ಲೋಕಾಯುಕ್ತ ದಾಳಿ: ಏಳು ಕೋಟಿ ಮೌಲ್ಯದ ಬಂಗಲೆ ಒಡೆಯ ಪಿಡಿಒ!

Spread the love

ದೊಡ್ಡಬಳ್ಳಾಪುರ: ಬೆಂಗಳೂರಿನ ರಾಜಾನುಕುಂಟೆಯ ಕಾಕೋಳು ರಸ್ತೆಯಲ್ಲಿ ಅಂದಾಜು ₹7 ಕೋಟಿ ಬೆಲೆ ಬಾಳುವ ಭವ್ಯ ಬಂಗಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಸೋತೇನಹಳ್ಳಿ ಗ್ರಾಮದಲ್ಲಿ ಮನೆ, ಗುಂಜೂರು ಗ್ರಾಮದ ಸಮೀಪದ ಕೃಷಿ ಜಮೀನು, ದೊಡ್ಡಬಳ್ಳಾಪುರದ ಟಿ.ಬಿ.ನಾರಾಯಣಪ್ಪ ಬಡಾವಣೆಯಲ್ಲಿ ವಾಣಿಜ್ಯ ಸಂಕೀರ್ಣ…

 

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಂಗಸ್ವಾಮಿ ಮನೆಯಲ್ಲಿ ದಾಖಲೆ ಪರಿಶೀಲನೆಯಲ್ಲಿ ದೊರೆತ ಆಸ್ತಿಗಳ ದಾಖಲೆ ಕಂಡು ಖುದ್ದು ಲೋಕಾಯುಕ್ತ ಅಧಿಕಾರಿಗಳೇ ಆಶ್ಚರ್ಯ ಚಕಿತರಾಗಿದ್ದಾರೆ.

ಪಾಲನಜೋಗಹಳ್ಳಿ ನಿವಾಸದಲ್ಲೂ ಶೋಧ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ರಂಗಸ್ವಾಮಿ ಅವರ ಅಳಿಯ ಹಾಗೂ ರಾಜಾಜಿನಗರದ ಕಂದಾಯ ನಿರೀಕ್ಷಕ ಶ್ರೀನಿವಾಸ್ ಅವರ ಬೆಂಗಳೂರಿನ ಮನೆಯಲ್ಲಿಯೂ ಅಧಿಕಾರಿಗಳು ಶೋಧ ನಡೆಸಿದ್ದಾರೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ