Breaking News

ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಅಡಿಕೆ ತೋಟ ಹಾಗೂ ಬೆಟ್ಟದ ಮರಗಿಡ ಸಂಪೂರ್ಣ ಸುಟ್ಟು ಹೋಗಿದೆ.

Spread the love

ಶಿರಸಿ: ಉ.ಕ ಜಿಲ್ಲೆಯ ಶಿರಸಿ ತಾಲೂಕಿನ ಹುಲೇಕಲ್ ಪಂಚಾಯತ ವ್ಯಾಪ್ತಿಯ ಅಮಚಿಮನೆ ಗ್ರಾಮದಲ್ಲಿ ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಅಡಿಕೆ ತೋಟ ಹಾಗೂ ಬೆಟ್ಟದ ಮರಗಿಡ ಸಂಪೂರ್ಣ ಸುಟ್ಟು ಹೋಗಿದೆ.

 ಭವಾನಿ ಹೆಗಡೆ ಮತ್ತು ಎಮ್.ವಿ.ಹೆಗಡೆಯವರಿಗೆ ಸೇರಿದ ೨ ಎಕರೆ ಮಾಲ್ಕಿ ಬೆಟ್ಟ ಮತ್ತು ಅರ್ಧ ಎಕರೆ ಅಡಿಕೆ ತೋಟಕ್ಕೆ ಬುಧವಾರ ಮಧ್ಯಾಹ್ನ ಬೆಂಕಿ ತಗುಲಿದ್ದು  ಕೊಟ್ಯಾಂತರ ರೂ. ಹಾನಿಯಾಗಿದೆ.

 

ಹಾನಿಯಿಂದ ರೈತ ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ. ಹೊಗೆ ಕಾಣಿಸಿಕೊಂಡ ತಕ್ಷಣ ಕಾರ್ಯಪ್ರವೃತ್ತರಾದ ಕುಟುಂಬದ ಸದಸ್ಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಉರಿಯುವ ಬೆಂಕಿಯು ನೋಡ ನೋಡುತ್ತಿದ್ದಂತೆ ಫಸಲು ನೀಡುತ್ತಿದ್ದ ಹಳೆ ತೋಟದಲ್ಲಿ ಹರಡಿ, ತೋಟವನ್ನು ಸುಟ್ಟು ಹಾಕಿದೆ. ಕುಟುಂಬದವರು, ಸ್ಥಳೀಯರು ಅಸಹಾಯಕರಾಗಿ ನಿಲ್ಲುವಂತಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಈ ಬಗ್ಗೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನ

Spread the loveಬೆಂಗಳೂರು: ಹುಡುಗಿಯರನ್ನ ಇಟ್ಟುಕೊಂಡು ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್‌ ಒಬ್ಬನನ್ನ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೇತನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ