ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 617 ಮಹಿಳೆಯರು ವರದಕ್ಷಿಣೆ ಕಿರುಕುಳದಿಂದ ಮೃತಪಟ್ಟಿದ್ದಾರೆ. ರಾಜ್ಯ ಮಹಿಳಾ ಆಯೋಗ 2022ರಿಂದ 2026ರ ಜೂನ್ವರೆಗೆ ರಾಜ್ಯದಲ್ಲಿ ದಾಖಲಾಗಿರುವ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಅಂಕಿ-ಅಂಶ ಬಿಡುಗಡೆ ಮಾಡಿದ್ದು, ಅದರಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ವರದಕ್ಷಿಣೆ ಕಿರುಕುಳದಿಂದ ಮಹಿಳೆಯರ ಸಾವು, ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಪತಿಯ ಕ್ರೌರ್ಯದ ಪ್ರಕರಣಗಳನ್ನು ಆಯೋಗ ವರದಿಯಲ್ಲಿ ದಾಖಲಿಸಿದೆ. 617 ವರದಕ್ಷಿಣೆ ಸಾವಿನ ಪ್ರಕರಣಗಳ ಪೈಕಿ 32 …
Read More »Yearly Archives: 2026
ದೇಶಕ್ಕೇ ಮಾದರಿಯಾಗುವಂತೆ ಗಣೇಶ ಉತ್ಸವ ಆಚರಿಸೋಣ : ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ: ಬಹಳಷ್ಟು ವಿಶಿಷ್ಟವಾಗಿರುವ ಬೆಳಗಾವಿಯ ಗಣೇಶೋತ್ಸವವನ್ನು ಎಲ್ಲರ ಸಹಕಾರದಿಂದ ವ್ಯವಸ್ಥಿತವಾಗಿ ಸೌಹಾರ್ಧತೆಯಿಂದ ದೇಶಕ್ಕೇ ಮಾದರಿಯಾಗುವಂತೆ ಆಚರಿಸೋಣವೆಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಗುರುವಾರ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯಿಂದ ಆಯೋಜಿಸಲಾಗಿದ್ದ ಗಣೇಶ ಉತ್ಸವ ಆಚರಣೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಕುರಿತು ಗಣೇಶ ಉತ್ಸವ ಮಂಡಳಿಗಳ ಪದಾಧಿಕಾರಿಗಳು ಹಾಗೂ ಗಣೇಶ ಮೂರ್ತಿಕಾರರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣೇಶೋತ್ಸವದ ಯಶಸ್ವಿಗಾಗಿ ಈಗಾಗಲೇ ಜಿಲ್ಲಾಡಳಿತದೊಂದಿಗೆ ಎಲ್ಲ …
Read More »ಬಡ್ಡಿ ದಂಧೆಕೋರ ಅಪ್ಪಾ ಮಗನ ಮೇಲೆ ಪ್ರಕರಣ ದಾಖಲು
ಬೆಳಗಾವಿ: ಅನಧಿಕೃತವಾಗಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ ಅಪ್ಪ ಮಗನ ಮೇಲೆ ಗೋಕಾಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಲ್ಲಪ್ಪ ಬಿರಾಜಗೋಳ, ಹಾಗೂ ವಿಠ್ಠಲ್ ಯಲ್ಲಪ್ಪ ಬಿರಾಜಗೋಳ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ. ಕೆ ಎಸ್ ಪಿ ಆಪ್ ಮೂಲಕ ದಾಖಲಾಗಿದ್ದ ಅರ್ಜಿಯನ್ನು ಗಂಭಿರವಾಗಿ ಪರಿಗಣಿಸಿದ ಬೆಳಗಾವಿ ಪೊಲೀಸರು ಅರ್ಜಿ ಆದರಿಸಿ ಸರ್ಚ್ ವಾರಂಟ್ ಪಡೆದು ಮನೆಗೆ ತೆರಳಿದ್ದರು. ಈ ವೇಳೆ ಅಕ್ರಮ ಬಡ್ಡಿ ದಂಧೆಯ ಹಲವು ದಾಖಲೆ ಪತ್ತೆಯಾಗಿದೆ. ದಾಖಲೆ …
Read More »ಬೆಂಗಳೂರಿನ ವಾಹನ ಸವಾರರಿಗೆ ಬಿಗ್ ಶಾಕ್ – ಪುಗ್ಸಟ್ಟೆ ಪಾರ್ಕಿಂಗ್ ವ್ಯವಸ್ಥೆಗೆ ಬ್ರೇಕ್
ಬೆಂಗಳೂರು: ನಗರದ ವಾಹನ ಸವಾರರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಪಾರ್ಕಿಂಗ್ ನೀತಿ ಜಾರಿಗೆ ತರಲು ಮುಂದಾಗಿದೆ. ಪುಗ್ಸಟ್ಟೆ ಪಾರ್ಕಿಂಗ್ ವ್ಯವಸ್ಥೆಗೆ ಬ್ರೇಕ್ ಹಾಕಲು ಹೊಸ ಪಾರ್ಕಿಂಗ್ ನೀತಿಗೆ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಹೊಸ ನೀತಿಯಡಿ ರಸ್ತೆಗಳನ್ನು ಮೂರು ಮಾದರಿಗಳಾಗಿ ವಿಂಗಡಿಸಿ, ಅದಕ್ಕೆ ಅನುಗುಣವಾಗಿ ಪಾರ್ಕಿಂಗ್ ಶುಲ್ಕ ನಿಗದಿ ಮಾಡಲು ನಿರ್ಧರಿಸಲಾಗಿದೆ. ವಾಹನಗಳಿಗೆ ಆಫ್-ಸ್ಟ್ರೀಟ್ ಪಾರ್ಕಿಂಗ್, ಆನ್-ಸ್ಟ್ರೀಟ್ ಪಾರ್ಕಿಂಗ್ ಹಾಗೂ ಮಾಸಿಕ ಪಾರ್ಕಿಂಗ್ ಪಾಸ್ ವ್ಯವಸ್ಥೆ ಜಾರಿಗೆ ಬರಲಿದೆ. …
Read More »ಉಪ್ಪಿಗೆ ನಾಯಕಿಯಾದ ಮಾಲಾಶ್ರೀ ಪುತ್ರಿ – ನೆಕ್ಟ್ಸ್ ಲೆವೆಲ್ ಚಿತ್ರಕ್ಕೆ ಅದ್ಧೂರಿ ಚಾಲನೆ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ – ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ನೆಕ್ಟ್ಸ್ ಲೆವೆಲ್ ಅಧಿಕೃತವಾಗಿ ಆರಂಭವಾಗಿದೆ. ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಅದ್ಧೂರಿ ಮುಹೂರ್ತ ಸಮಾರಂಭ ನೆರವೇರಿತು. ಉಪೇಂದ್ರ ಅವರ ಪುತ್ರ ಆಯುಷ್ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಶುಭಕೋರಿದರು. ಈ ಮುಹೂರ್ತ ಸಮಾರಂಭದಲ್ಲಿ ಪ್ರಿಯಾಂಕಾ ಉಪೇಂದ್ರ ಮತ್ತು ಹಿರಿಯ ನಟಿ ಮಾಲಾಶ್ರೀ ಸೇರಿದಂತೆ …
Read More »ಕೊನೆಯ ದಿನ ಲೋಕಸಭೆಗೆ ಮೋದಿ, ಶಾ ಆಗಮನ – ಮತ್ತೆ ಗದ್ದಲ, ಚರ್ಚೆ ಇಲ್ಲದೇ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ನವದೆಹಲಿ: ಪ್ರತಿಪಕ್ಷಗಳ ತೀವ್ರ ಗದ್ದಲ, ಗಲಾಟೆ ಮತ್ತು ನಿರಂತರ ಪ್ರತಿಭಟನೆಗಳ ನಡುವೆಯೇ ಲೋಕಸಭೆಯ ಮುಂಗಾರು ಅಧಿವೇಶನವು ಅಂತಿಮ ದಿನವಾದ ಇಂದು ‘ವಂದೇ ಮಾತರಂ’ ಗೀತೆಯೊಂದಿಗೆ ಅನಿರ್ದಿಷ್ಟಾವಧಿ ಮುಂದೂಡಿಕೆಯಾಗಿದೆ. ನೀಟ್ ಪ್ರತಿಭಟನೆ ವೇಳೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆಯಲ್ಲಿ ಅಮಿತ್ ಶಾ ಉತ್ತರ ನೀಡುವುದಾಗಿ ಹೇಳಿದ್ದರಿಂದ ಇಂದು ಉತ್ತಮ ಚರ್ಚೆ ನಡೆಯಬಹುದು ಎಂಬ ನಿರೀಕ್ಷೆ ಇತ್ತು. ಮುಂಗಾರು ಅಧಿವೇಶನ ನಡೆಯುತ್ತಿದ್ದಾಗ ಸದನದಲ್ಲಿ ಕಾಣಿಸಿಕೊಳ್ಳದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ …
Read More »ವಾಲ್ಮೀಕಿ ಸಮಾಜದ ಬಗ್ಗೆ ಗೌರವವಿದ್ದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಡಲಿ: ವಿಜಯೇಂದ್ರ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಆರೋಪಿ ಹಾಗೂ ಸಚಿವ ಬಿ. ನಾಗೇಂದ್ರ ಅವರಿಗೆ ವಾಲ್ಮೀಕಿ ಸಮಾಜದ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಹಾರದ ಮುಖ್ಯಮಂತ್ರಿ ಜಾಮೀನಿನಲ್ಲಿದ್ದರೆ ಕಾಂಗ್ರೆಸ್ಸಿನವರು ಅಲ್ಲಿ ಹೋರಾಟ ಮಾಡಲಿ; ಪ್ರಶ್ನೆಯನ್ನು ಎತ್ತಲಿ ಎಂದು ತಿಳಿಸಿದರು. ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ …
Read More »ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ರಾರಾಜಿಸಲಿ: ಡಾ. ವೀರಣ್ಣ ಚರಂತಿಮಠ
ಬಾಗಲಕೋಟೆ: “ರಕ್ತದ ಕಣಕಣಗಳಲ್ಲೂ ದೇಶಭಕ್ತಿಯ ಭಾವ ತುಂಬಿ ಹರಿಯಲಿ, ಮನೆ ಮನೆಗಳಲ್ಲೂ ಹೆಮ್ಮೆಯ ರಾಷ್ಟ್ರಧ್ವಜ ರಾರಾಜಿಸಲಿ” ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು. ನಗರದಲ್ಲಿರುವ ತಮ್ಮ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಗಸ್ಟ್ 13ರಿಂದ 15ರವರೆಗೆ ಪ್ರತಿಯೊಂದು ಮನೆಯಲ್ಲೂ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸಿ, ಸಂಭ್ರಮ ಹಾಗೂ ಸಡಗರದಿಂದ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. …
Read More »ನನ್ನ ಮನೆಯ ಬಳಿ ಮಹಜರು ನಾಟಕ – ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್ ರಾಜ್ ಕಿಡಿ
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಕೈ ಬಿಟ್ಟಿದ್ದಕ್ಕೆ ಎರಡನೇ ವಿಡಿಯೋ ಮಾಡಿ ಚುನಾವಣಾ ಆಯೋಗದವಿರುದ್ಧ ನಟ ಪ್ರಕಾಶ್ ರಾಜ್ ಕಿಡಿಕಾರಿ ಹಲವು ಪ್ರಶ್ನೆ ಕೇಳಿದ್ದಾರೆ. ವಿಡಿಯೋದಲ್ಲಿ ಏನಿದೆ? ನಿಮ್ಮ ವೆಬ್ಸೈಟ್ನಲ್ಲಿ ನನ್ನ ಮತದಾರರ ಗುರುತಿನ ಚೀಟಿ ಖಾಯಂ ಆಗಿ ವರ್ಗಾವಣೆಯಾಗಿದೆ ಹಾಗಾಗಿ ಫಾರ್ಮ್ 6 ಭರ್ತಿ ಮಾಡಿ ಹೊಸ ಐಡಿಗೆ ಅರ್ಜಿ ಸಲ್ಲಿಸಿ ಎಂದು ತೋರಿಸಿದ್ದು ನಿಜವಲ್ಲವೇ? ಈ ವಿಷಯವನ್ನು ನಾನು ಪ್ರಸ್ತಾಪಿಸಿ ಲಕ್ಷಾಂತರ ಜನರಿಗೆ ತಲುಪಿದ ಕೆಲವೇ …
Read More »ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್ನಲ್ಲಿ ಸಂತೋಷ್ ರಾವ್ಗೆ ಹಿನ್ನಡೆ
ನವದೆಹಲಿ: ಧರ್ಮಸ್ಥಳದಲ್ಲಿ ಗ್ರಾಮ ಸಮೀಪದ ಪಾಂಗಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ಗೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಪರಿಹಾರ ಧನಕ್ಕಾಗಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ನ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ವಜಾಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜಯ್ ಕುಮಾರ್ ಹಾಗೂ ನ್ಯಾ. ಸಂಜೀವ್ ಸಚ್ದೇವ ಅವರನ್ನೊಳಗೊಂಡ ದ್ವಿಸದಸ್ಯ …
Read More »
Laxmi News 24×7