Breaking News

ಮಳೆ ಇಲ್ಲದೇ ಕಂಗಾಲಾಗಿದ್ದಾನೆ.ರೈತ

Spread the love

ಧಾರವಾಡ: ಮೊದಲೇ ಮಳೆ ಇಲ್ಲದೇ ರೈತ ಕಂಗಾಲಾಗಿದ್ದಾನೆ. ಹೀಗಿರುವಾಗ ರೈತ ಅಷ್ಟೋ ಇಷ್ಟೋ ಬೆಳೆದ ಬೆಳೆ ದನಗಳ ಪಾಲಾಗುತ್ತಿದೆ. ಇದರಿಂದ ಮತ್ತಷ್ಟು ಕಂಗಾಲಾಗಿರುವ ರೈತ ತಾವು ಬೆಳೆದ ಬೆಳೆಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾನೆ.

ದೃಶ್ಯಗಳಲ್ಲಿ ಕಾಣುತ್ತಿರುವ ಈ ರೈತರು ಧಾರವಾಡ ತಾಲೂಕಿನ ಯರಿಕೊಪ್ಪ ಹಾಗೂ ಮನಸೂರು ಗ್ರಾಮದವರು. ನೀರಾವರಿ ಮಾಡಿಕೊಂಡು ಅಷ್ಟೋ ಇಷ್ಟೋ ಬೆಳೆಯನ್ನು ರೈತರು ಬೆಳೆದಿದ್ದಾರೆ. ಆದರೆ, ತಡಸಿನಕೊಪ್ಪ ಹಾಗೂ ಜೋಗೆಲ್ಲಾಪುರದ ದನಗಳು ಹೊಲಗಳಿಗೆ ನುಗ್ಗಿ

ಬೆಳೆ ತಿಂದು ಹಾಕುತ್ತಿವೆ. ಹಗಲು ರಾತ್ರಿ ನಾವು ದನಗಳನ್ನು ಕಾಯುವುದೇ ಕಾಯಕವಾಗಿದೆ. ಹೀಗಾಗಿ ಜಿಲ್ಲಾಡಳಿತ ತಡಸಿನಕೊಪ್ಪ ಹಾಗೂ ಜೋಗೆಲ್ಲಾಪುರ ಗ್ರಾಮದ ಪಂಚಾಯ್ತಿಗೆ ಸೂಕ್ತ ನಿರ್ದೇಶನ ನೀಡಿ ಯರಿಕೊಪ್ಪ ಹಾಗೂ ಮನಸೂರು ಗ್ರಾಮಗಳ ಸುತ್ತ ದನಗಳನ್ನು ಬಿಡದಂತೆ ಡಂಗುರ ಸಾರಿಸಬೇಕು ಎಂದು ಆಗ್ರಹಿಸಿದರು.

ಈ ರೀತಿ ರೈತರ ಹೊಲಗಳಿಗೆ ದನಗಳನ್ನು ಬಿಟ್ಟು ಬೆಳೆ ನಾಶಪಡಿಸುತ್ತಿರುವವರ ಮೇಲೆ ಸೂಕ್ತ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಬೇಕು ಎಂದು ರೈತರು ಇದೇ ಸಂದರ್ಭದಲ್ಲಿ ಅಗ್ರಹಸಿದ್ದರು


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ