Breaking News
Home / ಜಿಲ್ಲೆ / 2 ಕ್ಟಿಂಟಾಲ್ ಮೆಣಸಿನಕಾಯಿಯನ್ನ ರಸ್ತೆಗೆ ಚೆಲ್ಲಿದ ಮಾಜಿ ಸೈನಿಕ

2 ಕ್ಟಿಂಟಾಲ್ ಮೆಣಸಿನಕಾಯಿಯನ್ನ ರಸ್ತೆಗೆ ಚೆಲ್ಲಿದ ಮಾಜಿ ಸೈನಿಕ

Spread the love

10 ಚೀಲದಷ್ಟು ಸುರಿದ ಎಲ್ಲವನ್ನೂ ಬಾಚಿಕೊಂಡ್ರು

ಮಡಿಕೇರಿ: ಕೊರೊನಾ ವೈರಸ್ ಭೀತಿ ಒಂದು ಕಡೆಯಾದರೆ, ಮತ್ತೊಂದು ಕಡೆ ರೈತ ಬೆಳೆದ ತರಕಾರಿಗಳನ್ನು ಮಾರಾಟ ಮಾಡಲು ಸರಿಯಾದ ವ್ಯವಸ್ಥೆ ಇಲ್ಲ. ಇದರಿಂದ ಮಾಜಿ ಸೈನಿಕರೊಬ್ಬರು ತಮ್ಮ ಒಂದು ಎಕರೆ ಭೂಮಿಯಲ್ಲಿ ಬೆಳೆದ ಹಸಿಮೆಣಸಿನಕಾಯಿಯನ್ನು ರಸ್ತೆಗೆ ಚೆಲ್ಲಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯಲ್ಲಿ ನಡೆದಿದೆ.

ಕೊಡ್ಲಿಪೇಟೆ ಹೊಸಮುನ್ಸಿಪಾಲ್ಟಿ ನಿವಾಸಿ ನಿವೃತ ಯೋಧ ದೇವರಾಜ್ ಅವರು ಮೆಣಸಿನಕಾಯಿಯನ್ನ ರಸ್ತೆಗೆ ಚೆಲ್ಲಿದ್ದಾರೆ. ಒಂದು ಎಕರೆಯಲ್ಲಿ ಬೆಳೆದಿದ್ದ ಹಸಿರುಮೆಣಸಿಕಾಯಿ ಕಟಾವಿಗೆ ಬಂದಿತ್ತು. ಆದರೆ ಕೊರೊನಾದಿಂದ ದೇಶವೇ ಲಾಕ್‍ಡೌನ್ ಆಗಿರುವ ಕಾರಣದಿಂದಾಗಿ ರೈತರಿಂದ ಉತ್ತಮ ಬೆಲೆಗೆ ಖರೀದಿಸುವವರಿಲ್ಲ. ಇತ್ತ ಮೆಣಸಿನಕಾಯಿ ಹಣ್ಣಾಗಿ ಕೊಳೆತು ಹೋಗುವ ಪರಿಸ್ಥಿತಿಯನ್ನು ಕಂಡ ದೇವರಾಜ್ ಕೊಡ್ಲಿಪೇಟೆ ಬಸ್ ನಿಲ್ದಾಣದಲ್ಲಿ ಮೆಣಸಿನಕಾಯಿಯನ್ನ ಸುರಿದು ಜನರಿಗೆ ಉಚಿತವಾಗಿ ತೆಗೆದುಕೊಂಡು ಹೋಗುವಂತೆ ಕೂಗಿ ಹೇಳಿದ್ದಾರೆ.

ಇದನ್ನು ಕಂಡು ಜನರು ಮುಗಿಬಿದ್ದು ತಮಗೆ ಬೇಕಾದಷ್ಟು ಮೆಣಸಿನಕಾಯಿಯನ್ನು ಬಾಚಿಕೊಂಡು ಹೋಗಿದ್ದಾರೆ. ಸುಮಾರು 20 ಕೆ.ಜಿ ತೂಕದ ಹತ್ತು ಚೀಲದಷ್ಟು ಮೆಣಸಿನಕಾಯಿ ರಸ್ತೆಯಲ್ಲಿ ಸುರಿದ್ದನ್ನು ಒಂದು ಬೀಡದೆ ಜನರು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ ಜನರು ಸಾಮಾಜಿಕ ಅಂತರವನ್ನು ಕೂಡ ಕಾಯ್ದುಕೊಂಡಿಲ್ಲ.

ಈ ವ್ಯಾಪ್ತಿಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ರೈತರು ತಮ್ಮ ಹೊಲ-ಗದ್ದೆಗಳಲ್ಲಿ ಮೆಣಸಿನಕಾಯಿಯನ್ನು ಬೆಳೆಯುತ್ತಾರೆ. ಅವುಗಳೆಲ್ಲ ಇದೀಗ ಕೊಯ್ಲಿಗೆ ಬಂದಿದ್ದರೂ ಮಾರಾಟ ಮಾಡಲು ಮಾರುಕಟ್ಟೆ ಇಲ್ಲದೆ ನಷ್ಟ ಅನುಭವಿಸುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ