Breaking News

Yearly Archives: 2026

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್ – ಬಸ್‌ಪಾಸ್ ಶುಲ್ಕ ಮರುಪಾವತಿ; ಜೂ.29 ರಿಂದ ಅರ್ಜಿ ಪ್ರಕ್ರಿಯೆ ಶುರು

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಈಗಾಗಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನ ಮರುಪಾವತಿ ಮಾಡಲು 4 ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿತ್ತು. ಆದಾಗ್ಯೂ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಸಾರಿಗೆ ನಿಗಮಗಳು ನಿಯಮಾನುಸಾರ ವಿದ್ಯಾರ್ಥಿಗಳಿಂದ ಪಡೆದುಕೊಂಡಿದ್ದ ಶುಲ್ಕವನ್ನ …

Read More »

ಮದ್ವೆಗೆ ಒಪ್ಪದೇ ಅವಾಯ್ಡ್‌ ಮಾಡ್ತಿದ್ದ ಪ್ರೇಯಸಿ – ಊಟಕ್ಕೆ ಕರೆದು ಕತ್ತುಕೊಯ್ದು ಕೊಂದ ಪ್ರಿಯಕರ

ಬೆಂಗಳೂರು: ಮನೆಯಲ್ಲಿ ಪ್ರೀತಿ ವಿಚಾರ ತಿಳಿದಿದ್ದರೂ ಮದುವೆಗೆ ಒಪ್ಪದೇ ಅವಾಯ್ಡ್‌ ಮಾಡುತ್ತಿದ್ದ ಪ್ರೇಯಸಿಯನ್ನು, ಪ್ರಿಯಕರನೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್‌ಲೈನ್‌ ರಸ್ತೆಯಲ್ಲಿ ನಡೆದಿದೆ. ಭಾನುವಾರ (ಜೂ.28) ರಾತ್ರಿ 9:30 ರ ಸುಮಾರಿಗೆ ಘಟನೆ ನಡೆದಿದೆ. ಅಂಜಲಿ (23) ಕೊಲೆಯಾದ ಯುವತಿ. ರಾಜೀವ್ ಪ್ರೇಯಸಿಯನ್ನ ಕೊಂದ ಪ್ರಿಯಕರ. ಪ್ರೇಯಸಿಯನ್ನ ಊಟಕ್ಕೆ ಕರೆದಿದ್ದ ಪ್ರಿಯಕರ, ಮದುವೆ ವಿಚಾರ ಪ್ರಸ್ತಾಪಿಸಿ ಗಲಾಟೆ ಮಾಡಿದ್ದಾನೆ. ಈ …

Read More »

ಕಬ್ಬು ರಕ್ಷಿಸಲು ನೀರಿಗಾಗಿ ಹೋರಾಟ – ಇಂದು ಕಾವೇರಿ ನಿಗಮದ ಕಚೇರಿಗೆ ಮಂಡ್ಯ ರೈತರಿಂದ ಮುತ್ತಿಗೆ

ಮಂಡ್ಯ: ಮುಂಗಾರು ಆರಂಭದಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. ಕಬ್ಬು ರಕ್ಷಣೆಗಾಗಿ ನಾಲೆಗೆ ನೀರು ಬಿಡುವಂತೆ ಆಗ್ರಹಿಸಿ ಇಂದು ಕಾವೇರಿ ನೀರಾವರಿ ನಿಗಮದ ಕಚೇರಿ ರೈತರು ಮುತ್ತಿಗೆ ಹಾಕಲಿದ್ದಾರೆ. ಸಕಾಲಕ್ಕೆ ಮಳೆಯಾಗದೇ, ಇತ್ತ ನಾಲೆಯಲ್ಲಿಯೂ ನೀರಿಲ್ಲದೇ ಕಬ್ಬು ಒಣಗುತ್ತಿದೆ. ಹೀಗಾಗಿ ಬೆಳೆದಿರುವ ಕಬ್ಬು ರಕ್ಷಣೆಗಾಗಿ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ, ಮಂಡ್ಯ ರೈತರು ಇಂದು ಕಾವೇರಿ ನೀರಾವರಿ ನಿಗಮದ ಕಚೇರಿಗೆ ಹಾಕಲಿದ್ದಾರೆ. ಈ ವೇಳೆ ರೈತರು ಕೆಆರ್‌ಎಸ್‌ನಿಂದ ನಾಲೆಗಳಿಗೆ …

Read More »

ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ : ಡಾ.ಬಸವರಾಜ ಜಗಜಂಪಿ

ರಂಗಸೃಷ್ಟಿ ಸಾಂಸ್ಕೃತಿಕ ಸಂಘ (ರಿ), ಬೆಳಗಾವಿ ವತಿಯಿಂದ ಡಾ. ಪಿ. ಜಿ. ಕೆಂಪಣ್ಣವರ ಅವರ ‘ಜಿನ ದೀವಿಗೆ’ ಹಾಗೂ ಶಿರೀಷ ಜೋಶಿ ಅವರ ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದು ಬಿಡುಗಡೆಯಾಗಿರುವ ಎರಡೂ ಕೃತಿಗಳು ಅತ್ಯಂತ ತಳಸ್ಪರ್ಶಿಯಾಗಿ ಬರೆದವುಗಳಾಗಿವೆ. ಬಹಳಷ್ಟು ಅಧ್ಯಯನ ಮಾಡಿ ಬರೆದವುಗಳಾಗಿವೆ ಎಂದು ಅವರು ಹೇಳಿದರು. .ಧರ್ಮ ಸಹಿಷ್ಣುತೆ ಎಂದರೆ ಏನು ಎನ್ನುವುದನ್ನು ಜೈನ ಧರ್ಮೀಯರಿಂದ ಕಲಿತುಕೊಳ್ಳಬೇಕು ಎಂದ ಅವರು, ಕನ್ನಡ …

Read More »

ವಿಷ ತುಂಬಿದ 14,900 ಕ್ಯಾಪ್ಸೂಲ್ ಜೊತೆ ಪುಣೆಯಲ್ಲಿ ಓರ್ವನ ಬಂಧನ….

ಮುಂಬೈ: ಮೊಹರಂ ಅಂದ್ರೆ ಮಹಮದಿಯರ ಮೊದಲ ತಿಂಗಳು. ಇಲ್ಲಿಂದ ಇಸ್ಲಾಂ ವರ್ಷ ಆರಂಭವಾಗುತ್ತದೆ. ಈ ಹಬ್ಬಕ್ಕೆ ಚಾರಿತ್ರಿಕ ಮತ್ತು ಧಾರ್ಮಿಕ ಹಿನ್ನೆಲೆಯೂ ಇದೆ. ಈ ತಿಂಗಳನ್ನ ಇಸ್ಲಾಂನಲ್ಲಿ ಹೊಸ ವರ್ಷ ಅಂತಾ ಆಚರಣೆ ಮಾಡಲಾಗುತ್ತದೆ. ಅದಕ್ಕಾಗಿ ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಪುಣ್ಯದ ಕೆಲಸಗಳನ್ನ ಕೈಗೊಳ್ಳುತ್ತಾರೆ. ಆದ್ರೆ ಈ ಸಂರ್ಭದಲ್ಲಿ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು ರೂಪಿಸಿದ್ದ ವ್ಯಕ್ತಿಯೊಬ್ಬ ಮುಂಬೈ ಪೊಲೀಸರಿಗೆ  ಸಿಕ್ಕಿಬಿದ್ದಿದ್ದಾನೆ. ಮುಂಬೈ: ಮುಂಬೈ ನಗರದಲ್ಲಿ ಮುಹರಂ ಮೆರವಣಿಗೆಯ ಸಂದರ್ಭದಲ್ಲಿ …

Read More »

ಕಿಂಚಿತ್ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆ

ಬೆಂಗಳೂರು: ಪಾನ್ ಮಸಾಲಾ ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಹಾಗೂ ಗುಟ್ಕಾಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ …

Read More »

ನನ್ನ ರಾಜಕೀಯ ಮುಗಿಯಿತು.. ನೀವು ಮೈ ಮರೆತರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

ಮೈಸೂರು: ನನ್ನ ರಾಜಕೀಯ ಜೀವನ ಮುಗಿದಿದೆ. ನಿಮ್ಮ ರಾಜಕೀಯ ಭವಿಷ್ಯ ಉತ್ತಮವಾಗಿರಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ. ಇಲ್ಲದೆ ಇದ್ದರೆ ನಿಮ್ಮ ರಾಜಕೀಯ ಮಾರಣಹೋಮ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಮೈಸೂರಿನಲ್ಲಿ ನಡೆದ SIR ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸುವ ಚುನಾವಣಾ ಆಯೋಗ ಇಲ್ಲದಂತಾಗಿದೆ. ಬಿಜೆಪಿ ನೇತೃತ್ವದಲ್ಲಿ ದುರಾಡಳಿತ ನಡೆಯುತ್ತಿದೆ ಎಂದು ಆರೋಪಿಸಿದರು. ಸರ್ವಾಧಿಕಾರದಲ್ಲಿ ನಂಬಿಕೆ ಹೊಂದಿರುವ ಬಿಜೆಪಿ, ದೇಶದಲ್ಲಿ …

Read More »

ನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌ – ಬಾಯಿ ಚಪ್ಪರಿಸಿ ತಿಂದ ಸಿದ್ರಾಮಯ್ಯ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಇಂದು ಭರ್ಜರಿ ಬಾಡೂಟ ಸವಿದರು. ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ಎಸ್‌ಐಆರ್ ಕುರಿತ ಕಾಂಗ್ರೆಸ್ ಪಕ್ಷದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬಳಿಕ ಕಾಂಗ್ರೆಸ್‌ನ ನಾಯಕರಿಗೆ ತಮ್ಮ ಮನೆಯಲ್ಲೇ ಬಾಡೂಟದ ವ್ಯವಸ್ಥೆ ಮಾಡಿದ್ದರು. ನಾಟಿಕೋಳಿ ಸಾರು, ಮುದ್ದೆ, ಚಿಕನ್‌ ಚಾಪ್ಸ್‌, ಪಲಾವ್‌ ಹಾಗೂ ಸಸ್ಯಾಹಾರದ ಊಟ ವ್ಯವಸ್ಥೆಯನ್ನೂ ಮಾಡಿದ್ದರು. ಮೈಸೂರಿನ …

Read More »

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ : ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಎನ್‌ಡಿಟಿವಿಗೆ ವಿಶೇಷ ಸಂದರ್ಶನ ನೀಡಿದ ಅವರು, ತಾವೇನೂ ದೇಶದಿಂದ ಶಾಶ್ವತವಾಗಿ ಓಡಿಬಂದಿಲ್ಲ. ಅಲ್ಲಿನ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಮತ್ತು ತಮ್ಮ ಅವಾಮಿ ಲೀಗ್ ಪಕ್ಷದ ಕಾರ್ಯಕರ್ತರಲ್ಲಿ ಧೈರ್ಯ ತುಂಬಲು ಶೀಘ್ರದಲ್ಲೇ ಮರಳುವುದಾಗಿ ಅವರು ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿ ತಮಗೆ ಎದುರಾದ ಪರಿಸ್ಥಿತಿಯ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಮತ್ತು ವ್ಯವಸ್ಥಿತ ರಾಜಕೀಯ ಪಿತೂರಿ ಇತ್ತು …

Read More »

ತೊಡೆ ತಟ್ಟೋದು, ಪ್ರಚೋದನೆ ಕೊಡೋದು ತಪ್ಪು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ತೊಡೆ ತಟ್ಟೋದು, ಪ್ರಚೋದನೆ ಕೊಡೋದು ತಪ್ಪು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ, ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದವರ ವಿರುದ್ಧ ಖರ್ಗೆ ಅಸಮಾಧಾನ ಹೊರಹಾಕಿದರು. ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್‌ನವರಿಗೆ ಅಸ್ತಿತ್ವದ ಪ್ರಶ್ನೆ ಇದೆ. ಅದಕ್ಕೇ ಹೀಗೆಲ್ಲ ನಮ್ಮ ಮೇಲೆ ಟೀಕೆ ಮಾಡ್ತಿದ್ದಾರೆ. ಇದು ಇಷ್ಟು ದಿನ ಇರಲಿಲ್ಲ. ಡಿಕೆಶಿ ಅವ್ರು ಸಿಎಂ ಆದ ನಂತರ ಹೀಗೆಲ್ಲ ಮಾಡ್ತಿದ್ದಾರೆ. ಚಪ್ಪಲಿಯಲ್ಲಿ ಒಬ್ಬ …

Read More »