Breaking News

Yearly Archives: 2026

ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ-ಮಗ

ಬೆಂಗಳೂರು: ಸಾವಿನ ದವಡೆಯಿಂದ ತಾಯಿ ಹಾಗೂ ಮಗ ಅದೃಷ್ಟವಶಾತ್ ಪಾರಾಗಿರುವ ಎದೆ ಝಲ್ಲೆನಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಹಾಗೂ ಬಾಲಕ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಹಿಂದಿನಿಂದ ಪಿಕಪ್ ವಾಹನವೊಂದು ಬರುತ್ತಿತ್ತು. ಏಕಾಏಕಿ ಎರಡು ವಾಹನಗಳು ಸೈಡ್‌ನಿಂದ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ತಾಯಿ, ಮಗ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಇಬ್ಬರೂ ವಾಹನದ ಹಿಂಬದಿಯ ಟೈರ್ ಪಕ್ಕ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂದಲೆಳೆ ಅಂತರದಲ್ಲಿ ಸಾವಿನಿಂದ …

Read More »

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಟ್ವಿಸ್ಟ್ – ಗೆಳೆಯನಿಂದಲೇ ನಟಿಗೆ ಬಿಗ್ ಶಾಕ್

ಬೆಂಗಳೂರು: ನಟಿ ರನ್ಯಾ ರಾವ್  ಅವರ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಗೆಳೆಯನೇ ನಟಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ, ಡಿಆರ್‌ಐ ಅಧಿಕಾರಿಗಳ ಶೋಕಾಸ್ ನೋಟಿಸ್‌ಗೆ ಬೆದರಿದ ಸ್ಮಗ್ಲರ್ ಕೋರ್ಟ್ ಮುಂದೆ ತಪ್ಪೊಪ್ಪಿಗೆ ನೆಪದಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ಈ ಮೂಲಕ ರನ್ಯಾ ರಾವ್‌ಗೆ ಗೆಳೆಯನಿಂದಲೇ ಬಿಗ್ ಶಾಕ್ ಎದುರಾಗಿದೆ. ನಾನು ರನ್ಯಾ ರಾವ್‌ಗೆ ಚಿನ್ನದ ಬಿಸ್ಕೆಟ್ ನೀಡಿದ್ದು ನಿಜ. ಆದರೆ ನಾನು ಚಿನ್ನದ ಬಿಸ್ಕೆಟ್ ನೀಡಿದ್ದು …

Read More »

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ: ಕಾಂಗ್ರೆಸ್‌ ನಾಯಕನ ತಬ್ಬಿಕೊಂಡು ರಾಗಾ ವ್ಯಂಗ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಪ್ರಧಾನಿಯವರ ರಾಜತಾಂತ್ರಿಕತೆ ಎನ್ನುವಂತಾಗಿದೆ ಎಂದು ಟಾಂಗ್‌ ಕೊಟ್ಟಿದ್ದಾರೆ. ರಚನಾತ್ಮಕ ಕಾಂಗ್ರೆಸ್ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ರಾಹುಲ್, ಅವರಿಗೆ ಈ ಐಡಿಯಾ ಎಲ್ಲಿಂದ ಬಂತು ಅಂತ ನನಗೆ ಗೊತ್ತಿಲ್ಲ. ವಿಚಿತ್ರ ಐಡಿಯಾಗಳು ಜನರ ತಲೆಗೆ ಹೋಗುತ್ತವೆ. ಇದು ವಿದೇಶಾಂಗ ನೀತಿ ಅಂತ ಅವರು ಭಾವಿಸುತ್ತಾರೆ ಎಂದು ಹೇಳಿ …

Read More »

ತಮಿಳುನಾಡಿಗೆ ನೀರು ಬಿಟ್ರೆ ಮತ್ತೆ ಕರ್ನಾಟಕ ಬಂದ್ – ಸರ್ಕಾರಕ್ಕೆ ವಾಟಾಳ್ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಟ್ಟರೆ ಮತ್ತೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಸರ್ಕಾರಕ್ಕೆ ವಾಟಾಳ್ ನಾಗರಾಜ್  ಎಚ್ಚರಿಕೆ ನೀಡಿದ್ದಾರೆ. ಕಾವೇರಿ, ಕಳಸಬಂಡೂರಿ, ಮಹಾದಾಯಿ, ಮೇಕೆದಾಟು, ಉತ್ತರ ಕನ್ನಡ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಖಂಡ ಕರ್ನಾಟಕ ಬಂದ್ ಇಡೀ ರಾಜ್ಯಾದ್ಯಂತ ಚೆನ್ನಾಗಿ ಶಬ್ದ ಮಾಡಿದೆ. ಒಂದಿಲ್ಲೊಂದು ಪ್ರತಿಭಟನೆಯಾಗಿದೆ. ದೇಶ ಹಾಗೂ ರಾಜ್ಯದ ಗಮನ ಸೆಳೆದಿದೆ. ಇದಕ್ಕೆ ಜನರಿಗೆ ಅಭಿನಂದನೆ …

Read More »

ರಾಜ್ಯದ ಇತರೆಡೆ ‘ಬಿ’ ಖಾತಾ ನಿವೇಶನಕ್ಕೆ ಎ ಖಾತೆ: ಸರ್ಕಾರ ಬಿ ಖಾತಾ ಆಸ್ತಿ ತೆರಿಗೆ ಪಾವತಿ ಕಡ್ಡಾಯ

ಬೆಂಗಳೂರು: ರಾಜ್ಯಾದ್ಯಂತ ನಗರ ಪ್ರದೇಶಗಳ ವ್ಯಾಪ್ತಿಗಳಲ್ಲಿನ ನಿವೇಶನಗಳಿಗೂ ‘ಬಿ’ ಖಾತಾದಿಂದ  ‘ಎ’ ಖಾತೆ ನೀಡಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಲ್ಲದೆ, ಅನಧಿಕೃತ ನಿವೇಶನಗಳಿಗೆ ಖಾತೆ ನೀಡುವುದನ್ನು ನಿಯಂತ್ರಸಲು ಯಾವುದೇ ಖಾತೆ ಹೊಂದಿರದ ನಿವೇಶನಗಳಿಗೆ ಹೊಸದಾಗಿ ಎ-ಖಾತಾ ನೀಡದಿರಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಬಿ ಖಾತೆಗೆ ಎ ಖಾತೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದೇ ರೀತಿಯಲ್ಲಿ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿನ ಸ್ಥಳೀಯ ಯೋಜನಾ ಪ್ರದೇಶಗಳ ಒಳಗೆ ಅಥವಾ …

Read More »

ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಕುಂಭಾಭಿಷೇಕ

ಚಾಮರಾಜನಗರ: ಶ್ರಾವಣ ಮಾಸದ ಅಮಾವಾಸ್ಯೆ ಅಂಗವಾಗಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, …

Read More »

ದೇಶಾಭಿಮಾನದ ಪ್ರತೀಕ ತ್ರಿವರ್ಣ ಧ್ವಜ

ನಿಪ್ಪಾಣಿ: ದೇಶಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಡುವಲ್ಲಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನವನ್ನು ಯುವಪೀಳಿಗೆ ಅರಿತುಕೊಳ್ಳಬೇಕು ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಂಗಳವಾರ ತಿರಂಗಾ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ಭಾರತ ಬಲಿಷ್ಠವಾಗಿದೆ. ಎಲ್ಲರೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶಾಭಿಮಾನ ವ್ಯಕ್ತಪಡಿಸಬೇಕು ಎಂದರು. ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು …

Read More »

ಗ್ಯಾರಂಟಿ ಯೋಜನೆ ನಡುವೆ ಉತ್ತರ ಕರ್ನಾಟಕ ನಿರ್ಲಕ್ಷೃ

ಬೆಳಗಾವಿ :ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಭರಾಟೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದೆ. ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಟೀಕಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆಯಾಗುತ್ತಿಲ್ಲ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ತಾರತಮ್ಯ ಮಾಡುವುದು ಸರಿಯಲ್ಲ. …

Read More »

ವಕೀಲರ ಸಂಘದ ಅಭಿವೃದ್ಧಿಗೆ ಶ್ರಮಿಸೋಣ

ಹುಕ್ಕೇರಿ: ವಕೀಲರ ನಡುವೆ ಸೌಹಾರ್ದ ಮತ್ತು ಸಹಕಾರ ಅತ್ಯಗತ್ಯ. ಆ ನಿಟ್ಟಿನಲ್ಲಿ ಹುಕ್ಕೇರಿ ಮತ್ತು ಸಂಕೇಶ್ವರ ನ್ಯಾಯಾಲಯಗಳ ವಕೀಲರು ಒಟ್ಟಾಗಿ ವಕೀಲರ ಸಂಘದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹುಕ್ಕೇರಿ ವಕೀಲರ ಸಂಘದ ಅಧ್ಯಕ್ಷ ಡಿ.ಕೆ.ಅವರಗೋಳ ಹೇಳಿದರು. ಸಂಕೇಶ್ವರ ನ್ಯಾಯಾಲಯದ ವಕೀಲರ ಸಂಘದ ಚುನಾವಣೆಯಲ್ಲಿ ಈಚೆಗೆ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ವಕೀಲರ ಸಂಘದ ಸಭಾಭವನದಲ್ಲಿ ಮಂಗಳವಾರ ಸನ್ಮಾನಿಸಿ ಮಾತನಾಡಿದರು. ವಕೀಲರ ಹಕ್ಕುಗಳ ರಕ್ಷಣೆ ಜತೆಗೆ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಗ್ರಾಮೀಣ …

Read More »

ಅವಳಿಂದ ನನಗೆ… ಡೆತ್​ನೋಟ್​ನಲ್ಲಿ ಪಿಎಚ್​ಡಿ ಮಾಡಿರುವ ಮಹಿಳೆ ಹೆಸರು ಬರೆದಿಟ್ಟು ವೈದ್ಯ ಸಾವಿಗೆ ಶರಣು

1.4 ಕೋಟಿ ರೂ. ವಂಚನೆ ಮಾಡಿದ್ದಾಳೆ ಎಂದು ಮಹಿಳೆ ವಿರುದ್ಧ ಗಂಭೀರ ಆರೋಪ ಹೊರಿಸಿದ್ದ ವೈದ್ಯನೊಬ್ಬ, ಪೊಲೀಸರಿಗೆ ದೂರು ಕೊಟ್ಟ ಬಳಿಕವೂ ಕಟ್ಟಡದಿಂದ ಜಿಗಿದು ದುರಂತ ಅಂತ್ಯ ಕಂಡ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ವರದಿಯಾಗಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಶುವೈದ್ಯ ಡಾ. ಪರಮಾತ್ಮ ಸಿಂಗ್ (52) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಪರಮಾತ್ಮ ಸಾವಿಗೆ ಶರಣಾಗುವ ಮೊದಲು ಒಂದು ಡೆತ್​ನೋಟ್​ ಅನ್ನು ಬರೆದಿಟ್ಟು, ಬೆಳಗ್ಗೆ ತಿಂಡಿ ಮಾಡಿದ …

Read More »