ಚೆನ್ನೈ: ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ಕಾಂಗ್ರೆಸ್ನ ತಮಿಳುನಾಡು ಘಟಕವು ನಾಳೆ ಬೆಳಗ್ಗೆ ಚೆನ್ನೈನಲ್ಲಿ ಸಭೆ ಸೇರಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಜಾತ್ಯತೀತ ಸರ್ಕಾರಕ್ಕೆ ಜನಾದೇಶ ಸ್ಪಷ್ಟವಾಗಿರುವುದರಿಂದ ಪಕ್ಷವು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆಯಿದೆ. …
Read More »Yearly Archives: 2026
ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ವಾರೆಂಟ್
ದಾವಣಗೆರೆ: ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ವಾರೆಂಟ್ ಹೊರಡಿಯಸಿದೆ. ಜಾತಿನಿಂದನೆ ಪ್ರಕರಣವೊಂದರ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕೋರ್ಟ್ನ ನ್ಯಾಯಮೂರ್ತಿ ಸಂತೋಶ್ ಗಜಾನನ ಭಟ್ ಅವರು ಬಂಧನದ ವಾರೆಂಟ್ ಜಾರಿ ಮಾಡಿದ್ದಾರೆ. ಇದೇ 7ರಂದು ಕೋರ್ಟ್ಗೆ ಶಾಸಕರನ್ನು ಹಾಜರುಪಡಿಸುವಂತೆ ಹರಿಹರ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಕೋರ್ಟ್ ಆದೇಶಿಸಿದೆ. 2023 ವಿಧಾನಸಭೆಯ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಶಾಸಕ ಬಿ.ಪಿ.ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಹರಿಹರ ಬಿಎಸ್ಪಿ …
Read More »ಸೈಕಲ್ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಚಾಮರಾಜನಗರ: ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ. ಬಾಲಕ ಸೈಕಲ್ ಹೊಡೆಯುತ್ತಿದ್ದಾಗ ಯಮಸ್ವರೂಪಿಯಾಗಿ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಬಾಲಕ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ. ಕುಟುಂಬಸ್ಥರು ಮೊನ್ನೆಯಷ್ಟೇ ಸೈಕಲ್ ಕೊಡಿಸಿದ್ದರು. ಘಟನೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ …
Read More »ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್ಡಿಕೆ
ತುಮಕೂರು: ರಾಜ್ಯದ ಈಗಿನ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಜನಪರವಾದ, ಜನರಿಗೆ ಗೌರವ ತರುವಂತಹ ಸರ್ಕಾರ ತರಲು ರಾಜ್ಯದ ಜನರು ಆಶೀರ್ವಾದ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು. ತುಮಕೂರು ತಾಲೂಕು ಮುಳಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದ ವಿಜಯ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ದೇವಸ್ಥಾನದಲ್ಲಿ ದೇವಿಯ ದರ್ಶನ ಮಾಡಿ …
Read More »ಮೇ 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ
ಬೆಂಗಳೂರು: ಇದೇ ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ರವಿಶಂಕರ್ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.
Read More »ದೀದಿಗೆ ಮಣ್ಣುಮುಕ್ಕಿಸಿದ ‘ಬಂಗಾಳದ ಹುಲಿ’ ಸುವೇಂದು ಅಧಿಕಾರಿ ಮುಸ್ಲಿಂ ಮತದಾರರ ಬಗ್ಗೆ ಸ್ಪೋಟಕ ಹೇಳಿಕೆ! ಹೇಳಿದ್ದೇನು?
ಇಡೀ ದೇಶವೇ ಕುತೂಹಲದಿಂದ ನೋಡುತ್ತಿದ್ದ ಭವಾನಿಪುರದ ಮಹಾಸಂಗ್ರಾಮದಲ್ಲಿ ದೀದಿಯನ್ನೇ ಸೋಲಿಸಿ ಇತಿಹಾಸ ಬರೆದ ಸುವೇಂದು ಅಧಿಕಾರಿ ಅವರು ಈಗ ನೀಡಿರುವ ಒಂದು ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಮತಾ ಬ್ಯಾನರ್ಜಿ ಅವರ ಅತಿ ನಿಕಟವರ್ತಿಯಾಗಿದ್ದು, ನಂತರ ಬಿಜೆಪಿಗೆ ಸೇರಿ ದೀದಿಯ ವಿರುದ್ಧವೇ ತೊಡೆತಟ್ಟಿದ್ದ ಸುವೇಂದು ಅಧಿಕಾರಿ, ತಮ್ಮ ಗೆಲುವಿನ ನಂತರ ಮುಸ್ಲಿಂ ಮತದಾರರ ನಡೆಯ ಬಗ್ಗೆ ಅಚ್ಚರಿಯ ಸಂಗತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಸುವೇಂದು ಅಧಿಕಾರಿ ಹೇಳಿದ್ದೇನು? ಗೆಲುವಿನ ನಂತರ ಮಾಧ್ಯಮಗಳೊಂದಿಗೆ …
Read More »ವಿಡಿಯೋ ಕಾಲ್ನಲ್ಲಿ ಮಗು ತೋರಿಸಿಲ್ಲವೆಂದು ಅತ್ತೆಗೆ ಚಾಕು ಇರಿದ ಪಾಪಿ ಅಳಿಯ!
ಬೆಳಗಾವಿ : ಕ್ಷುಲ್ಲಕ ಕಾರಣಕ್ಕಾಗಿ ಅಳಿಯನೊಬ್ಬ ತನ್ನ ಅತ್ತೆಗೆ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಮಂಟೂರಿನ ಅರವಿಂದ ಗವಳಿ(26) ಎಂಬಾತನಿಗೆ ಮಹಾದೇವಿ ಕರಿಗಾರ(45) ಎಂಬುವವರು ಒಂದೂವರೆ ವರ್ಷದ ಹಿಂದೆ ತಮ್ಮ ಮಗಳನ್ನು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಮಗಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಆಕೆ ತವರು ಮನೆಯಲ್ಲಿದ್ದಾಳೆ. ಆದರೆ, ಅಳಿಯ …
Read More »ರಜನಿ, ಕಮಲ್ ಮಾಡದ ಸಾಧನೆ ‘ದಳಪತಿ’ ವಿಜಯ್ಗೆ ಹೇಗೆ ಸಾಧ್ಯವಾಯಿತು? ಇಲ್ಲಿದೆ ಅಸಲಿ ‘ಸಕ್ಸಸ್’ ಸೀಕ್ರೆಟ್!
ತಮಿಳುನಾಡು ಚುನಾವಣಾ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಬರೆಯಲಾಗಿದೆ. ಸೂಪರ್ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬಂದು ಹಿಂದೆ ಸರಿದರು, ‘ಉಳಗನಾಯಗನ್’ ಕಮಲ್ ಹಾಸನ್ ಪಕ್ಷ ಕಟ್ಟಿದರೂ ಹೇಳಿಕೊಳ್ಳುವ ಯಶಸ್ಸು ಕಾಣಲಿಲ್ಲ. ಆದರೆ ವಿಜಯ್ ಮಾತ್ರ ಮೊದಲ ಯತ್ನದಲ್ಲೇ ಸೆಂಚುರಿ ಬಾರಿಸಿದ್ದು ಹೇಗೆ? ವಿಜಯ್ ಅವರ ಗೆಲುವಿನ ಹಿಂದೆ ಈ ಕೆಲವು ಮುಖ್ಯ ಕಾರಣಗಳಿವೆ: 1. “ಕ್ಯಾಮಿಯೋ ಅಲ್ಲ, ಫುಲ್ ಟೈಮ್ ರೋಲ್!” ರಜನಿಕಾಂತ್ ವರ್ಷಗಟ್ಟಲೆ ಯೋಚಿಸಿ ಕೊನೆಗೆ ಹಿಂದೆ ಸರಿದರು. ಕಮಲ್ …
Read More »ಸಚಿವ ಜಮೀರ್ ಮನೆಯಲ್ಲೇ ಕೈಚಳಕ ತೋರಿಸಿದ ‘ಅತ್ತೆ’ ಮಗ! ಬರೋಬ್ಬರಿ 1.13 ಕೋಟಿಯ ಚಿನ್ನಾಭರಣ ಮಾಯ!
ಬೆಂಗಳೂರು: ಯಾವಾಗಲೂ ಹೈ ಸೆಕ್ಯೂರಿಟಿ, ಸಿಸಿಟಿವಿ ಕಣ್ಗಾವಲು, ಅನುಮತಿ ಇಲ್ಲದೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲದ ಸಚಿವ ಜಮೀರ್ ಅಹ್ಮದ್ ಅವರ ಐಷಾರಾಮಿ ಮನೆಯಲ್ಲೇ ಈಗ ಭಾರೀ ಕಳ್ಳತನ ನಡೆದಿದೆ! ಆದರೆ ಇಲ್ಲಿ ಕನ್ನ ಹಾಕಿದ್ದು ಯಾರೋ ಹೊರಗಿನ ಕಳ್ಳರಲ್ಲ, ಬದಲಾಗಿ ಸ್ವಂತ ಸಂಬಂಧಿಕನೇ ಎಂಬುದು ಈಗ ಬಯಲಾಗಿದೆ. ಏನಿದು ಘಟನೆ? ಜಮೀರ್ ಅಹ್ಮದ್ ಅವರ ತಾಯಿಯ ಹತ್ತಿರದ ಸಂಬಂಧಿ ಸೈಯದ್ ಅಮೀನ್ ಮತ್ತು ಆತನ ಸ್ನೇಹಿತ ಅಮೀರ್ ಅಹ್ಮದ್ ಎಂಬುವವರನ್ನು …
Read More »ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
ಬೆಂಗಳೂರು: 48 ವರ್ಷಗಳ ಕನ್ನಡ ಹೋರಾಟದಲ್ಲಿ ನಾನು ಯಾವತ್ತೂ ರಾಜಿ ಆಗಿಲ್ಲ. ಅದಕ್ಕೆ ಶಕ್ತಿ, ಸ್ಫೂರ್ತಿ ಡಾ. ರಾಜ್ಕುಮಾರ್ ಎಂದು ಹೇಳುವ ಮೂಲಕ ನಟ ಚೇತನ್ ಅಹಿಂಸಾ ಅವರ ಆರೋಪಕ್ಕೆ ನಿರ್ಮಾಪಕ ಸಾ.ರಾ ಗೋವಿಂದು ತಿರುಗೇಟು ನೀಡಿದರು. ರಾಜ್ಕುಮಾರ್ ಸಮಾಧಿ ವಿಚಾರದಲ್ಲಿ ಸಾರಾ ಗೋವಿಂದು ವಿರುದ್ಧ ನಟ ಚೇತನ್ ದೂರು ನೀಡಿದ್ದ ವಿಚಾರಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಎಲ್ಲಿಂದ ಬಂದಿದೀಯ, ಸಂಸ್ಕೃತಿ ಇಲ್ವಾ ನಿನಗೆ? ಡಾ. ರಾಜ್ಕುಮಾರ್ ಅವರ ಬಗ್ಗೆ …
Read More »
Laxmi News 24×7