ಗದಗ: ಗಂಡ-ಹೆಂಡತಿ ಜಗಳ ಕೆಲವೊಮ್ಮೆ ದೊಡ್ಡ ಅವಾಂತರಕ್ಕೂ ಕಾರಣವಾಗುತ್ತದೆ. ಗದಗ ಜಿಲ್ಲೆಯಲ್ಲಿ ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಜೀರ್ ಸಾಬ್ ಟವರ್ ಏರಿದ ವ್ಯಕ್ತಿ. ನಜೀರ್ ಸಾಬ್ ಮತ್ತು ಅವರ ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಈ ಬಾರಿಯೂ ಜಗಳವಾದ ಬಳಿಕ …
Read More »Yearly Archives: 2026
ಪಕ್ಕದ್ಮನೆ ಹುಡುಗಿ ಜೊತೆ ಪತಿ ಲವ್ವಿಡವ್ವಿ – ಪ್ರಶ್ನಿಸಿದ್ದಕ್ಕೆ ರಾಡ್ನಿಂದ ಹೊಡೆದು ಮಾರಣಾಂತಿಕ ಹಲ್ಲೆ, ಪತ್ನಿ ಸಾವು
ಬೀದರ್: ಪಕ್ಕದ್ಮನೆ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ರಾಡ್ನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಕೊಲೆಯಾದ ದುರ್ದೈವಿ ಪತ್ನಿ. ಆರೋಪಿ ಪತಿ ಭಗವತ್ ಜ್ಞಾನೇಶ್ವರ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಸಂಜನಾ ಹಾಗೂ ಭಗವತ್ 2 ವರ್ಷದ …
Read More »ಪತಿಯ ಗೆಳೆಯನೊಂದಿಗೆ ಓಡಿಹೋದ ಪತ್ನಿ – ಮಹಿಳೆಯ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ
ಬೆಳಗಾವಿ: ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಹೇಯ ಕೃತ್ಯ ಬೆಳಕಿಗೆ ಬಂದಿದೆ. ವಿವಾಹಿತಯೊಬ್ಬಳ ಜೊತೆ ಯುವಕನೊಬ್ಬ ಓಡಿಹೋದ ಹಿನ್ನೆಲೆ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಯುವಕನ ಮನೆ ಧ್ವಂಸಗೊಳಿಸಿದ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ವರ್ಷ ಬಸಪ್ಪ ನಾಯಕ ಜೊತೆ ನಾಗವ್ವ ವಿವಾಹವಾಗಿದ್ದರು. ಬಸಪ್ಪ ಮತ್ತು ಯಲ್ಲಪ್ಪ ಇಬ್ಬರು ಆತ್ಮೀಯ ಸ್ನೇಹಿತರಾಗಿದ್ದರು. ಮೂವರು ಬೆಳಗಾವಿಯ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಯಲ್ಲಪ್ಪ ಹಾಗೂ …
Read More »ಗೋಕಾಕ್ ತಾಪಂನಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಗೋಕಾಕ್ ತಾಲೂಕು ಪಂಚಾಯತ್ನಲ್ಲಿ ಇಂದು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ವಹಿಸಿ, ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಪ್ರಗತಿಯನ್ನು ಪರಿಶೀಲಿಸಿದರು. ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವಂತೆ ಶಾಸಕ ರಮೇಶ್ ಜಾರಕಿಹೊಳಿ …
Read More »ಪಾಗಲ್ ಪ್ರೇಮಿ ನಾಗೇಂದ್ರನಿಗೆ ನಾಡಬಾಂಬ್ ತಯಾರಿಸಿಕೊಟ್ಟ ಶಂಕೆ – ಮೂವರು ವಶಕ್ಕೆ
ಕಾರವಾರ: ತುಮಕೂರಿನಲ್ಲಿ ನಾಡಬಾಂಬ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ ನಾಗೇಂದ್ರನ ಪ್ರಕರಣಕ್ಕೆ ಸಂಬಂಧಿಸಿದಂತೆ 60 ಜನರನ್ನು ಅಂಕೋಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದರಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹೊನ್ನಾವರದ ಚಂದಾವರ ಮೂಲದ ಓರ್ವ ಹಾಗೂ ಸರಳೆಬೈಲಿನ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಾಗೇಂದ್ರನಿಗೆ ನಾಡಬಾಂಬ್ ತಯಾರಿಸಿ ಕೊಟ್ಟಿರುವ ಶಂಕೆಯ ಮೇಲೆ ವಶಕ್ಕೆ ಪಡೆಯಲಾಗಿದೆ. ಸ್ನೇಹಿತರು ಹಾಗೂ ಸಂಬಂಧಿಗಳ ವಿಚಾರಣೆ ವೇಳೆ ಮೂವರಿಂದ ನಾಡಬಾಂಬ್ ಖರೀದಿಸಿರುವುದು ದೃಢಪಟ್ಟಿದೆ. ಬಾಂಬ್ ಖರೀದಿ ವೇಳೆ …
Read More »ಕ್ಯಾಬ್ ಡ್ರೈವರ್ ಲವ್ ಜಿಹಾದ್ ಉರುಳಿಗೆ ಬಲಿಯಾದಳಾ ಫಿಜಿಯೋಥೆರಪಿ ವೈದ್ಯೆ?! ಸುಂದರಿ ಸುರಭಿ ದುರಂತ ಅಂತ್ಯ!
ಅಂದ-ಚಂದಕ್ಕೆ ಕೊರತೆಯಿರದ, ಹೆತ್ತವರ ಪಾಲಿನ ಆಶಾಕಿರಣವಾಗಿದ್ದ ಈಕೆ ವೃತ್ತಿಯಿಂದ ಫಿಜಿಯೋಥೆರಪಿ ವೈದ್ಯೆ. ಇಂಚಿಂಚೂ ಬದುಕನ್ನು ಪ್ರೀತಿಸಬೇಕಿದ್ದ ಯುವತಿ, ಇಂದು ಹೋಂ ಸ್ಟೇ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ! ಹೌದು, ಚಿಕ್ಕಬಳ್ಳಾಪುರ ಮೂಲದ ವೈದ್ಯೆ ಸುರಭಿ ಸಾವು ಸದ್ಯ ಹತ್ತಾರು ಅನುಮಾನಗಳಿಗೆ ಕಾರಣವಾಗಿದ್ದು, ಆಕೆಯ ಪ್ರಿಯಕರ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. 🔹 ಟ್ರೇನಿಂಗ್ ವೇಳೆ ಶುರುವಾದ ಲವ್ ಸ್ಟೋರಿ! ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದ ಸುಲ್ತಾನ ಪೇಟೆಯ ನಿವಾಸಿಯಾಗಿದ್ದ ಸುರಭಿ, ಮುದ್ದೇನಹಳ್ಳಿ …
Read More »ಹೊತ್ತಿ ಉರಿದ ನಂದಿನಿ ಮಿಲ್ಕ್ ಪಾರ್ಲರ್ – ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ
ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಆಘಾತದಿಂದ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಮೃತ ದುರ್ದೈವಿ. ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮಿಲ್ಕ್ ಪಾರ್ಲರ್ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ವೆಂಕಟೇಶ್ ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸಿದ್ದಾರೆ. …
Read More »ರಾಮದೇವ್ ಹೋಟೆಲ್ ಬಳಿ ಕ್ಷಣಾರ್ಧದಲ್ಲೆ ಸುಟ್ಟು ಕರಕಲಾದ ಕಾರ್
ಬೆಳಗಾವಿ: ಕುಂದಾನಗರಿ ಬೆಳಗಾವಿಯ ರಾಮದೇವ್ ಹೋಟೆಲ್ ರಸ್ತೆ ಮೇಲೆ ಚಲಿಸುತ್ತಿದ್ದ ಕಾರ್ ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೆ ಕಾರು ಸುಟ್ಟು ಕರಕಲಾಗಿದೆ. ನಗರದ ರಾಮದೇವ್ ಹೋಟೆಲ್ ಎದುರಿನ ಡಿ-ಮಾರ್ಟ್ ಕಾರ್ನರ್ ಕಡೆಗೆ ಹೋಗುವ ರಸ್ತೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಕೇವಲ 10 ರಿಂದ 15 ನಿಮಿಷಗಳಲ್ಲೇ ಇಡೀ ಸ್ವಿಫ್ಟ್ ಕಾರು ಧಗಧಗನೆ ಹೊತ್ತಿ ಉರಿದು ಭಸ್ಮವಾಗಿದೆ. ಕಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಎಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡಿದೆ …
Read More »DNA ಟೆಸ್ಟ್ ಮಾಡಿಸುವಂತೆ ಪತಿ ಮನೆಯವರಿಂದ ಕಿರುಕುಳ – ಮನನೊಂದು 5 ತಿಂಗಳ ಗರ್ಭಿಣಿ ಆತ್ಮಹತ್ಯೆ
ಹೈದರಾಬಾದ್: ಗರ್ಭದಲ್ಲಿರುವ ಮಗುವಿನ ಪಿತೃತ್ವವನ್ನು ಶಂಕಿಸಿ, ಡಿಎನ್ಎ ಪರೀಕ್ಷೆ ನಡೆಸುವಂತೆ ಪತಿ ಹಾಗೂ ಅತ್ತೆ ನಿರಂತರ ಕಿರುಕುಳ ನೀಡಿದ ಹಿನ್ನೆಲೆ ಐದು ತಿಂಗಳ ಗರ್ಭಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಮೇದಕ್ ಜಿಲ್ಲೆಯ ಅಲ್ಲಾದುರ್ಗ್ದ ಗಡಿಪೆದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸುಶ್ಮಿತಾ (23) ಎಂದು ಗುರುತಿಸಲಾಗಿದೆ. 18 ತಿಂಗಳ ಹಿಂದೆಯಷ್ಟೇ ಸುಶ್ಮಿಕಾ ಹಾಗೂ ಜಿ.ಅಭಿಲಾಷ್ ಮದುವೆಯಾಗಿದ್ದರು. ಸದ್ಯ ಸುಶ್ಮಿತಾ 5 ತಿಂಗಳ ಗರ್ಭಿಣಿಯಾಗಿದ್ದರು …
Read More »ನೀಟ್ ಪೇಪರ್ ಲೀಕ್: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ನಿಂದ ಬೃಹತ್ ಪಂಜಿನ ಮೆರವಣಿಗೆ
ಬೆಳಗಾವಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕೆಂದು ಆಗ್ರಹಿಸಿ ಭಾನುವಾರ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ನಡೆಸಿ ತೀವ್ರ ಪ್ರತಿಭಟನೆ ದಾಖಲಿಸಲಾಯಿತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ನೂರಾರು ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು …
Read More »
Laxmi News 24×7