Breaking News

ಲಾರಿ ತಡೆದು ಹಣ ವಸೂಲಿ ಆರೋಪ ; ಎಎಸ್‌ಐ ಸೇರಿದಂತೆ ಇಬ್ಬರು ಪೊಲೀಸರು ಸಸ್ಪೆಂಡ್.!

Spread the love

ತುಮಕೂರು : ತುಮಕೂರು ಮತ್ತು ಶಿರಾ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ಎಎಸ್‌ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ತುಮಕೂರು ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಆದೇಶ ಹೊರಡಿಸಿದ್ದಾರೆ.

ಕಳ್ಳಂಬೆಳ್ಳ ಠಾಣೆಯ ಎಎಸ್‌ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇವರು ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದರು. ಪ್ರತಿ ಲಾರಿಗೆ 200, 300 ರೂಪಾಯಿ ವಸೂಲಿ ಮಾಡುತ್ತಿದ್ದರು. ಲಾರಿ ಚಾಲಕರಿಂದ ಹಣ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು.

ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರ ಲಂಚಬಾಕತನವನ್ನು ನೋಡಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.ಹಣ ವಸೂಲಿ ಪ್ರಕರಣ ಗಮನಕ್ಕೆ ಬರುತ್ತಿದ್ದಂತೆ ವರದಿ ಕೊಡುವಂತೆ ಶಿರಾ ಪೊಲೀಸ್ ಇನ್ಸ್​ಪೆಕ್ಟರ್​ಗೆ ತುಮಕೂರು ಎಸ್ಪಿ ಸೂಚನೆ ನೀಡಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ: ಹಂತಕ ಫಯಾಜ್ ಜಾಮೀನು ಅರ್ಜಿ ವಜಾ

Spread the loveಧಾರವಾಡ, (ಸೆಪ್ಟೆಂಬರ್ 03): ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ (Neha Hiremath Murder Case) ಆರೋಪಿ ಫಯಾಜ್ ( accused …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ