Breaking News

ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿ ಆರೋಪ: ಸಿಎಂ – ಡಿಸಿಎಂ ಸೇರಿ 36 ಮಂದಿಗೆ ಸಮನ್ಸ್

Spread the love

ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ತೆಗೆ ಅಡ್ಡಿ ಪಡಿಸಿದ್ದ ಆರೋಪದಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

 

ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಚಾರದ ಆರೋಪ ಎದುರಾಗಿದ್ದ ಸಂದರ್ಭದಲ್ಲಿ ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ಕಾಂಗ್ರೆಸ್‌ನ ಹಲವು ಮುಖಂಡರು ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮೆರವಣಿಗೆ ಮೂಲಕ ಮುಂದಾಗಿದ್ದರು.

ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಕರಣದ ಎಲ್ಲ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 28ಕ್ಕೆ ನಿಗದಿ ಪಡಿಸಿದೆ


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ