Breaking News

Yearly Archives: 2026

ವಂದೇ ಮಾತರಂ, ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ – ಪ್ರಾಂಶುಪಾಲರ ವಿರುದ್ಧ FIR

ಬೀದರ್: ವಂದೇ ಮಾತರಂ ಹಾಗೂ ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಕ್ಕೆ ಪ್ರಾಂಶುಪಾಲರ ವಿರುದ್ಧ FIR ದಾಖಲಾಗಿದೆ. ಬೀದರ್‌ ಜಿಲ್ಲೆಯ ಚಿಟಗುಪ್ಪ ಪಟ್ಟಣದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಆ.15ರಂದು ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಘಟನೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಹಕೀಮ್ ಎಂಬುವವರ ವಿರುದ್ಧ ವಿದ್ಯಾರ್ಥಿಯ ತಂದೆ ಹಿರೋಬಾ ಗೌಳಿ ದೂರು ನೀಡಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. …

Read More »

ಯುವ ಸಂಘಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಯುವಜನರ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಿರುವ ‘ಭಾರತ್ ಜೋಡೋ ಯುವ ಸಂಘ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲಿಸಿದರು. ರಾಜ್ಯಾದ್ಯಂತ ಸ್ಥಳೀಯ ಜನಸಂಖ್ಯೆಯ ಆಧಾರದ ಮೇಲೆ ಒಟ್ಟು 10,000 ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, …

Read More »

ಮಹಾನಗರ ಪಾಲಿಕೆ ನಾಲ್ಕ ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಕಚೇರಿ ಕೊಠಡಿಗಳಉದ್ಘಾಟನೆ

ಬೆಳಗಾವಿ ಮಹಾನಗರ ಪಾಲಿಕೆ ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಕಚೇರಿ ಕೊಠಡಿಗಳನ್ನು ಮಹಾಪೌರ ಪ್ರೀತಿ ಕಾಮಕರ, ಹಾಗೂ ಉಪಮಹಾಪೌರ್ ಹನುಮಂತ ಕೊಂಗಾಲಿ, ಉದ್ಘಾಟಿಸಿದರು, ಬೆಳಗಾವಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳ ಕಚೇರಿಯ ಕೊಠಡಿಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಜು ಭಾತಕಾಂಡೆ, ಲೆಕ್ಕ ಪರಿಶೋಧನಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾರಿಕಾ ಪಾಟೀಲ್, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೇಯಸ್ ನಕಾಡಿ, ಕಂದಾಯ ಸ್ಥಾಯಿ …

Read More »

ಗುಂಡಿ ತಪ್ಪಿಸಲು ಹರಸಾಹಸ ಪಡುತ್ತಿದ್ದ ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ – ಸವಾರ ಬಚಾವ್‌

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಅವಾಂತರ ಮುಗಿಯದ ಕಥೆ ರೀತಿ ಆಗಿದೆ. ವರ್ತೂರಿನ ಗುಂಜೂರಿನಲ್ಲಿ ರಸ್ತೆ ಗುಂಡಿ ತಪ್ಪಿಸಲು ಬೈಕ್‌  ಸವಾರ ಪರದಾಡುತ್ತಿದ್ದಾಗ ಆತನ ಬೈಕ್‌ಗೆ ಹಿಂಬದಿಯಿಂದ ಟ್ಯಾಂಕರ್‌  ಡಿಕ್ಕಿಯಾಗಿದೆ. ಟ್ಯಾಂಕರ್‌ ಡಿಕ್ಕಿಯಾಗುತ್ತಿದ್ದಂತೆ ಸವಾರ ಬೈಕ್‌ ಬಿಟ್ಟು ಜಿಗಿದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಸ್ತೆ ಗುಂಡಿ ಇದ್ರೂ ವೇಗದಲ್ಲಿ ಬಂದು ನಿಯಂತ್ರಣ ತಪ್ಪಿ ಬೈಕ್‌ಗೆ ಗುದ್ದಿದ ನಂಬರ್ ಪ್ಲೇಟ್ ಇಲ್ಲದ ಟ್ಯಾಂಕರ್‌ನ್ನು ಇತರ ವಾಹನ ಸವಾರರು ಬೆನ್ನಟ್ಟಿ ಹಿಡಿದಿದ್ದಾರೆ. ಈ ವೇಳೆ …

Read More »

ಡೇಟಿಂಗ್ ಆಪ್ ಮೂಲಕ 67 ವರ್ಷದ ವ್ಯಕ್ತಿಗೆ 1.30 ಲಕ್ಷ ವಂಚನೆ – ಇಬ್ಬರು ಯುವತಿಯರು ಅರೆಸ್ಟ್‌

ನವದೆಹಲಿ: ಡೇಟಿಂಗ್ ಆಪ್‌ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ 67 ವರ್ಷದ ವ್ಯಕ್ತಿಯೊಬ್ಬರನ್ನು ವಂಚಿಸಿ 1.30 ಲಕ್ಷ ರೂ. ಕಸಿದುಕೊಂಡ ಆರೋಪದಲ್ಲಿ ಇಬ್ಬರು ಯುವತಿಯರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ-ಪಶ್ಚಿಮ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ಬಂಧಿತರನ್ನು ದೆಹಲಿ ನಿವಾಸಿಗಳಾದ ಜ್ಯೋತ್ಸ್ನಾ (26) ಮತ್ತು ಮಾನಸಿ (21) ಎಂದು ಗುರುತಿಸಲಾಗಿದೆ.  ಪೊಲೀಸರ ಮಾಹಿತಿಯ ಪ್ರಕಾರ, ಜ್ಯೋತ್ಸ್ನಾ ಡೇಟಿಂಗ್ ಆಪ್‌ನಲ್ಲಿ ನಕಲಿ ಗುರುತಿನೊಂದಿಗೆ ಪ್ರೊಫೈಲ್ ಸೃಷ್ಟಿಸಿ 67 ವರ್ಷದ …

Read More »

ಮಹಾದೇವಪುರದ ಪಾಳುಬಾವಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ – ಇಬ್ಬರು ಆರೋಪಿಗಳ ಬಂಧನ

ಚಿತ್ರದುರ್ಗ: ಮಹಾದೇವಪುರದ ಪಾಳು ಬಾವಿಯಲ್ಲಿ ನವವಿವಾಹಿತೆಶವ ಪತ್ತೆ ಪ್ರಕರಣ ಸಂಬಂಧ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗಳನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಹಾಗು ತಳಕು ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 13ರಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿಕ್ಕ ಉಳ್ಳಾರ್ತಿ ಗ್ರಾಮದ ಮನೆಯಿಂದ ನಾಪತ್ತೆಯಾಗಿದ್ದ ಸುಮಲತಾ, ಗಜೇಂದ್ರ ಎನ್ನುವವರ ಜೊತೆ ಪ್ರೇಮವಿವಾಹವಾಗಿದ್ದಳು. ತನ್ನ ಕುಟುಂಬಸ್ಥರ ಕಣ್ತಪ್ಪಿಸಲು ಜಮೀನೊಂದರಲ್ಲಿ ಈ ನವದಂಪತಿಗಳು ಬೀಡುಬಿಟ್ಟಿದ್ದರು. ಈ ವೇಳೆ ಸುಮಲತಾಳನ್ನು ಹಿಂಬಾಲಿಸಿದ್ದ ಗಜೇಂದ್ರನ ಸ್ನೇಹಿತ ಬೋರಯ್ಯ, ಜಮೀನಿನಲ್ಲಿ ಬಟ್ಟೆ ಬದಲಿಸುತ್ತಿದ್ದ …

Read More »

ಹನೂರು ಎನ್‌ಕೌಂಟರ್‌ ಕೇಸ್‌ – ಮೃತ ಮೂವರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ವಿತರಣೆ

ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರ ಕುಟುಂಬಸ್ಥರಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಸಂಸದ ಸುನೀಲ್ ಬೋಸ್  ಭೇಟಿ ನೀಡಿ ಸಾಂತ್ವನ ಹೇಳಿದರು. ಇದೇ ವೇಲೆ ತಲಾ 1 ಲಕ್ಷ ರೂ. ಪರಿಹಾರವನ್ನೂ ವಿತರಿಸಿದರು. ಹನೂರು ತಾಲೂಕಿನ ತೋಮಿಯರ್ ಪಾಳ್ಯ, ಮರಿಯಮಂಗಲ ಮತ್ತು ಲಾಸರ್ ದೊಡ್ಡಿ ಗ್ರಾಮಗಳಿಗೆ ಭೇಟಿ ನೀಡಿದ ಸಂಸದರು ಮೃತ ಜಾನ್ ರೋಸ್ ಪೀಟರ್, ಸಬಸ್ಟಿಯನ್ ಡೇವಿಡ್ ಕುಮಾರ್ ಮತ್ತು ಆಂತೋಣಿ ಸ್ವಾಮಿ ಅವರ …

Read More »

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

ಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಮತ್ತೊಂದು ರಾಜ್ಯದ ಮಹಿಳೆಯೂ ಸೇರಿದ್ದಾಳೆ. ಆರೋಪಿಗಳಿಂದ 35 ಲಕ್ಷ ರೂ. ಮೌಲ್ಯದ ಟೊಯೋಟಾ ಫಾರ್ಚುನರ್ ಕಾರನ್ನ ರಾಜಸ್ಥಾನದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಪಾರ್ಕಿಂಗ್‌ನಿಂದ ಫಾರ್ಚುನರ್ ನಾಪತ್ತೆ! ಈ ಪ್ರಕರಣದ ಸುಳಿವು ಸಿಕ್ಕಿದ್ದು ಜೂನ್ 27ರಂದು. ಚೆನ್ನೈ ಮೂಲದ ವ್ಯಕ್ತಿಯೊಬ್ಬರು …

Read More »

ಪಿಎಂ ಕೇರ್ಸ್ ಅತಿದೊಡ್ಡ ಸಾಂಸ್ಥಿಕ ಹಗರಣ, ಮೋದಿ ಸರ್ಕಾರದಿಂದ ಸಾರ್ವಜನಿಕರ ನಂಬಿಕೆಗೆ ಮಾಡಿರುವ ದ್ರೋಹ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಪಿಎಂ ಕೇರ್ಸ್  ದೇಶದ ಅತಿದೊಡ್ಡ ಸಾಂಸ್ಥಿಕ ಹಗರಣಗಳಲ್ಲಿ ಒಂದು ಹಾಗೂ ಪ್ರಧಾನಿ ಮೋದಿ ಸರ್ಕಾರದಿಂದ ಸಾರ್ವಜನಿಕ ನಂಬಿಕೆಗೆ ಮಾಡಿರುವ ದ್ರೋಹವಾಗಿದೆ ಎಂದು ರಾಜ್ಯ ಗೃಹಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕೋವಿಡ್‌ನಂತಹ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು 2020ರಲ್ಲಿ ಸ್ಥಾಪಿಸಲಾದ ಪಿಎಂ ಕೇರ್ಸ್ (PM CARES) ನಿಧಿಯಲ್ಲಿ ಸದ್ಯ ಒಟ್ಟು 8,452 ಕೋಟಿ ರೂ. ಹಣವಿರುವುದು ಇತ್ತೀಚಿನ ಆಡಿಟ್ ವರದಿ ತಿಳಿಸಿದೆ. ಈ ಬಗ್ಗೆ ಎಕ್ಸ್‌ ಪೋಸ್ಟ್‌ ಹಂಚಿಕೊಳ್ಳುವ ಮೂಲಕ …

Read More »

ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ

ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ 32 ಸಾವಿರ ರೂ.ಯಿಂದ 1.20 ಲಕ್ಷ ರೂ.ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ  ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ …

Read More »