Breaking News

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ : ಎಂ.ಪಿ.ರೇಣುಕಾಚಾರ್ಯ

Spread the love

ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ರೇಣುಕಾಚಾರ್ಯ, ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಬಿಜೆಪಿ ಕೇಂದ್ರ ನಾಯಕರ ತಂತ್ರಗಾರಿಕೆಯೇ ಸೋಲಿಗೆ ಕಾರಣ ಎಂದಿದ್ದಾರೆ.

ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ ರಾಜ್ಯಕ್ಕಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ಬೆಲೆ ಏರಿಕೆಯಂತ ಸಂದರ್ಭದಲ್ಲಿ ಉಚಿತ ಅಕ್ಕಿ ಕಡಿತ ಮಾಡಿದ್ದು ತಪ್ಪು ನಿರ್ಧಾರ. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

ಟೊಮೊಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡ ಕಾಡಾನೆ ಓಡೋಡಿ ಬಂದು ತಿಂದಿದೆ.

Spread the loveಚಾಮರಾಜನಗರ: ಕಾಡಾನೆಗೆ ಊಟ, ರೈತನಿಗೆ ಪ್ರಾಣ ಸಂಕಟ ಎಂಬಂತೆ ನಡುರಸ್ತೆಯಲ್ಲಿ ಪಲ್ಟಿಯಾದ ಈಚರ್ ವಾಹನ ಕಂಡು ಕಾಡಾನೆಯೊಂದು ಓಡೋಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ