ಚಿತ್ರದುರ್ಗ: ರಾಜ್ಯ ರಾಜಕಾರಣದ ಧ್ರುವತಾರೆ, ರೈತನಾಯಕ ಬಿ.ಎಸ್.ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ ಕೋಟೆನಾಡು ಸಾಕ್ಷಿಯಾಗುತ್ತಿದೆ. ಇಂದು (ಮೇ 9) ನಡೆಯಲಿರುವ ಐತಿಹಾಸಿಕ ಅಭಿಮಾನೋತ್ಸವಕ್ಕಾಗಿ ಚಿತ್ರದುರ್ಗ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ರಾಜ್ಯ ರಾಜಕಾರಣದ ಧ್ರುವತಾರೆ, ರೈತನಾಯಕ ಬಿ.ಎಸ್. ಯಡಿಯೂರಪ್ಪನವರ ರಾಜಕೀಯ ಪಯಣಕ್ಕೆ ಸುದೀರ್ಘ 50 ವರ್ಷಗಳು. ಕೋಟೆನಾಡು ಚಿತ್ರದುರ್ಗದಲ್ಲಿಂದು ಯಡಿಯೂರಪ್ಪ ಅಭಿಮಾನೋತ್ಸವ ನಡೆಯಲಿದೆ. ಇಂದು ನಡೆಯಲಿರುವ ಬಿಎಸ್ವೈ ಅಭಿಮಾನೋತ್ಸವ ಕೇವಲ ಒಂದು ಸಮಾರಂಭವಾಗದೇ ಅದೊಂದು ಕೇಸರಿ ಪಡೆಯ …
Read More »Yearly Archives: 2026
ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು
ರಾಯಚೂರು: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನ ಕ್ಯಾಮೆರಾದಲ್ಲಿ ನಡೆದಿದೆ. ಅರಗಿನಮರ ಕ್ಯಾಂಪ್ನ ವಿದ್ಯಾರ್ಥಿನಿ ಭೂಮಿಕಾ (17) ಮೃತ ದುರ್ದೈವಿ. ಮೇಘನಾ, ಮಹೇಶ್ವರಿ, ಜಹೀದಾ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯರು. ಕಾಲೇಜು ಮುಗಿದು ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದರು, ಈ ವೇಳೆ ರಿವರ್ಸ್ ತೆಗೆದುಕೊಳ್ಳುವಾಗ ಚಾಲಕನ ಅಜಾಗೂರಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ. ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೂ ಮೂವರು ಗಾಯಗೊಂಡು …
Read More »ಕೋಟೆ ನಾಡಲ್ಲಿ ಬಿಎಸ್ವೈ ಅಭಿಮಾನೋತ್ಸವ – ಅದ್ಧೂರಿ ಪುರಪ್ರವೇಶ, ಬೃಹತ್ ಮೆರವಣಿಗೆ
ಚಿತ್ರದುರ್ಗ: ರಾಜ್ಯ ರಾಜಕಾರಣದ ಧ್ರುವತಾರೆ, ರೈತನಾಯಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಸಾಕ್ಷಿಯಾಗುತ್ತಿದೆ. ಮೇ 9 ರಂದು ನಡೆಯಲಿರುವ ಐತಿಹಾಸಿಕ ಅಭಿಮಾನೋತ್ಸವಕ್ಕಾಗಿ ಚಿತ್ರದುರ್ಗ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಕೇಸರಿ ಪಡೆ ಹಬ್ಬದ ವಾತಾವರಣ ನಿರ್ಮಿಸಿದೆ. ಬಿಎಸ್ವೈ ಅವರ ಐದು ದಶಕಗಳ ರಾಜಕೀಯ ಹಾದಿಯ ಸಾಧನೆಗಾಗಿ ಬೃಹತ್ ‘ಅಭಿಮಾನೋತ್ಸವ’ ಆಯೋಜಿಸಲಾಗಿದೆ. ನಗರದ ಹೊರವಲಯದಲ್ಲಿ ಜರ್ಮನ್ ಮಾದರಿಯ ಬೃಹತ್ ಪೆಂಡಾಲ್ ಹಾಕಲಾಗಿದ್ದು, …
Read More »ಡಿಎಂಕೆ ‘ಬೆನ್ನಿಗೆ ಚೂರಿ’ ಆರೋಪಕ್ಕೆ ತಿರುಗೇಟು – ‘ಇತಿಹಾಸ ಮರೆಯಬೇಡಿ’ ಎಂದು ಕನ್ನಡಿ ತೋರಿಸಿದ ಕಾಂಗ್ರೆಸ್
ನವದೆಹಲಿ: ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿದ ವಿಚಾರವಾಗಿ ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. “ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿದೆ” ಎಂಬ ಡಿಎಂಕೆಯ ಗಂಭೀರ ಆರೋಪಕ್ಕೆ, ರಾಹುಲ್ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್ ನಾಯಕ ಶ್ರೀವತ್ಸ(Srivatsa) ಅವರು ಅಂಕಿ-ಅಂಶ ಹಾಗೂ ಇತಿಹಾಸದ ದಾಖಲೆಗಳೊಂದಿಗೆ ತಿರುಗೇಟು ನೀಡಿದ್ದಾರೆ. ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಜಾಲತಾಣ ಮುಖ್ಯಸ್ಥರಾಗಿದ್ದ ಶ್ರೀವತ್ಸ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ …
Read More »ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ದಾರುಣ ಸಾವು
ಆನೇಕಲ್: ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿ ನಡೆದಿದೆ. ಇಂದು ಮಧ್ಯಾಹ್ನ ನಾಲ್ವರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿದ್ದರು. ಆದರೆ, ಈಜು ಬರದೆ ಇಬ್ಬರು ಕೆರೆಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಶಾಹಪುರ ಮೂಲದ ಆನಂದ್ ಮತ್ತು ಅಂಬರೀಶ್ ಮೃತರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆನೇಕಲ್ ಮತ್ತು ಎಲೆಕ್ಟ್ರಾನ್ ಸಿಟಿ …
Read More »ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು
ಮಂಗಳೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯಹೊಳೆಯಲ್ಲಿ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ಒಂದೇ ಕುಟುಂಬದ ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇವರಿಬ್ಬರ ಮೃತದೇಹ ಹೊರ ತೆಗೆದರು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಶಾರ್ಟ್ ಸರ್ಕ್ಯೂಟ್ನಿಂದ ಹೋಟೆಲ್ಗೆ ಬೆಂಕಿ – ಓರ್ವ ಸಿಬ್ಬಂದಿ ಸಾವು, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು: ಇಲ್ಲಿನ ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್ನಲ್ಲಿರುವ ಖಾಸಗಿ ಹೋಟೆಲ್ಗೆ ಬೆಂಕಿ ತಗುಲಿ, ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತ ಸಿಬ್ಬಂದಿಯನ್ನು ರಾಜ್ಕುಮಾರ್ ಎಂದು ಗುರುತಿಸಲಾಗಿದ್ದು, ನಾಲ್ವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ (ಮೇ 8) ತಡರಾತ್ರಿ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ನಲ್ಲಿ ಕೆಲಸ ಮಾಡುವ ಎಂಟು ಜನ ಸಿಬ್ಬಂದಿ ಅದೇ ಹೋಟೆಲ್ನ ಮೇಲಿನ ಫ್ಲೋರ್ನಲ್ಲಿ ವಾಸವಿದ್ರು. ಬೆಂಕಿಯ ಕೆನ್ನಾಲಿಗೆ ಮೇಲಿನ …
Read More »ಸವದತ್ತಿ ಜಾತ್ರಾ ಮಹೋತ್ಸವದಲ್ಲಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರೊಂದಿಗೆ ಭಕ್ತಿಪೂರ್ವಕ ಭಾಗಿ
ನಮ್ಮ ಸವದತ್ತಿ ಪಟ್ಟಣದ ಐತಿಹಾಸಿಕ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಇಂದು ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ನಮ್ಮ ಜಿಲ್ಲೆಯ ಪ್ರಭಾವಿ ನಾಯಕರಾದ ಶ್ರೀ ಸತೀಶ್ ಜಾರಕಿಹೊಳಿ ಅವರೊಂದಿಗೆ ಪಾಲ್ಗೊಂಡು ತಾಯಿ ಗ್ರಾಮದೇವಿಯ ದರ್ಶನ ಪಡೆದೆವು. 45 ವರ್ಷಗಳ ಬಳಿಕ ಜರುಗುತ್ತಿರುವ ಈ ಮಹೋತ್ಸವದ ಸಂಭ್ರಮಕ್ಕೆ ಸಚಿವರ ಆಗಮನವು ಮತ್ತಷ್ಟು ಮೆರುಗು ನೀಡಿತು. ಸವದತ್ತಿಯ ಸಮಸ್ತ ಜನತೆಗೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ತಾಯಿಯ ಆಶೀರ್ವಾದ ಸದಾ ಇರಲಿ …
Read More »ವೈದ್ಯ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನೇಣಿಗೆ ಶರಣಾದ ನರ್ಸ್ – ಅಕ್ರಮ ಸಂಬಂಧ ಶಂಕೆ
ರಾಮನಗರ: ವೈದ್ಯನ ಸಾವಿನ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಸಹ ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಎರಡು ದಿನಗಳ ಅಂತರದಲ್ಲಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ನೇಣಿಗೆ ಶರಣಾದ ನರ್ಸ್. 2 ದಿನಗಳ ಹಿಂದೆ ಕೌಟುಂಬಿಕ ಕಲಹದಿಂದ ಕನಕಪುರ ನವೋದಯ ಆಸ್ಪತ್ರೆ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಡಾ.ಚೇತನ್ ಅವರ ಆಸ್ಪತ್ರೆಯಲ್ಲಿ ಸಾಕಷ್ಟು …
Read More »ಜಿಬಿಎ ಚುನಾವಣೆ – ಜೂ.14 ರಿಂದ 24ರ ಒಳಗೆ ದಿನಾಂಕ ಘೋಷಣೆಗೆ ಸೂಚನೆ
ಬೆಂಗಳೂರು: ಕೊನೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಕೂಡಿಬಂದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ಕರೆಯಲಾಗಿತ್ತು.ಜಿಬಿಎ ಅಧ್ಯಕ್ಷರಾಗಿರುವ ಸಿಎಂ ಹಾಗೂ ಡಿಸಿಎಂ ಸಭೆಗೆ ಗೈರಾಗಿದ್ದರು. ಈ ಹಿನ್ನೆಲೆ ರಾಜ್ಯ ಚುನಾವಣಾ ಆಯುಕ್ತ …
Read More »
Laxmi News 24×7