Breaking News

ಬಾಲಕನ ಮೈಯಲ್ಲಿ ದೆವ್ವ ಇದೆ ಎಂದು ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಮಂತ್ರಿವಾದಿ

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗದ ಶಿರಗೂರಿನಲ್ಲಿ ಅಸ್ವಸ್ಥ ಬಾಲಕನ ಮೈಯಲ್ಲಿ ದೆವ್ವ ಇದೆ ಎಂದು ಕುಟುಂಬಸ್ಥರನ್ನು ನಂಬಿಸಿ ಮಂತ್ರಿವಾದಿ ಓರ್ವ ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಾಜ್​ ತಾಲ್ಲೂಕಿನ ಬಾಲಕ ಆರ್ಯನ್ ದೀಪಕ್​ ಲಂಡ್ಗೆ (14) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಅಪ್ಪಾ ಸಾಹೇಬ್​ ಕಾಂಬ್ಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಯ ಹಿನ್ನೆಲೆ :
ಆರ್ಯನ್​ ಕಳೆದ ಕೆಲವು ದಿನಗಳಿಂದ ತೀವ್ರ ಜ್ಷರದಿಂದ ಬಳಲುತ್ತಿದ್ದ. ಇನ್ನೂ ವೈದ್ಯರು ಹಾಗೂ ಆಯುರ್ವೇದದ ಔಷಧಿಗಳಿಗೂ ಆತ ಗುಣಮುಖನಾಗಿರಲಿಲ್ಲ. ಇದೇ ವೇಳೆ ಆರ್ಯನ್​ ಕುಟುಂಬಸ್ಥರಿಗೆ ಸ್ನೇಹಿತರೊಬ್ಬರು ಮಂತ್ರವಾದಿ ಅಪ್ಪಾ ಸಾಹೇಬ್ ನನ್ನು ಭೇಟಿಯಾಗುವಂತೆ ಹೇಳಿದ್ದಾರೆ.ಸ್ನೇಹಿತನ ಮಾತನ್ನು ನಂಬಿದ ಕುಟುಂಬಸ್ಥರು ಅಸ್ವಸ್ಥ ಆರ್ಯನ್​ನನ್ನು ಕರೆದುಕೊಂಡು ಶಿರಗೂರಿನಲ್ಲಿರುವ ಅಪ್ಪಾ ಸಾಹೇಬ್​ನನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಆರೋಪಿಯೂ ಬಾಲಕನ ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ಕುಟುಂಬಸ್ಥರನ್ನು ನಂಬಿಸಿ ಆತನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಅಸ್ವಸ್ಥ ಬಾಲಕನನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆರ್ಯನ್​ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿದೆ.

Spread the love ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ