ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಕೊಳವಿ ಗ್ರಾಮದ ಶ್ರೀ ಗೂಳಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕರೆಪ್ಪಾ ಬಡಿಗವಾಡ. ಬಾಳಯ್ಯ …
Read More »Yearly Archives: 2026
48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ
ವಿಜಯಪುರ: ಇಲ್ಲಿನ ಗ್ರಾಮೀಣ ಉಪವಿಭಾಗ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 48 ಪ್ರಕರಣದ 14 ಆರೋಪಿಗಳು ಬಂಧಿಸಿ, 1.17 ಕೋಟಿ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿಕೊಂಡಿದ್ದಾರೆ. ವಿಜಯಪುರ ಗ್ರಾಮೀಣ ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಹಲವು ಪ್ರಕರಣಗಳನ್ನು ಬೇಧಿಸಿದ್ದಾರೆ. ಈ ವೇಳೆ ಕಳ್ಳತನ, ದರೋಡೆ ಸೇರಿ ಒಟ್ಟು 48 ಪ್ರಕರಣದ 14 ಅಂತರ್ ರಾಜ್ಯ, ಅಂತರ್ ಜಿಲ್ಲಾ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 65 …
Read More »ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್
ರಾಯಚೂರು: ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿ, ಯುವಕನನ್ನು ಹತ್ಯೆಗೈದಿರುವ ಘಟನೆ ರಾಯಚೂರಿನ ಜಹೀರಾಬಾದ್ನ ಮಾವಿನ ಕೆರೆ ಬಳಿ ನಡೆದಿದೆ. 22 ವರ್ಷದ ವಿಶಾಲ್ ಕೊಲೆಯಾದ ಯುವಕನಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಗಳನ್ನು ರಾಜು ಹಾಗೂ ಬಸವರಾಜ್ ಎಂದು ಗುರುತಿಸಲಾಗಿದೆ. ಶುಕ್ರವಾರ (ಜ.23) ತಡರಾತ್ರಿ 1 ಗಂಟೆ ಸುಮಾರಿಗೆ ಮೃತ ಯುವಕ ಸ್ನೇಹಿತನನ್ನ ಬೈದಿದ್ದಕ್ಕೆ ಆರೋಪಿಗಳ ಬಳಿ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಮೂವರ ಮಧ್ಯೆ ಮಾತಿನ ಚಕಮಕಿ …
Read More »ಹುಬ್ಬಳ್ಳಿ | ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ – ಕಟೌಟ್ ಮುರಿದು ಬಿದ್ದು ಮೂವರು ಗಂಭೀರ
ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್ಗಳು ಮುರಿಬಿದ್ದು ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಇಂದು (ಶನಿವಾರ) ಬೆಳಗ್ಗೆ ನಡೆದಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ನಿಂದ ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ …
Read More »ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ
ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್ನ 9ನೇ ವಾರ್ಷಿಕ ಮಹಾಸಭೆ ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ ನಡೆಯಿತು. ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ್ ವೆರ್ಣೇಕರ್ ಸಂಘದ ಸಾಧನೆಗಳು ಮತ್ತು ಬೆಳವಣಿಗೆಗಳ ಕುರಿತು ವಿವರಿಸಿದರು. ದಯಾನಂದ ನೇತಲ್ಕರ್ ಅವರ ನೇತೃತ್ವದಲ್ಲಿ 2026- …
Read More »ಹುಬ್ಬಳ್ಳಿಯ ಮಾಲ್ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ
ಹುಬ್ಬಳ್ಳಿ3: ಅದು ನಗರದ ಪ್ರಮುಖ ವ್ಯಾಪಾರ ಏರಿಯಾ. ಆದರೆ ರಾತ್ರಿ ಸಮಯದಲ್ಲಿ ನಾಲ್ಕು ಅಂತಸ್ತಿನ ಮಾಲ್ನಲ್ಲಿ ಹೊತ್ತಿಕೊಂಡ ಬೆಂಕಿ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣ ಮಾಡಿತ್ತು. ಮಾಲ್ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದರೆ, ಮತ್ತೊಂದೆಡೆ ಸುತ್ತಮುತ್ತಲಿನ ವಸತಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಲು ಆರಂಭಿಸಿತ್ತು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಮರಾಠ ಗಲ್ಲಿಯಲ್ಲಿರುವ ಸುಪ್ರಸಿದ್ಧ ಸುಖಸಾಗರ ಮಾಲ್ನಲ್ಲಿ ಕಳೆದ ರಾತ್ರಿ 12 ಗಂಟೆ ಸಮಯಕ್ಕೆ ಅಗ್ನಿ ಅವಘಡ …
Read More »SSLC ಟಾಪರ್ಗಳಿಗೆ ಇನ್ಮುಂದೆ ಲ್ಯಾಪ್ಟಾಪ್ ಬದಲು ನಗದು ಬಹುಮಾನ
ಬೆಂಗಳೂರು: ರಾಜ್ಯ ಸರ್ಕಾರ ಇನ್ನು ಮುಂದೆ ಎಸ್ಎಸ್ಎಲ್ಸಿ ಟಾಪರ್ಗಳಿಗೆ ಲ್ಯಾಪ್ಟಾಪ್ ಬದಲಿಗೆ ನಗದು ಬಹುಮಾನ ನೀಡಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ …
Read More »ಜೆಡಿಎಸ್ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ
ಹಾಸನ: ಜೆಡಿಎಸ್ ಭದ್ರಕೋಟೆಯಲ್ಲಿ ಪಕ್ಷವನ್ನ ಮತ್ತಷ್ಟು ಭದ್ರಗೊಳಿಸಲು ದಳಪತಿಗಳು ಸಜ್ಜಾಗಿದ್ದಾರೆ. ಕಾಂಗ್ರೆಸ್ಗೆ ಠಕ್ಕರ್ ಕೊಡಲು ಖುದ್ದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರೇ ಅಖಾಡಕ್ಕೆ ಇಳಿದಿದ್ದು, ಇಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಜೆಡಿಎಸ್ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ (Congress) ಹಿಡಿತ ಸಾಧಿಸುತ್ತಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಆಯ್ಕೆಯಾದ ನಂತರ ನಡೆದ ಕೆಲವು ಘಟನೆಗಳಿಂದ ಜೆಡಿಎಸ್ ಕೊಂಚ ಸೊರಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಎರಡು ಬೃಹತ್ ಸಮಾವೇಶಗಳನ್ನ ನಡೆಸಿದೆ. …
Read More »ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!
ಚಿಕ್ಕಮಗಳೂರು: ಪ್ರೇಮದೇಶ, ಭಾಷೆ, ಗಡಿ ಎಲ್ಲದ್ದನ್ನೂ ಮೀರಿದ್ದು.. ಅದಕ್ಕೆ ಸಾಕ್ಷಿ ಎಂಬಂತೆ ನಗರದ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಯುವಕ ರೂಪಕ್ ಚೀನಾ ಮೂಲದ ಜೇಡ್, ಕುಟುಂಬಸ್ಥರ ಸಮ್ಮುಖದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದಾರೆ. ಯುವತಿಯ ತಂದೆ – ತಾಯಿಯೇ ಚೀನಾದಿಂದ ಮಗಳನ್ನು ಕರೆತಂದು, ಯುವಕನಿಗೆ ಧಾರೆ ಎರೆದಿದ್ದಾರೆ. ಈ ವೇಳೆ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ರೀತಿ ಎಂದು …
Read More »ಗೋ ಬ್ಯಾಕ್ ಗವರ್ನರ್ ಅನ್ನೋದು ರಾಜಕೀಯ ನಾಟಕ – ಹೆಚ್ಡಿಕೆ ಕಿಡಿ
ಮಂಡ್ಯ: ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್, ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ರಾಜ್ಯಪಾಲರುಗಳ ವಿಷಯದಲ್ಲಿ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಒಮ್ಮೆ ನೆನಪು ಮಾಡಿಕೊಂಡರೆ ಅವರ ಬಣ್ಣ ಏನೆಂದು ಗೊತ್ತಾಗುತ್ತದೆ. ವಿಶೇಷ ಅಧಿವೇಶನ ಕರೆದು ಅಲ್ಲಿ ಸಮಯ …
Read More »
Laxmi News 24×7