“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು”
ಹುಕ್ಕೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇಲ್ಲಿನ ಸಮೀಪದ ಮಸರಗುಪ್ಪಿ ಬಳಿಯ ಹಿರಣ್ಯಕೇಶಿ ನದಿಯ ಹೂಳೆತ್ತುವ ಮತ್ತು ಪುನಶ್ಚೇತನಗೊಳಿಸುವ ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಬಳಿಕ ಸಮೀಪದ ಚಿಕ್ಕಾಲಗುಡ್ಡ ಗ್ರಾಮದಲ್ಲಿ ಕೈಷಿ ಇಲಾಖೆಯಿಂದ ರೈತರಿಗೆ ಬೀಜ ವಿತರಣೆ ಕಾರ್ಯಕ್ರಮವನ್ನು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಜಿ.ಪಂಚಾಯತಿ ಸಿಇಒ ರಾಜೇಂದ್ರ, ಹುಕ್ಕೇರಿ ತಾ.ಪಂ.ಅಧ್ಯಕ್ಷ ದಸ್ತಗೀರ ಬಸ್ಸಾಪುರೆ, ಜಿ.ಪಂ. ಸದಸ್ಯ ಮಹಾಂತೇಶ ಮಗದುಮ್ಮ, ತಾ.ಪಂ ಸದಸ್ಯ ಕುಶಾಲ ಕೋತ್, ಆನಂದ ಕುಲಕರ್ಣಿ, ಪ್ರಶಾಂತ ಡಾಂಗೆ, ಭರಮಣ್ಣ ಡಂಗಿ ಯಲ್ಲಪ್ಪ ತೋರಗಲ್ ಕೃಷಿ ಸಹಾಯಕ ನಿರ್ದೇಶಕ ಪಟಗುಂದಿ ಇದ್ದರು.
ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ: ಕೊರೋನಾ ಹಿನ್ನೆಲೆ ಹುಕ್ಕೇರಿ ತಾಲೂಕಿನ ಮನಗುತ್ತಿ ಮತ್ತು ದಡ್ಡಿ ಗ್ರಾಮದಲ್ಲಿನ ಕ್ವಾರಂಟೈನ್ ಕೇಂದ್ರಗಳಿಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಮತ್ತು ಮುಂಜಾಗ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.
https://youtu.be/icAGnbjiJo0
Laxmi News 24×7