Breaking News

ರಾಜ್ಯದಲ್ಲಿ ಇಂದು 23 ಜನರಲ್ಲಿ ಕೊರೊನಾ,ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

Spread the love

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಗೆ ಒಂದು ದಿನ ಮಾತ್ರ ಬಾಕಿಯಿದ್ದು, ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಕೂಡ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, ಹಾಸನ 3 ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, ಉಡುಪಿಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಪತ್ತೆಯಾದ 14 ಸೋಂಕಿತರು ಕೊರೊನಾ ರೋಗಿಯ ಜತೆ ದ್ವಿತೀಯ ಸಂಪರ್ಕದಲ್ಲಿದ್ದವರಾಗಿದ್ದಾರೆ. ಇನ್ನು ರಾಜ್ಯದಲ್ಲಿ 548 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ