Breaking News

Yearly Archives: 2026

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

ಬೆಂಗಳೂರು : 2026ನೇ ಸಾಲಿಗೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಹತ್ತಿರದ ವಸತಿ ಶಾಲೆ/ಕಾಲೇಜುಗಳ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಕೆಇಎ (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದವರು ಒಳಮೀಸಲಾತಿ ವಿವರಗಳನ್ನು ಹಾಗೂ ಜಾತಿ ಪ್ರಮಾಣ ಪತ್ರದಲ್ಲಿ ಮುದ್ರಿತಗೊಂಡಿರುವ ಆರ್ .ಡಿ. ಸಂಖ್ಯೆಯನ್ನು ಆನ್ ಲೈನ್ ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಅವರು ತಿಳಿಸಿದ್ದಾರೆ.

Read More »

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

ಬೆಂಗಳೂರು: ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ ಸಾರಿದೆ. ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿವೆ. ತಿಮ್ಮಾಪೂರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ನಾಯಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸದನ ಮುಂದೂಡಿದರೂ ಹೊರಗೆ ಬರದೇ ವಿಪಕ್ಷಗಳ ಸದಸ್ಯರು ಒಳಗೆ ಉಳಿದಿದ್ದಾರೆ. ಪೋಸ್ಟರ್ ಹಿಡಿದು ಸದನದ ಬಾವಿಯಲ್ಲಿ ಧರಣಿ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿದ್ದಾರೆ. ಧರಣಿ ನಿರತ ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮೊಸರನ್ನ ಮತ್ತು ದಾಲ್ ಕಿಚಡಿ …

Read More »

ಭಾರತ-ಯುಎಸ್ ವಾಣಿಜ್ಯ ಒಪ್ಪಂದ ಫೈನಲ್: ಚಿನ್ನ, ಬೆಳ್ಳಿ ದರದಲ್ಲಿ ಚೇತರಿಕೆ

ನವದೆಹಲಿ: ಭಾರತ-ಯುಎಸ್ ವ್ಯಾಪಾರ ಒಪ್ಪಂದದ  ಬಳಿಕ, ಐದು ದಿನಗಳ ಸತತ ಕುಸಿತಕ್ಕೆ ತೆರೆ ಎಳೆದ ಚಿನ್ನ  ಮತ್ತು ಬೆಳ್ಳಿ  ಬೆಲೆಗಳು ಮಂಗಳವಾರ ಚೇತರಿಕೆ ಕಂಡಿವೆ. ಭಾರತೀಯ ಸರಕುಗಳ ಮೇಲಿನ ಅಮೆರಿಕದ ಪರಸ್ಪರ ಸುಂಕವನ್ನು ಶೇ.25 ರಿಂದ 18 ಕ್ಕೆ ಇಳಿಸುವ ಒಪ್ಪಂದವು ರತ್ನಗಳು ಮತ್ತು ಆಭರಣಗಳಂತಹ ರಫ್ತು-ಆಧಾರಿತ ವಲಯಗಳಲ್ಲಿ ವಿಶ್ವಾಸವನ್ನು ಮೂಡಿಸಿತು. ಸೋಮವಾರಕ್ಕೆ ಹೋಲಿಸಿದರೆ ಭೌತಿಕ ಬುಲಿಯನ್ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾಗಿ ಸ್ಥಿರವಾಗಿವೆ. 24 ಕ್ಯಾರೆಟ್ ಚಿನ್ನದ ಬೆಲೆ 10 …

Read More »

ಶಾಂತಿ ಒಪ್ಪಂದ ಮಾತುಕತೆ ಮುನ್ನವೇ ಉಕ್ರೇನ್‌ ಮೇಲೆ ರಷ್ಯಾ ಡ್ರೋನ್‌, ಕ್ಷಿಪಣಿ ದಾಳಿ

ಮಾಸ್ಕೋ: ನಾಲ್ಕು ವರ್ಷಗಳ ಯುದ್ಧಕ್ಕೆ ಅಂತ್ಯ ಹಾಡುವ ಮಾತುಕತೆಗೆ ಒಂದು ದಿನ ಮುಂಚಿತವಾಗಿ, ರಷ್ಯಾ  ಈ ವರ್ಷ ರಾತ್ರೋರಾತ್ರಿ ಉಕ್ರೇನ್  ಮೇಲೆ ತನ್ನ ಅತಿದೊಡ್ಡ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ. ಅಬುಧಾಬಿಯಲ್ಲಿ ಎರಡನೇ ಸುತ್ತಿನ ಮಾತುಕತೆಗಾಗಿ ಉಕ್ರೇನಿಯನ್ ಮತ್ತು ರಷ್ಯಾದ ಸಮಾಲೋಚಕರು ಭೇಟಿಯಾಗುವ ಮೊದಲು ದಾಳಿ ನಡೆದಿದೆ. ‘ರಾಜತಾಂತ್ರಿಕತೆಯತ್ತ ಮುಖ ಮಾಡುವುದಕ್ಕಿಂತ ಜನರನ್ನು ಭಯಭೀತಗೊಳಿಸಲು ರಷ್ಯಾಗೆ ಹೆಚ್ಚು ಮುಖ್ಯವಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೋಷಿಯಲ್‌ ಮೀಡಿಯಾದಲ್ಲಿ …

Read More »

ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್

ಪಾಟ್ನಾ: ಕೋರ್ಟ್‌ ಅನುಮತಿಯೊಂದಿಗೆ ಜೈಲಿನಿಂದ ಬಂದು ಜೆಡಿಯು ಮುಖಂಡ ಮೊಕಾಮಾ ಅನಂತ್‌ ಸಿಂಗ್‌  ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಬಳಿಕ ಸಿಎಂ ನಿತೀಶ್‌ ಕುಮಾರ್‌ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ದುಲಾರ್‌ಚಂದ್‌ ಯಾದವ್‌ ಹತ್ಯೆ ಪ್ರಕರಣದಲ್ಲಿ ಸಿಂಗ್‌ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೆ ಮಾತ್ರ ಪಾಟ್ನಾ ಸಿವಿಲ್ ನ್ಯಾಯಾಲಯ ಸಿಂಗ್ ಅವರಿಗೆ ಅನುಮತಿ ನೀಡಿತ್ತು. ಜಾಮೀನು ಇನ್ನೂ ಅನುಮೋದನೆಯಾಗದ ಕಾರಣ, ವಿಧಾನಸಭಾ ಕಲಾಪ ಮುಗಿದ …

Read More »

ಅಬಕಾರಿ ಇಲಾಖೆಯಲ್ಲಿ ಬ್ರಹಾಂಡ ಭ್ರಷ್ಟಾಚಾರ : ಅಶೋಕ್‌ ಗುಡುಗು

ಬೆಂಗಳೂರು ಜ.3- ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅಧಿವೇಶನದಲ್ಲಿಂದು ಬಿಡಿಸಿಟ್ಟರು. ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ಚರ್ಚೆಗೆ ಕೈಗೆತ್ತಿಕೊಂಡ ಅಶೋಕ್‌ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಇಲಾಖೆಗಳಿಗಿಂತಲೂ ಅಬಕಾರಿ ಇಲಾಖೆ ಭ್ರಷ್ಟಾಚಾರದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿದೆ. ಪ್ರತಿಯೊಂದು ಮದ್ಯದ ಅಂಗಡಿಯಿಂದಲೂ ಮಂತ್ಲಿ ನಿಗದಿಯಾಗಿದೆ. ವರ್ಗಾವಣೆ, ಹೊಸ ಪರವಾನಗಿ ನೀಡಲು, ನವೀಕರಣ ಮಾಡಲು, ಹೆಸರು …

Read More »

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

ನವದೆಹಲಿ: ಚಿತ್ರದುರ್ಗ  ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ  ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು  ಬಿಡುಗಡೆ ಮಾಡಲಾಗಿದೆ. ಸಂಸದ ಗೋವಿಂದ ಕಾರಜೋಳ (ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ …

Read More »

ಲೋಕಸಭೆಯಲ್ಲಿ ಗದ್ದಲ – ಸ್ಪೀಕರ್‌ ಮೇಲೆ ಕಾಗದ ಎಸೆದ 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

ನವದೆಹಲಿ: ಲೋಕಸಭೆಯಲ್ಲಿ ಸ್ಪೀಕರ್‌  ಪೀಠದ ಮೇಲೆ ಕಾಗದ ಹರಿದು ಎಸೆದ 8 ಮಂದಿ ಸಂಸದರನ್ನ ಇಡೀ ಬಜೆಟ್‌ ಅಧಿವೇಶನದಿಂದಲೇ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಸಂಸದರಲ್ಲಿ ಮಾಣಿಕ್ಕಂ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾರ್ ರೆಡ್ಡಿ, ಎಸ್ ವೆಂಕಟೇಶನ್, ಹಿಬಿ ಈಡನ್, ಡೀನ್ ಕುರಿಯಾಕೋಸ್ ಮತ್ತು ಪ್ರಶಾಂತ್ ಪಡೋಲೆ ಸೇರಿದ್ದಾರೆ. ಈ ಪೈಕಿ 7 ಮಂದಿ ಕಾಂಗ್ರೆಸ್‌ನವರಾಗಿದ್ದು, ವೆಂಕಟೇಸನ್‌ ಸಿಪಿಎಂ ನವರಾಗಿದ್ದಾರೆ. ಇಂದು ಮಧ್ಯಾಹ್ನ 3 …

Read More »

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭಗೊಂಡು ಮಾರ್ಚ್‌ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ …

Read More »

ಮೋದಿ-ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್‌್ಸಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು …

Read More »