ಚಿಕ್ಕಬಳ್ಳಾಪುರ: ಖರ್ಗೆ ನಂತರ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರೇ ಆಗಬಹುದು ಎಂದು ಶಾಸಕ ಶಿವಲಿಂಗೇಗೌಡ ಅವರು ಭವಿಷ್ಯ ನುಡಿದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಿಂದ ದೂರ ಆಗುತ್ತೇನೆ ಎಂದು ಹೇಳಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ದರೆ, ರಾಜ್ಯ ಸಭೆಗೆ ಆಯ್ಕೆ ಮಾಡುತ್ತಾರೆ. ಖರ್ಗೆ ಬಿಟ್ಟ ಮೇಲೆ ಅವರು ವಿರೋಧ ಪಕ್ಷದ ನಾಯಕರೇ ಆಗಬಹುದು. ಒಂದು ದೊಡ್ಡ …
Read More »Yearly Archives: 2026
ಹಿಟ್ & ರನ್ಗೆ ಬೈಕ್ ಸವಾರ ಸಾವು
ಶಿವಮೊಗ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಆಯನೂರು ಸಮೀಪದ ವೀರಗಾರನಬೈರನಕೊಪ್ಪ ಬಳಿ ನಡೆದಿದೆ. ಬೆಳಗಿನ ಜಾವ ಘಟನೆ ನಡೆದಿದ್ದು, ಶಿವಮೊಗ್ಗ ನಗರದ ಗಾಡಿಕೊಪ್ಪದ ನಿವಾಸಿ ವೀರೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಖಾಸಗಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ ಸೋಮವಾರ ಬೆಳಗ್ಗಿನ ಜಾವ ಬೈಕ್ನಲ್ಲಿ ಬೆಂಗಳೂರು- ಹೊನ್ನಾವರ ಎನ್ಹೆಚ್-206ರಲ್ಲಿ ಶಿವಮೊಗ್ಗದತ್ತ ಬರುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದಲ್ಲಿ ತಲೆಗೆ ಗಂಭೀರ …
Read More »ತಮ್ಮ ಬರ ನೀಗಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ, ಸರ್ಕಾರಕ್ಕೆ ರೈತರ ಬರ ಆದ್ಯತೆಯಲ್ಲ: ಸಿ.ಟಿ ರವಿ
ರಾಯಚೂರು: ಸರ್ಕಾರದ ಸಚಿವರು, ಶಾಸಕರು ತಮ್ಮ ಬರ ನೀಗಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ. ಜನರ ಬರದ ವಿಷಯ ಅವರಿಗೆ ಆದ್ಯತೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಯಚೂರಿನ ಲಿಂಗಸುಗೂರಿನ ಛತ್ತರ ಗ್ರಾಮದಲ್ಲಿ ಬರಪೀಡಿತ ಹೊಲಗಳಿಗೆ ಭೇಟಿ ನೀಡಿ, ವೀಕ್ಷಣೆ ಬಳಿಕ ಮಾತನಾಡಿದ ಅವರು ಬರ ಘೋಷಣೆಗೆ ಒತ್ತಾಯಿಸಿದರು. ಆಡಳಿತ ಪಕ್ಷದ ಶಾಸಕರು ತಮ್ಮ ಅಧಿಕಾರದ ದಾಹ ತೀರಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ. ರಾಜ್ಯದಲ್ಲಿ ಮಳೆಯಿಲ್ಲದೇ ಬರ ಆವರಿಸಿದೆ. ಸರ್ಕಾರ ಕೂಡಲೇ …
Read More »ಕ್ಯಾಬ್ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ
ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ʼನಿನ್ ರೇಟ್ ಎಷ್ಟುʼ ಅಂತ ಕಿರುಕುಳ ನೀಡಿದ ಶೋಚನೀಯ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಸ್ಕೂಟರ್ನಲ್ಲಿ ಬಂದ ವ್ಯಕ್ತಿಯೊಬ್ಬ ಆಕೆಯನ್ನು ಕಂಡ ತಕ್ಷಣ ಅಸಭ್ಯವಾಗಿ ಮಾತನಾಡಿಸಿ, ಲೈಂಗಿಕವಾಗಿ ನಿಂದಿಸುತ್ತಾ ರೇಟ್ ಎಷ್ಟು? ಎಂದು ಕೇಳಿ ಕಿರುಕುಳ ನೀಡಿದ್ದಾನೆ. ಘಟನೆಯಿಂದ ಧೃತಿಗೆಡದ ಧೈರ್ಯವಂತ ಯುವತಿ, ತಕ್ಷಣವೇ ತನ್ನ ಮೊಬೈಲ್ ತೆಗೆದು ಆತನ ಕೃತ್ಯವನ್ನು ವೀಡಿಯೋ ರೆಕಾರ್ಡ್ ಮಾಡಲು ಪ್ರಾರಂಭಿಸಿದ್ದಾರೆ. ನಿನ್ನ ವಿರುದ್ಧ …
Read More »ಪ್ರತಿಭಟನಾಕಾರರ ವಿರುದ್ಧದ ಕೇಸ್ ಹಿಂಪಡೆದ ಬಿಹಾರ
ಪಾಟ್ನಾ: ನೀಟ್ ಪರೀಕ್ಷಾ ಅಕ್ರಮ ಸೇರಿ ಸರಣಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಪ್ರತಿಭಟನಾಕಾರರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಬಿಹಾರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕುರಿತು ಬಿಹಾರ ಗೃಹ ಇಲಾಖೆಯ ವಿಶೇಷ ಕಾರ್ಯದರ್ಶಿ ಕ್ಷತ್ರನೀಲ್ ಸಿಂಗ್ ಅವರು ಅಧಿಕೃತ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಪ್ರಕರಣಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ. ಹೇಳಿಕೆಯಲ್ಲಿ ಏನಿದೆ? ಜುಲೈ 26 ಸಂಜೆ 6 ಗಂಟೆಗಿಂತ ಮೊದಲು ರಾಜ್ಯಾದ್ಯಂತ ನಡೆದ ನೀಟ್ ಪ್ರತಿಭಟನೆಯಲ್ಲಿ …
Read More »ಬ್ಯಾಂಕ್ ಆಫ್ ಬರೋಡಾ ಗ್ರಾಹಕರಿಗೆ ಶಾಕ್ – ಆಧಾರ್ ಸೇರಿ 1,000 GB ಡೇಟಾ ಸೋರಿಕೆ
ಗಾಂಧಿನಗರ: ಭಾರತದ 3ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾದ 1 TB (ಟೆರಾಬೈಟ್) (1,000 GB) ಮಾಹಿತಿಗಳು ಡೇಟಾ ಡಾರ್ಕ್ ವೆಬ್ನಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ. ಬ್ಯಾಂಕ್ ಆಫ್ ಬರೋಡಾದ ಸಿಸ್ಟಮ್ ಹ್ಯಾಕ್ ಆಗಿ, ಲಕ್ಷಾಂತರ ಗ್ರಾಹಕರ ಸೂಕ್ಷ್ಮ ದಾಖಲೆಗಳು ಆನ್ಲೈನ್ನಲ್ಲಿ ಸೋರಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜು.25 ರಂದು ಡಾರ್ಕ್ ವೆಬ್ ಅನ್ನು ಟ್ರ್ಯಾಕ್ ಮಾಡುವ Ransomware.live ಎಂಬ ಜಾಲತಾಣದಲ್ಲಿ ಈ ಮಾಹಿತಿ …
Read More »ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಶುದ್ಧವಿದ್ದ ರಾಜಕೀಯ, ಡಿಕೆಶಿ ಸಿಎಂ ಆದ ಬಳಿಕ ಕಲುಷಿತವೇ? – ಶ್ರೀರಾಮುಲು
ಚಿತ್ರದುರ್ಗ: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಶುದ್ದವಿದ್ದ ರಾಜಕೀಯ ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕಲುಷಿತಗೊಂಡಿದೆಯೇ? ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದಲ್ಲಿ ಎಸ್ ಟಿಸಮುದಾಯದ ಜಾಗೃತಿ ಸಮಾವೇಶಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಕಲುಷಿತ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 2028ಕ್ಕೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಹ ಹೇಳಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಶುದ್ಧವಿತ್ತಾ? ಡಿಕೆಶಿ …
Read More »ಗೋವಿಗೆ ರಾಷ್ಟ್ರಮಾತೆ ಸ್ಥಾನಮಾನ ನೀಡಲು ಆಗ್ರಹ
ಬೆಳಗಾವಿ : ಸಂರಕ್ಷಣೆ ದೃಷ್ಟಿಯಿಂದ ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಗೋಮಾತೆ ಗೌರವದ ಅಭಿಮಾನದ ಪ್ರಯುಕ್ತ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಒಟ್ಟು 1.80 ಲಕ್ಷ ಸಹಿ ಸಂಗ್ರಹ ಪೂರ್ಣಗೊಳಿಸಲಾಗಿದೆ. ಈ ಸಹಿಗಳ ಒಂದು ಪ್ರತಿಯನ್ನು ಸೋಮವಾರ ಸಾಂಕೇತಿಕವಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು. ಚನ್ನಮ್ಮ ವೃತ್ತದಿಂದ ಗೋವಿನ ಸಮೇತ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಗೋ ಪ್ರೇಮಿಗಳು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ಗೋವನ್ನು ರಾಷ್ಟ್ರಮಾತೆ ಎಂದು …
Read More »ನೆಮ್ಮದಿ ಹಾಳು ಮಾಡಿದ ಬಾರ್ ಬಂದ್ಗೆ ಆಗ್ರಹ
ಬೆಳಗಾವಿ : ಸ್ಪೋರ್ಟ್ಸ್ ಕ್ಲಬ್ ಹೆಸರಿನಲ್ಲಿ ನಡೆಸುತ್ತಿರುವ ಬಾರ್ನಿಂದ ತಮ್ಮೂರ ನೆಮ್ಮದಿ ಸಂಪೂರ್ಣವಾಗಿ ಹಾಳಾಗಿದೆ. ಯುವಕರು ಜೀವನ ಕಳೆದುಕೊಳ್ಳುತ್ತಿದ್ದು, ಕೂಡಲೇ ಬಂದ್ ಮಾಡಿ ಎಂದು ಆಗ್ರಹಿಸಿ ಚನ್ನಮ್ಮನ ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮಸ್ಥರು ಸೋಮವಾರ ಅಬಕಾರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕರ್ನಾಟಕ ಬಹುಜನ ಚಳುವಳಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಂಡು, ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಇಲಾಖೆಗೆ ಏಳು ದಿನಗಳ ಗಡುವು ನೀಡಿದರು. ಗಡವಿನೊಳಗೆ ಬಂದ್ …
Read More »ಎಸ್ಐಆರ್ ಕೇಂದ್ರಗಳಿಗೆ ಆಯುಕ್ತರ ಭೇಟಿ
ಬೆಳಗಾವಿ :ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಪ್ರಾರಂಭವಾಗಿದ್ದು ಬೂತ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ಭೇಟಿ ನೀಡಿ ವಿತರಣೆ ಮಾಡಿರುವ ಗಣತಿ ನಮೂನೆ (ಇಎಫ್)ಮತದಾರರು ನಿಗದಿತ ಸಮಯದಲ್ಲಿಯೇ ವಾಪಸ್ ನೀಡಬೇಕು ಎಂದು ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ತಿಳಿಸಿದ್ದಾರೆ. ನಗರದಲ್ಲಿರುವ ಬೆಳಗಾವಿ ಉತ್ತರ, ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿರುವ ಎಸ್ಐಆರ್ ಕೇಂದ್ರಗಳಿರುವ ಮತಗಟ್ಟೆಗಳು ಹಾಗೂ ಯುಸಿಎಫ್ ಯೋಜನೆ ಅಳವಡಿಸಲಿರುವ ಸ್ಥಳಗಳಿಗೆ ಭೇಟಿ ಪರಿಶೀಲಿಸಿದ ಬಳಿಕ ಮಾತನಾಡಿದ …
Read More »
Laxmi News 24×7