಮದ್ಯ ಮಾರಾಟ ನಿಷೇಧ
ಬೆಳಗಾವಿ: ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಫೆ.28ರಿಂದ ಬೆಳವಡಿ ಮಲ್ಲಮ್ಮ ಉತ್ಸವ ಹಮ್ಮಿಕೊಂಡಿರುವ ಹಿನ್ನೆಲೆ ಫೆ.27ರ ಸಂಜೆ 6ರಿಂದ ಮಾ.2ರ ಬೆಳಗ್ಗೆ 6ರವರೆಗೆ ಬೆಳವಡಿ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯ, ಬಾರ್ ಅಂಗಡಿಗಳನ್ನು ಬಂದ್ ಮಾಡಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
Read More »ಟ್ರಂಪ್ ಟ್ಯಾರಿಫ್ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್ ಸುಪ್ರೀಂ ಕೋರ್ಟ್ ಚಾಟಿ
ವಾಷಿಂಗ್ಟನ್: ತನ್ನ ವಿರುದ್ಧ ತಿರುಗಿಬಿದ್ದವರ ಮೇಲೆ ಸುಂಕದ ಅಸ್ತ್ರ ಪ್ರಯೋಗಿಸುತ್ತಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಅಮೆರಿಕದ ಸುಪ್ರೀಂ ಕೋರ್ಟ್ನಲ್ಲಿ ಬಹುದೊಡ್ಡ ಹಿನ್ನಡೆಯಾಗಿದೆ. ಟ್ರಂಪ್ ವಿಧಿಸಿರುವ ವ್ಯಾಪಕ ಜಾಗತಿಕ ಸುಂಕಗಳನ್ನ ಅಮೆರಿಕ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಕಪಾಳಮೋಕ್ಷ ಮಾಡಿದಂತಾಗಿದೆ. ಹೌದು. ಪ್ರಪಂಚದಾದ್ಯಂತ ದೇಶಗಳ ಮೇಲೆ ವಿಧಿಸಿರುವ ಸುಂಕಗಳು ಕಾನೂನು ಬಾಹಿರವಾಗಿದೆ. ಡೊನಾಲ್ಡ್ ಟ್ರಂಪ್ ಅವರಿಗೆ ಸುಂಕ ವಿಧಿಸಲು ಕಾನೂನುಬದ್ಧ ಅಧಿಕಾರವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರಿದ್ದ ಪೀಠ …
Read More »ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ
ಕೊಪ್ಪಳ: ನರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಸೂಚನೆ ನೀಡಿದರು. ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಅವರು …
Read More »ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ
ಬಾಗಲಕೋಟೆ: ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಿದ್ದಾರೆ. ಕಿಲ್ಲಾ ಓಣಿಯಲ್ಲಿದ್ದ ಮಸೀದಿಯಿಂದಲೇ ಕಲ್ಲು-ಚಪ್ಪಲಿ ತೂರಿ ಬಂದಿದ್ದು, ಭದ್ರತೆಗೆ ನಿಂತಿದ್ದ ಎಸ್ಪಿ ಸಿದ್ಧಾರ್ಥ್ ಗೋಯೆಲ್ ಅವರ ಮೇಲೆ ಬಿದ್ದಿದೆ. ಅಲ್ಲದೆ, ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬಾತನ ತಲೆಗೆ ಕಲ್ಲುಬಿದ್ದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಸ್ಲಿಂ ಯುವಕರ ಪುಂಡಾಟದ ಮಧ್ಯೆ ತರಕಾರಿ ಮಾರುಕಟ್ಟೆ ಬಳಿ ತಳ್ಳೋಗಾಡಿಗಳಿಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಚ್ಚಿದ್ರು. …
Read More »ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ
ರಾಯಚೂರು: ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ನಿಮ್ಮ ಸರ್ಕಾರ ಬಂದಾಗಲೇ ಯಾಕೇ ಹೀಗಾಗುತ್ತೆ ಎಂದು ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದರು. ಈ ವೇಳೆ, ಬಾಂಬ್ ಹಾಕಿದವರನ್ನು ಬ್ರದರ್ಸ್ ಅಂತೀರಿ. ಗಣೇಶನ ವಿಗ್ರಹಕ್ಕೂ ಮಸೀದಿಯಿಂದ ಕಲ್ಲು ಬಿತ್ತು. ಶಿವಾಜಿ ಮೆರವಣಿಗೆಯಲ್ಲೂ ಮಸೀದಿಯಿಂದ ಕಲ್ಲು ಬೀಳುತ್ತೆ. ಕಲ್ಲು ಹೊಡೆದವರನ್ನ ಅರೆಸ್ಟ್ ಮಾಡೊದಿಲ್ಲ. ಅಕ್ರಮ ಮಸೀದಿ ಎಂದವರ ಮೇಲೆ …
Read More »ವೇದವಿದ್ಯಾ ವಿಹಾರ ಗುರುಕುಲಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ರಾಮನಗರ: ಇಲ್ಲಿನ ಬನ್ನಿಕುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ವೇದವಿದ್ಯಾ ವಿಹಾರ ಗುರುಕುಲಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ ನೆರವೇರಿಸಿದರು. ವೇದ ಉಪನ್ಯಾಸದ ಗುರುಕುಲಕ್ಕೆ ಗುದ್ದಲಿಪೂಜೆ ನೆರವೇರಿಸಿ ಹೋಮ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಸ್ಥಳೀಯರಿಗೆ ಗುರುಕುಲದ ವತಿಯಿಂದ ಸೀರೆ ವಿತರಣೆ ಮಾಡಿದ್ರು. ಈ ವೇಳೆ ಕೇಂದ್ರ ಸಚಿವರಿಗೆ ಸಂಸದ ಡಾ.ಮಂಜುನಾಥ್, ಪತ್ನಿ ಅನುಸೂಯ ಮಂಜುನಾಥ್ ಸೇರಿ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ರು. ಬಳಿಕ ಬೆಂಗಳೂರು ಹೊರವಲಯದ STRR ರಿಂಗ್ ರಸ್ತೆ …
Read More »ನಕಲಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟಿ – ನಾಗೇಂದ್ರ ಮನೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ
ಬಳ್ಳಾರಿ: ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ ವಿತರಣೆ ತಡೆಗಟ್ಟಲು ಒತ್ತಾಯಿಸಿ ಬಳ್ಳಾರಿ ಗ್ರಾಮೀಣ ಶಾಸಕ ಬಿ ನಾಗೇಂದ್ರ ಮನೆ ಮುಂದೆ ವಾಲ್ಮೀಕಿ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಭಾರೀ ಸಂಖ್ಯೆ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಆಗುತ್ತಿವೆ. ಎಸ್ಟಿ ಸಮುದಾಯದ ಶಾಸಕರು ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕಾಂಗ ಸಭೆಯಲ್ಲಿ ನಕಲಿ …
Read More »ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್ ಆಕ್ಷೇಪ
ಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ ಮಾಡಿದ್ದರು. ಈಗ ಅವ್ರೇ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಿರೋದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ) ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ (Media Restriction) ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದರು. ವಿಧಾನಸೌಧದಲ್ಲಿ …
Read More »ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿರೋಧ – ಮಾಧ್ಯಮ ಪ್ರತಿನಿಧಿಗಳಿಂದ ಮೌನ ಧರಣಿ
ಬೆಂಗಳೂರು: ಭದ್ರತೆಯ ನೆಪವೊಡ್ಡಿ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಭಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನ ವಿರೋಧಿಸಿ ಮಾಧ್ಯಮ ಪ್ರತಿನಿಧಿಗಳಿಂದು ಮೌನ ಧರಣಿ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಕುಳಿತು ಮುಖಕ್ಕೆ ಕಪ್ಪು ಮಾಸ್ಕ್ ಧರಿಸಿ ಮೌನ ಧರಣಿ ನಡೆಸಿದರು. ಅಲ್ಲದೇ ಮಾಧ್ಯಮ ಸ್ವಾತಂತ್ರ್ಯ ರಕ್ಷಿಸಲು, ಪ್ರಜಾಸತ್ತಾತ್ಮಕ ಮೌಲ್ಯಗಳನ್ನ ಎತ್ತಿಹಿಡಿಯಲು ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವ ನಿರ್ಬಂಧಗಳನ್ನ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಸ್ಥಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ (KV …
Read More »
Laxmi News 24×7