Breaking News

ತಮ್ಮ ವೇತನದಿಂದ ಕಂಟೈನ್ಮೆಂಟ್ ಝೋನ್‍ನಲ್ಲಿರೋ ಬಡವರಿಗೆ ಉಚಿತ ದಿನಸಿ ವಿತರಿಸ್ತಿರೋ ಪೇದೆ

Spread the love

ಬೆಳಗಾವಿ/ಚಿಕ್ಕೋಡಿ: ಕಂಟೈನ್ಮೆಂಟ್ ಝೋನ್‍ನಲ್ಲಿರುವ ಬಡ ಜನರು ಹೊರಗೆ ಬರಲಾಗದೆ ಅವರ ಜೀವನ ತುಂಬಾ ಕಷ್ಟವಾಗಿದೆ. ಇದೀಗ ಇವರ ಸ್ಥಿತಿಯನ್ನ ನೋಡಿ ಪೊಲೀಸ್ ಕಾನ್ಸ್‌ಟೇಬಲ್ ಸಹಾಯ ಮಾಡುತ್ತಿದ್ದಾರೆ.

ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಬಿ.ಕೆ.ನಾಗನೂರೆ ದಿನನಿತ್ಯ ಬಡವರಿಗೆ ತರಕಾರಿ ಹಂಚುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸಂಕೇಶ್ವರ ಪಟ್ಟಣವನ್ನ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.

ಸಂಕೇಶ್ವರ ಪಟ್ಟಣದಲ್ಲಿ ಬಡವರು ದಿನಗೂಲಿ ಇಲ್ಲದೇ ಆಹಾರಕ್ಕಾಗಿ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಅವರು ದಿನನಿತ್ಯ ಎಪಿಎಂಸಿ ಯಾರ್ಡ್‌ನಿಂದ ತರಕಾರಿ ಖರೀದಿಸಿ ಬಡವರಿಗೆ ತರಕಾರಿ ಸೇರಿದಂತೆ ದಿನಸಿ ಸಾಮಗ್ರಿಗಳನ್ನ ಹಂಚುತ್ತಿದ್ದಾರೆ.

ಸಂಕೇಶ್ವರ ಪಟ್ಟಣದ ವಿವಿಧ ಬಡಾವಣೆಗಳಿಗೆ ತೆರಳಿ ತಮ್ಮಿಂದ ಆದ ಸಹಾಯವನ್ನ ಪೊಲೀಸ್ ಪೇದೆ ಮಾಡುತ್ತಿದ್ದಾರೆ. ಬಡವರ ಸ್ಥಿತಿ ನೋಡಿ ತಮ್ಮ ವೇತನದ ಹಣದಿಂದ ಸಹಾಯ ಮಾಡುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.


Spread the love

About Laxminews 24x7

Check Also

ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ‌ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Spread the love ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ‌ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ: ಕಠಿಣವಾದ ಪರಿಶ್ರಮ,ಶ್ರಧ್ದೆಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ