Breaking News
Home / ರಾಜಕೀಯ / ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ

ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ

Spread the love

ಬೆಂಗಳೂರು, ಜೂ.6- ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬೀದಿಗಿಳಿದು ಹೋರಾಟ ನಡೆದಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರು, ಪದಾಕಾರಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಬಿಜೆಪಿ ಸರ್ಕಾರವಿದ್ದಾಗ ಹಾಲಿಗೆ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‍ಗೆ 5 ರೂ. ನೀಡಲಾಗುತ್ತಿತ್ತು. ಇದೀಗ ಬಂದಿರುವ ಕಾಂಗ್ರೆಸ್ ಸರ್ಕಾರ 1.5 ರೂ. ಕಡಿತ ಮಾಡಿದೆ. ಇದರಿಂದ ಬಡ ರೈತರಿಗೆ ತೊಂದರೆಯಾಗಲಿದೆ. ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ಹಾಲಿನ ಪ್ರೋತ್ಸಾಹಧನ ಕಡಿಮೆ ಮಾಡದಿರಲು ಒತ್ತಾಯಿಸಿದೆ.

ಮೊನ್ನೆಯವರೆಗೂ 200 ಯುನಿಟ್‍ವರೆಗೆ ವಿದ್ಯುತ್ ಉಚಿತ ಎಂದಿದ್ದ ಸಿದ್ದರಾಮಯ್ಯ ಸರ್ಕಾರ, ಈಗ 80 ಯುನಿಟ್‍ವರೆಗೆ ಎಂದು ಆದೇಶ ಹೊರಡಿಸಿ ಜನವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆರೋಪಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ