ಬಾಗಲಕೋಟೆ, : ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಒತ್ತಾಯಿಸಿದರು. ಗುರುವಾರ ಬಾಗಲಕೋಟೆಯ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಇಡೀ …
Read More »Yearly Archives: 2026
ಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ
ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿ ಸರ್ಕಾರಿ ಜಮೀನಿನಲ್ಲಿ ಫಲವೃಕ್ಷೋದ್ಯಾನ ಅಭಿವೃದ್ಧಿಪಡಿಸಿ, ಅದನ್ನು ವಾರ್ಷಿಕ ಆಧಾರದ ಮೇಲೆ ಪಾರದರ್ಶಕ ಹರಾಜು ಮೂಲಕ ಅದೇ ಗ್ರಾಮದ ಯುವಕರಿಗೆ ಗುತ್ತಿಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ. ಈ ಕುರಿತು ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಪ್ರತಿ ಗ್ರಾಮದಲ್ಲೂ ಫಲವೃಕ್ಷೋದ್ಯಾನ ನಿರ್ಮಿಸಿದರೆ ಹಸಿರು ಹೊದಿಕೆ ಹೆಚ್ಚುವುದರ ಜೊತೆಗೆ ನಿರುದ್ಯೋಗಿ ಮತ್ತು ಭೂರಹಿತ ಯುವಕರಿಗೆ …
Read More »3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ
ಬೆಂಗಳೂರು: ಬಿಪಿಎಲ್ ಕಾರ್ಡ್ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಬಿಪಿಎಲ್ ಕಾರ್ಡ್ಗೆ ಸಂಬಂಧಿಸಿದ ಆದಾಯ ಮಿತಿಯನ್ನು ಪರಿಷ್ಕರಿಸಲಾಗುತ್ತಿದೆ. ಈಗಾಗಲೇ ಸುಮಾರು …
Read More »ʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIR
ಚಿಕ್ಕಮಗಳೂರು: ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಎಂಬ ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿರುದ್ಧ ಬಿಜೆಪಿ ವತಿಯಿಂದ ಚಿಕ್ಕಮಗಳೂರಿನಲ್ಲಿ ನಡೆದ ಯೂತ್ ಫಾರ್ ನೇಷನ್ ಕಾರ್ಯಕ್ರಮದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ …
Read More »ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್
ಮೈಸೂರು: ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣವನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮರುಪರೀಕ್ಷೆ ನಡೆದು ಫಲಿತಾಂಶವೂ ಪ್ರಕಟವಾಗಿದೆ. ಆದರೂ ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅರಾಜಕತೆ ಸೃಷ್ಟಿಸಲು ಹೊರಟಿದೆ. ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಕೆಲಸವಾಗಿದೆ. …
Read More »ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್ ಸ್ಪಾಟ್ಗಳ ಸ್ವಚ್ಛತಾ ಅಭಿಯಾನ ಪೂರ್ಣ
ಬೆಂಗಳೂರು: ಬೆಂಗಳೂರು ಉತ್ತರ ಪಾಲಿಕೆಯ ಸ್ವಚ್ಛ ಭಾರತ ಅಭಿಯಾನದಡಿ ನಗರದ 100 ಬ್ಲಾಕ್ ಸ್ಪಾಟ್ನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದ್ದು, ಸ್ಥಳೀಯರು ಅದೇ ಜಾಗದಲ್ಲಿ ಕಬ್ಬಡಿ ಆಡಿ ಸಂಭ್ರಮಿಸಿದ್ದಾರೆ. ಥಣಿಸಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಭಾಗವಹಿಸಿದರು. ಸ್ವಚ್ಛಗೊಳಿಸಿದ ಜಾಗದಲ್ಲಿ ಸಚಿವರು ಸ್ವತಃ ಗೋಡೆಗೆ ಪೇಂಟಿಂಗ್ ಮಾಡಿ, ಗಿಡಗಳನ್ನು ನೆಡುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಜೂ. 15ರಿಂದ ಬೆಂಗಳೂರು ಉತ್ತರ ಪಾಲಿಕೆ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿ …
Read More »ಹಾರಂಗಿ ಡ್ಯಾಮ್ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ – ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ
ಮಡಿಕೇರಿ: ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಭಾರೀ ಮಳೆಯಿಂದ ಜಲಾಶಯ ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಇದರಿಂದ ಇಂದು (ಜು.25) ಮಧ್ಯಾಹ್ನದ ವೇಳೆ ಕಾವೇರಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ …
Read More »ಬೈರಸಂದ್ರದಲ್ಲಿ ಗಂಗರ ಕಾಲದ ಹುಲಿಬೇಟೆ ವೀರಗಲ್ಲು ಪತ್ತೆ – ಕ್ರಿ.ಶ 850ರ ಕಾಲಮಾನದ ಶಾಸನ ರಕ್ಷಣೆಗೆ ಒತ್ತಾಯ
ನೆಲಮಂಗಲ: ಗಂಗರ ಆಳ್ವಿಕೆಯ ಕಾಲಘಟ್ಟವಾದ ಕ್ರಿ.ಶ 850ರ ಸುಮಾರಿಗೆ ಸೇರಿರುವ ಅಪರೂಪದ ಶಾಸನ ಸಹಿತ ಹುಲಿಬೇಟೆ ವೀರಗಲ್ಲು ಬೈರಸಂದ್ರ ಗ್ರಾಮದಲ್ಲಿ ಪತ್ತೆಯಾಗಿದೆ. ತಾಲೂಕಿನ ಬೈರಸಂದ್ರ ಗ್ರಾಮದ ರಂಗಸ್ವಾಮಯ್ಯನವರ ಜಮೀನಿನಲ್ಲಿ ಉಳುಮೆ ಮಾಡುವಾಗ ವೀರಗಲ್ಲು ಸಿಕ್ಕಿದೆ, ತಕ್ಷಣ ಅದನ್ನು ರಕ್ಷಣೆ ಮಾಡಿ, ಪತ್ರಕರ್ತರೊಬ್ಬರಿಗೆ ಮಾಹಿತಿ ನೀಡಿದ್ದಾರೆ. ಅವರಿಂದ ಮಾಹಿತಿ ಪಡದ ಇತಿಹಾಸತಜ್ಞರಾದ ಗೋಪಾಲ್ರಾವ್ ಮಗ ಬಾಲಸುಬ್ರಹಣ್ಯ, ವೇದಾವತಿ ಹಾಗೂ ಕೆ.ಧನ್ಪಾಲ್, ನರೇಂದ್ರ ಅವರು, ತಕ್ಷಣ ಸ್ಥಳಕ್ಕೆ ಬಂದು ಹುಲಿಬೇಟೆ ವೀರಗಲ್ಲು ಎಂಬುದಾಗಿ …
Read More »ಅಪರಿಚಿತರಿಂದ ಮನೆ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ – ಮನೆ ಕಿಟಕಿ, ಕಾರಿನ ಗಾಜು ಪುಡಿಪುಡಿ
ಬೆಂಗಳೂರು: ಕಾರಿನಲ್ಲಿ ಎಂಟ್ರಿ ಕೊಟ್ಟ ನಾಲ್ವರು ದುಷ್ಕರ್ಮಿಗಳು ಮನೆಯೊಂದರ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಮೈಲಸಂದ್ರ ದಿಣ್ಣೆಪಾಳ್ಯದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ವಿಶ್ವನಾಥ ರೆಡ್ಡಿ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆಗ ತಾನೇ ಊಟ ಮಾಡಿ ಪತ್ನಿ ಮತ್ತು ಸೊಸೆ ಜೊತೆ ಮನೆಯ ಹೊರಗಡೆ ವಿಶ್ವನಾಥ ರೆಡ್ಡಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಕಾರಿನಲ್ಲಿ ಬಂದ ನಾಲ್ವರು ಲಾಂಗು …
Read More »ಕ್ರೈಸ್ತ ಸಮುದಾಯಕ್ಕೆ ಸರ್ಕಾರ ನೀಡಿದ 95 ಕೋಟಿ ಅನುದಾನದಲ್ಲಿ 45 ಕೋಟಿ ಶಿಕ್ಷಣಕ್ಕೆ ಮೀಸಲು: ಸಂಜಯ ಜಾಗಿರದಾರ್
ಕಲಬುರಗಿ: ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯವಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ 95 ಕೋಟಿ ರೂ. ಅನುದಾನದಲ್ಲಿ 45 ಕೋಟಿ ರೂ. ಶಿಕ್ಷಣಕ್ಕೆ ಮೀಸಲಿಡಲಾಗಿದೆ ಎಂದು ಬೆಂಗಳೂರು ಕ್ರೈಸ್ತ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ ಜಾಗಿರದಾರ್ ಹೇಳಿದರು. ನಗರದ ಐವಾನ್-ಎ-ಶಾಹಿ ಹೊಸ ಅಥಿತಿ ಗೃಹ ಸಭಾಂಗಣದಲ್ಲಿ ನಡೆದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ವಿವಿಧ …
Read More »
Laxmi News 24×7