Breaking News

23 ದಿನದ ಹಸುಗೂಸನ್ನೇ ಒಲೆಗೆ ಹಾಕಿ ಸುಟ್ಟು ಹಾಕಿದ ತಾಯಿ…..

Spread the love

ಚಿಕ್ಕಮಗಳೂರು:   ತನ್ನ 23 ದಿನದ ಹೆಣ್ಣುಮಗುವನ್ನು ತಾಯಿಯೇ ಒಲೆಯಲ್ಲಿ ಹಾಕಿ ಹುಟ್ಟು ಹಾಕಿದ ಅಮಾನವೀಯ ಘಟನೆ ಕಡೂರು ತಾಲೂಕಿನ ಕೆರೆ ಸಂತೆ ಗ್ರಾಮದಲ್ಲಿ ನಡೆದಿದೆ.

ಆರೋಪಿಯನ್ನು ಚಂದ್ರಾಬಾಯಿ ಎಂದು ಗುರುತಿಸಲಾಗಿದೆ. ರಮೇಶ್ ನಾಯ್ಕ ಎಂಬಾತನ ಪತ್ನಿ. ಈ ದಂಪತಿಗೆ ಮಾಚ್. 2 ರಂದು ಹೆಣ್ಣು ಮಗು ಜನಿಸಿತ್ತು. ಆಕೆಗೆ ಹೆಣ್ಣು ಮಗು ಬೇಕಿರಲಿಲ್ಲ.  ಹೀಗಾಗಿ ಮಾ.21 ರಂದು ಮಗುವನ್ನು ಒಲೆಗೆ ಹಾಕಿ  ಸುಟ್ಟು ಹಾಕಿದ್ದಳು. ಬಳಿಕ ಮಗುವನ್ನು ನಾಯಿ ಎತ್ತಿಕೊಂಡು ಹೋಗಿದೆ ಎಂದು ಸುದ್ದಿ ಹಬ್ಬಿಸಿದ್ದಳು.

ಪೊಲೀಸ್ ತನಿಖೆ ವೇಳೆ ನಿಜಾಂಶ ಹೊರ ಬಂದಿದೆ. ಈ ಮಹಿಳೆ ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು,  ಕೆಲ ದಿನಗಳ ಹಿಂದಷ್ಟೇ ಖುಲಾಸೆಯಾಗಿದ್ದಳು ಎಂದು ತಿಳಿದು ಬಂದಿದೆ.

ಕಡೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ