Breaking News

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಸ್ಟೇಟಸ್ ಹಾಕುವ ಮೂಲಕ ಶಾಂತಿ ಕದಡುವವರನ್ನು ಬಿಡುವುದಿಲ್ಲ: S.P. ಸಂಜೀವ್ ಪಾಟೀಲ್

Spread the love

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಸ್ಟೇಟಸ್ ಹಾಕುವ ಮೂಲಕ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಸ್ಪಿ ಸಂಜೀವ್ ಪಾಟೀಲ್ ಎಚ್ಚರಿಸಿದ್ದಾರೆ.

ಇಂದು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಮಿತಿ ಸಭೆ ನಡೆಸುವಂತೆ ಎಸ್ಪಿ ಸಂಜೀವ್ ಪಾಟೀಲ್ ಸೂಚನೆ ನೀಡಿದರು.ಈ ನಿಟ್ಟಿನಲ್ಲಿ ಅವರು ಎಲ್ಲ ಮುಖಂಡರಿಗೂ ಈ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇಂದು ಎಲ್ಲ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಯಾವುದೇ ಯುವಕರು ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸಲು ಇಂಟರ್ನೆಟ್ ಬಳಸಬಾರದು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ