Breaking News

ಹಾವೇರಿ ಗೋಲಿಬಾರ್​ಗೆ 16 ವರ್ಷ.

Spread the love

ಹಾವೇರಿ: ಇಂದಿಗೆ ಹಾವೇರಿಯಲ್ಲಿ ಗೋಲಿಬಾರ್ ನಡೆದು 16 ವರ್ಷ ಕಳೆದಿವೆ.

ಈ ಹಿನ್ನೆಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ನಗರದಲ್ಲಿ ನಡೆದ ರೈತ ಹುತಾತ್ಮ ದಿನಾಚರಣೆಯಲ್ಲಿ ರೈತರು ಭಾಗವಹಿಸುವ ಮೂಲಕ ಬಸ್ ನಿಲ್ದಾಣದ ಬಳಿ ಇರುವ ಹುತಾತ್ಮ ರೈತ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಈ ವೇಳೆ ವಿವಿಧ ರೈತ ಮುಖಂಡರು ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ ಸಲ್ಲಿಸಿದರು.

10 ಜೂನ್ 2008 ರ ಗೋಲಿಬಾರ್‌ನಲ್ಲಿ ಹುತಾತ್ಮರಾಗಿದ್ದ ರೈತ ಸಿದ್ದಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೊನ್ನತ್ತಿ ಅಮರ್​ ರಹೇ ಅಮರ್​ ರಹೇ ಎಂದು ಘೋಷಣೆ ಕೂಗಿದರು. ವಿವಿಧ ರೈತ ಸಂಘದ ಪದಾಧಿಕಾರಿಗಳು ಹುತಾತ್ಮರಿಗೆ ಮೌನಾಚರಣೆ ಮೂಲಕ ನಮನ ಸಲ್ಲಿಸಿದರು.

ಹುತಾತ್ಮ ರೈತರಿಗೆ ಜಯಘೋಷ ಹಾಕಿದ ವಿವಿಧ ಸಂಘಟನೆಯ ರೈತರು ಹಸಿರು ಟವೆಲ್ ಬೀಸಿ ಜಯಕಾರ ಹಾಕಿದರು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ್ ಮಾತನಾಡಿ, ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜವಾನರು ದೇಶ ಕಾಯದೆ ಇದ್ದರೇ, ಕಿಸಾನ್ ಒಕ್ಕಲುತನ ಮಾಡದಿದ್ದರೇ ದೇಶ ಪರಿಸ್ಥಿತಿ ಹದಗೆಟ್ಟು ಹೋಗುತ್ತದೆ. ರೈತ ಬೆಳೆ ಬೆಳೆಯದಿದ್ದರೆ ಊಹಿಸಲಾಗದಷ್ಟು ದೇಶದಲ್ಲಿ ಗಂಡಾಂತರ ಸಮಸ್ಯೆಗಳು ಉದ್ಬವಿಸುತ್ತವೆ ಎಂದರು.

 


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ