ಬೆಂಗಳೂರು: ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು ಎಂದು ಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ತಮಿಳುನಾಡು ಮಾಜಿ ಸಿಎಂ ಪನ್ನೀರ್ಸೆಲ್ವಂ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ …
Read More »Yearly Archives: 2026
ರಾಜ್ಯ ಸರ್ಕಾರಕ್ಕೆ ಶೀಘ್ರವೇ ಬಿಜೆಪಿ ಬರಗಾಲ ಅಧ್ಯಯನ ವರದಿ ಸಲ್ಲಿಕೆ: ಎನ್.ರವಿಕುಮಾರ್
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಿಜೆಪಿ ತಂಡಗಳ ಬರಗಾಲ ಅಧ್ಯಯನ ಸಂಬಂಧಿತ ವರದಿಯನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬರಗಾಲದ ಅಧ್ಯಯನಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 6 ತಂಡಗಳನ್ನು ರಚಿಸಿದ್ದರು. ತಂಡಗಳು ಜಿಲ್ಲೆಗಳು ಮಾತ್ರವಲ್ಲದೇ ಕೆಲವು ತಾಲೂಕುಗಳಿಗೂ ಭೇಟಿ ನೀಡಿವೆ ಎಂದು ವಿವರಿಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ರಾಜ್ಯ ಸರ್ಕಾರ ನಯಾಪೈಸೆ ಬಿಡುಗಡೆ …
Read More »ಆಟವಾಡುತ್ತಿದ್ದಾಗ ಪಿಲ್ಲರ್ ಕುಸಿದು 10 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ತುಮಕೂರು: ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ಆನಂದ್ ಮೂರ್ತಿ ಅವರ ಮಗ ಧನುಷ್ (10) ಮೃತ ವಿದ್ಯಾರ್ಥಿ. ಧನುಷ್ ಬೆಳಗಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ. ಇಂದು ಬೆಳಗ್ಗೆ ಎಂದಿನಂತೆ ಧನುಷ್ ಶಾಲೆಗೆ ಬಂದಿದ್ದ. ಶಾಲೆ ಆರಂಭವಾಗುವ ಮುನ್ನ ಸ್ನೇಹಿತರ ಜೊತೆ ಶಾಲೆಯ …
Read More »RSS ಸಾವಿರ ಹೆಡೆಗಳ ಸರ್ಪ ಹೇಳಿಕೆಗೆ ಈಗಲು ಬದ್ಧ: ಯತೀಂದ್ರ Last updated: August 18, 2026 11:52 am By Public TV
ಬೆಂಗಳೂರು: ಆರ್ಎಸ್ಎಸ್ ಸಾವಿರ ಹೆಡೆಗಳ ಸರ್ಪ ಹೇಳಿಕೆಗೆ ನಾನು ಈಗಲು ಬದ್ಧ ಎಂದು ಸಚಿವ ಡಾ.ಯತೀಂದ್ರ ಈ ಕುರಿತು ಮಾತನಾಡಿದ ಅವರು, ಆರ್ಎಸ್ಎಸ್ ಸಾವಿರ ಹೆಡೆಗಳ ಸರ್ಪ ಅಂತ ನಾನು ಯಾಕೆ ಹೇಳಿದ್ದೇನೆ ಅಂದರೆ ಅವರು ನೂರಾರು ಅಂಗ ಸಂಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಹೇಳಲು ಮಾತ್ರ ಯಾವುದು ಆರ್ಎಸ್ಎಸ್ಗೆ ಸಂಬಂಧ ಇಲ್ಲ ಎನ್ನುತ್ತಾರೆ. ಆರ್ಎಸ್ಎಸ್ ಪರವಾಗಿ ಕೆಲಸ ಮಾಡುತ್ತಾರೆ. ಜೊತೆಗೆ ಸತತವಾಗಿ ಸಮಾಜದಲ್ಲಿ ಕೋಮುವಾದದ ವಿಷ ಬಿತ್ತುತ್ತಾ ಇರುತ್ತಾರೆ. ಹಾಗಾಗಿ ಆ …
Read More »ಬಿಹಾರದಲ್ಲಿ ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಪಾಟ್ನಾ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಿಹಾರದ ನವಾಡಾ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೃತ ಮಹಿಳೆಯನ್ನು ನಿದಾ ಖಾತೂನ್ (37) ಎಂದು ಗುರುತಿಸಲಾಗಿದೆ. ಅವರ ನಾಲ್ಕು ವರ್ಷದ ಪುತ್ರಿ ಸರಿಯಾ ಖಾತೂನ್ ಹಾಗೂ …
Read More »KRSನಿಂದ ತಮಿಳುನಾಡಿಗೆ 4,917 ಕ್ಯೂಸೆಕ್ ನೀರು ರಿಲೀಸ್
ಮಂಡ್ಯ: ಕಬಿನಿ ಜಲಾಶಯದ ಬಳಿಕ ಇದೀಗ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ವಿಚಾರವೂ ರಾಜ್ಯದಲ್ಲಿ ಚರ್ಚೆಗೆ ಬಂದಿದೆ. ಈ ನಡುವೆ KRS ಜಲಾಶಯಕ್ಕೆ ಕೇವಲ 1,961 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಆದರೆ, ಡ್ಯಾಂನಿಂದ ನದಿಗೆ 4,917 ಕ್ಯೂಸೆಕ್ಗೂ ಅಧಿಕ ನೀರು ಹೊರಬಿಡಲಾಗುತ್ತಿದೆ. KRSನಿಂದ ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಒಳಹರಿವಿಗಿಂತ ಹೊರಹರಿವು ಹೆಚ್ಚಾಗಿರುವುದೇ ಈಗ ರೈತರ ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಕುಡಿಯುವ ನೀರು …
Read More »ಗೋಕರ್ಣದ ತದಡಿಯಲ್ಲಿ ಬೋಟ್ ಮುಳುಗಡೆ – ನಾಲ್ವರು ಮೀನುಗಾರರ ರಕ್ಷಣೆ
ಕಾರವಾರ: ಹೂಳು ಮತ್ತು ಅಲೆಗಳ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಸಮುದ್ರದ ಅಳವೆಯಲ್ಲಿ ಮುಳಗಿ ಹೋಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನ ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಭಾಗದ ತದಡಿ ಬಂದರಿನಲ್ಲಿ ನಡೆದಿದೆ. ಸುರೇಂದ್ರ ಹರಿಕಂತ್ರ ಎನ್ನುವವರಿಗೆ ಸೇರಿದ ಲಕ್ಷ್ಮೀಕೃಪ ಎನ್ನುವ ಹೆಸರಿನ ಬೋಟ್ ಇದಾಗಿದ್ದು, ಇಂದು ಗೋಕರ್ಣದ ತದಡಿಯ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಆದರೇ ಸ್ವಲ್ಪ ದೂರದಲ್ಲೇ ಹೂಳು ತುಂಬಿದ ಅಳವೆಯಲ್ಲಿ …
Read More »ಇಡಿ ದಾಳಿಯ ನಡುವೆಯೂ ಬಿಗ್ ರಿಲೀಫ್ – ಅಮಾನತು ರದ್ದು, ಮತ್ತೆ ಶಿವಶಂಕರಪ್ಪಗೆ ಕೆಪಿಎಸ್ಸಿ ಅಧ್ಯಕ್ಷ ಪಟ್ಟ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಭ್ರಷ್ಟಾಚಾರ ಆರೋಪ ಹಾಗೂ ಜಾರಿ ನಿರ್ದೇಶನಾಲಯದ (ED) ತನಿಖೆಯ ನಡುವೆಯೇ, ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹೈಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ, ನಿಯಮಾವಳಿಗಳ ಉಲ್ಲಂಘನೆಯಾಗಿದೆ. ಕೆಪಿಎಸ್ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟ ಯಾವುದೇ ಸಲಹೆ ಅಥವಾ ಶಿಫಾರಸು …
Read More »ಬಿಡದಿ ಟೌನ್ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್ನಲ್ಲಿ ಇಂದು (ಆ.18) ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ಬಿಡದಿ ಟೌನ್ಶಿಪ್ ವಿರೋಧಿಸಿ ಕರೆ ಕೊಟ್ಟಿದ್ದ ಪಾದಯಾತ್ರೆ ಎರಡೇ ದಿನಕ್ಕೆ ಮೊಟಕುಗೊಳಿಸಲಾಗಿತ್ತು. ಹೀಗಾಗಿ ಇಂದು ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನಾ ಸಮಾವೇಶದ ಮೂಲಕ ವಿರೋಧ ವ್ಯಕ್ತಪಡಿಸಲಾಯ್ತು. ದೇವೇಗೌಡರು, ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಾನು ಚರ್ಚೆಗೆ ಸಿದ್ಧ, ಬನ್ನಿ ಮಾತಾಡೋಣ: ಪ್ರತಿಭಟನಾ ಸಮಾವೇಶದಲ್ಲಿ ಮಾತಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರಕ್ಕೆ ಸವಾಲೆಸೆದರು. …
Read More »ವಂದೇ ಮಾತರಂ ವಿರೋಧಿಸುವವರು ದೇಶ ಬಿಟ್ಟು ಹೋಗಿ: ಬಿಜೆಪಿ ಶಾಸಕ ಚನ್ನಬಸಪ್ಪ
ಬೆಂಗಳೂರು: ವಂದೇ ಮಾತರಂ ಭಾರತದ ಅಸ್ಮಿತೆ. ಅದನ್ನು ವಿರೋಧಿಸುವವರು ದೇಶ ಬಿಟ್ಟು ಹೋಗಿ ಎಂದು ಬಿಜೆಪಿ ಶಾಸಕ ಚನ್ನಬಸಪ್ಪ ಗರಂ ಆಗಿದ್ದಾರೆ. ಸೋನಿಯಾ ಗಾಂಧಿ ಅವರಿಂದ ವಂದೇ ಮಾತರಂಗೆ ಅಪಮಾನ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ, ವಂದೇ ಮಾತರಂ ವಿರೋಧಿಸುವ ಅನೇಕ ಜೀವಿಗಳು ಈ ದೇಶದಲ್ಲಿವೆ. ಸ್ವಾತಂತ್ರ್ಯ ಪೂರ್ವದಲ್ಲಿ ಕೂಡಾ ಇವರು ಈ ರೀತಿಯ ಚಟುವಟಿಕೆಗಳಿಗೆ ಶಕ್ತಿ ಕೊಡುತ್ತಿದ್ದರು. ದೇಶದ ಕಾನೂನು ವಿರೋಧ ಮಾಡಬಹುದು ಎಂಬ ಮಾನಸಿಕತೆ ಅಕ್ಷಮ್ಯ. ವಂದೇ …
Read More »
Laxmi News 24×7