Breaking News

Yearly Archives: 2026

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ  ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದ್ದು, ಗಂಡ ಗಂಗರಾಜು ಪತ್ನಿಯನ್ನು ಕೊಂದು ನೇಣು ಹಾಕಿರುವ ಆರೋಪ ಕೇಳಿಬಂದಿದೆ. ಘಟನೆ ನಡೆದ ದಿನ ಮೃತ ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ಕರೆ ಮಾಡಿದ್ದ. ಆತನ ಕರೆಯನ್ನು ವರಲಕ್ಷ್ಮಿ ರಿಸೀವ್ ಮಾಡಿದ್ದಳು. ಇದೇ ವಿಚಾರಕ್ಕೆ …

Read More »

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

ನವದೆಹಲಿ: ನಾನೇ ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ಅಧಿಕಾರಕ್ಕೆ ಬಂದು ನಾನೇ ಮುಖ್ಯಮಂತ್ರಿ ಎಂದು ವಿಜಯಪುರ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಬಿಜೆಪಿ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡಲು ನಾನು ದೆಹಲಿಗೆ ಬಂದಿಲ್ಲ. ಯಾರ ಕಾಲಿಗೆ ಬಿದ್ದು ಪಕ್ಷ ಸೇರಿಸಿಕೊಳ್ಳಿ ಅಂತಾ ಕೇಳಲ್ಲ. ನಾನೇ ಪ್ರಾದೇಶಿಕ ಪಕ್ಷ ಮಾಡ್ತೀನಿ, 2028ಕ್ಕೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ನಾನೇ ಮುಖ್ಯಮಂತ್ರಿ ಆಗ್ತಿನಿ. …

Read More »

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ದಾವಣಗೆರೆ  ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ, ನನಗೆ …

Read More »

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ದೆಹಲಿಗೆ  ತೆರಳಿರುವ ಡಿಸಿಎಂ ಡಿಕೆಶಿ  ಪರವಾಗಿ ನಾವಿದ್ದೇವೆ. ಅವರು ನಾಳೆನೇ ಬರಲಿ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಸಿಎಂ ಡಿಕೆಶಿ ದೆಹಲಿಯಲ್ಲೇ ಉಳಿದಿರುವ ವಿಚಾರವಾಗಿ ಪ್ರತಿಕ್ರಿಸಿದರು. ಡಿಸಿಎಂ ಪರವಾಗಿ ನಾವಿದ್ದೇವೆ. ನಾವು ಇಲ್ಲಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ. ಆರ್‍ಎಸ್‍ಎಸ್ ಬಗ್ಗೆ ಮಾಜಿ ಸಂಸದ ಅನಂತ ಕುಮಾರ್ ಹೆಗ್ಡೆ ಹೇಳಿಕೆ ವಿಚಾರವಾಗಿ, ಆರ್‍ಎಸ್‍ಎಸ್ ಬ್ಯಾನ್ ಮಾಡ್ತೀವಿ ಅಂತ …

Read More »

ಬಳ್ಳಾರಿ | ವಿದ್ಯಾರ್ಥಿ ಹತ್ಯೆ ಕೇಸ್‌ – 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ ಬಾಲಕ

ಬಳ್ಳಾರಿ: ವಿದ್ಯಾರ್ಥಿಯೊಬ್ಬನನ್ನು ಕೊಲೆಗೈದು, 7 ಮಂದಿ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಬಳ್ಳಾರಿಯ  ಖಾಸಗಿ ಶಾಲೆಯ  ಹಾಸ್ಟೆಲ್‌ ಬಾಲಕ, ಪ್ರಕರಣ ನಡೆದು 30 ಗಂಟೆ ಕಳೆದ್ರೂ ಪತ್ತೆಯಾಗಿಲ್ಲ. ಕೃತ್ಯ ನಡೆಸಿ ಅರ್ಧ ಗಂಟೆಯಲ್ಲೇ ಶಾಲಾ ಹಾಸ್ಟೆಲ್‌ನಿಂದ ಬಾಲಕ ನಾಪತ್ತೆಯಾಗಿದ್ದಾನೆ. ಶಾಲಾ ಕಾಂಪೌಂಡ್ ದಾಟಿದ ಬಳಿಕ ಬಾಲಕ ಎಲ್ಲಿಗೆ ಹೋದ ಎಂಬ ಸುಳಿವೇ ಸಿಗುತ್ತಿಲ್ಲ. ಆತನಿಗಾಗಿ ಬಳ್ಳಾರಿ ಎಸ್‌ಪಿ ಡಾ.ಸುಮನ್ ಫನ್ನೇಕರ್ ನೇತೃತ್ವದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಇದುವರೆಗೂ ಆರೋಪಿ ಬಾಲಕನ ಸುಳಿವು …

Read More »

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

ಮೈಸೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ?  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ …

Read More »

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ​ ಎರಡೂ  ಕ್ಷೇತ್ರಕ್ಕೆ 16-16 ನಾಯಕರನ್ನೊಳಗೊಂಡ ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ. ಬಾಗಲಕೋಟೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್ ಮತ್ತು ದಾವಣಗೆರೆಗೆ ಕಾಱಧ್ಯಕ್ಷ ಮಂಜುನಾಥ್ ಭಂಡಾರಿ ಸಂಚಾಲಕರಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಮತ್ತೋರ್ವ ಮಾಜಿ ಸಚಿವ ವಿಎಸ್​​​ ಮೇಟಿ …

Read More »

ನನ್ನ ರಾಜಕೀಯ ಜೀವನ ಬೆಳವಣಿಗೆಗೆ ಅನೇಕ ಹಿರಿಯರ ಆಶೀರ್ವಾದವಿದೆ: ಸಚಿವ ಕೆ.ಎಚ್.ಮುನಿಯಪ್ಪ

ದೇವನಹಳ್ಳಿ: ನಾನು ನನ್ನ ರಾಜಕೀಯ ಜೀವನದಲ್ಲಿ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಸಚಿವನಾಗಲು ಅನೇಕ ನಾಯಕರ ಸಹಕಾರ, ಆಶೀರ್ವಾದ ನನ್ನ ಮೇಲಿದ್ದು, ಅವರನ್ನು ನಾನು ಪ್ರತಿದಿನ ಸ್ಮರಿಸತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಆಯೋಜಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ 10 ದಿನ ಇರುವಾಗ …

Read More »

ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಅಶೋಕ ಪಟ್ಟಣ

ರಾಮದುರ್ಗ:ಸುರೇಬಾನ ಉಪ ಠಾಣೆಯನ್ನು 2018ರಲ್ಲಿಯೇ ಮೇಲ್ದರ್ಜೆಗೇರಿಸಿ, ಪೊಲೀಸ್ ಠಾಣೆಯಾಗಿ ಪರಿವರ್ತನೆ ಮಾಡಿಸಿದ್ದೇನೆ. ಈಗ ಮತ್ತೆ ಅದರ ಕಟ್ಟಡ ನಿರ್ಮಾಣ ಕಾಮಗಾರಿಗೂ ಸಹ ಅಧಿಕಾರದ ಅವಧಿಯಲ್ಲಿ ಚಾಲನೆ ನೀಡಿದ್ದೇನೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು. ತಾಲೂಕಿನ ಸುರೇಬಾನ ಪೊಲೀಸ್ ಠಾಣೆಗೆ 1.80 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪೊಲೀಸರು ಹೆಲ್ಮೆಟ್ ಹಾಕುವಂತೆ ಸೂಚಿಸಿದರೂ ಧರಿಸದೇ ವಾಹನ ಚಲಾಯಿಸುವುದು ಸರಿಯಲ್ಲ. …

Read More »

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

ದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರ ಜನ್ಮದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಕ್ರೀಡಾಂಗಣದಲ್ಲಿ (ಕೋರ್ಟ್ ಮುಂಭಾಗ) ಭಕ್ತಿಪೂರ್ವಕವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಧಾರ್ಮಿಕ ಮೆರಗು ನೀಡಿದರು. ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ, ಪೂಜ್ಯ ಶ್ರೀ ಶ್ರೀ ಮಾದರ ಚೆನ್ನಯ್ಯ ಸ್ವಾಮೀಜಿ …

Read More »