Breaking News

ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಕಾಂಗ್ರೆಸ್: ಶಶಿಕಲಾ ಜೊಲ್ಲೆ

Spread the love

ಬೆಳಗಾವಿ: ಸುಮ್ಮನೆ ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಇನ್ನೊಬ್ಬರ ವಿರುದ್ಧ ಸುಮ್ಮನೆ ಆಪಾದನೆ ಮಾಡೋದು ಕಾಂಗ್ರೆಸ್ ಮುಖಂಡರ ಕೆಲಸ. ಪ್ರಧಾನಿ ಮೋದಿ ಮೇಲೆ ಆಪಾದನೆ ಮಾಡೋದು ಎಷ್ಟು ಸಮಂಜಸ ಅಂತಾ ಅವಲೋಕನ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಅಕ್ಕಿ ಕೊಡುತ್ತಿಲ್ಲವೆಂದು ಮೋದಿ ಟಾರ್ಗೆಟ್ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅದನ್ನು ನಾವು ಖಂಡನೆ ಮಾಡುತ್ತೇವೆ.‌ ಕಾಂಗ್ರೆಸ್​​ನವರು ಮೋದಿ ಮೇಲೆ ಸುಖಾಸುಮ್ಮನೆ ಆರೋಪ‌ ಮಾಡಿದ್ದಾರೆ. ಮೋದಿ ಅವರು ಕೊಟ್ಟ ಅಕ್ಕಿಯೂ ಇದೆ. ತಾವೂ 10 ಕೆಜಿ ಅಕ್ಕಿ ಕೊಡ್ತೇನಿ ಅಂತಾ ಹೇಳಿದ್ದೀರಿ. ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಕೊಡ್ತೇದೆ ಅಂತಾ ಹೇಳಿದ್ರೆ ನಾವು ಒಪ್ಪಿಕೊಳ್ಳುತ್ತಿದ್ದೆವು. ನಾವು ಈವಾಗ ಡಿಮ್ಯಾಂಡ್ ಮಾಡೋದು ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ರಾಜ್ಯ ಸರ್ಕಾರದ 10 ಕೆಜಿ ಅಕ್ಕಿ ಸೇರಿ 15 ಕೆಜಿ ಅಕ್ಕಿ ಕೊಡಬೇಕು ಅಂತಾ. ಅವಾಗ್ಗೆ ಆ ಯೋಜನೆಯನ್ನು ನಾವು ಒಪ್ಪಿಕೊಳ್ಳುತ್ತೇವೆ‌ ಎಂದು ಆಗ್ರಹಿಸಿದರು.

ಗ್ಯಾರಂಟಿ ಯೋಜನೆ ಜಾರಿಗೆ ವಿಳಂಬ ವಿಚಾರಕ್ಕೆ ಪ್ರತಿಕ್ಷಿಯಿಸಿದ ಶಶಿಕಲಾ ಜೊಲ್ಲೆ ಅವರು, ರಾಜ್ಯದ ಹೆಣ್ಣು ಮಕ್ಕಳು ಗ್ಯಾರಂಟಿ ಯೋಜನೆ ನಂಬಿ ಕುಳಿತಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ಅದು ಜಾರಿ ಆಗದೇ, ಸಮಸ್ಯೆ ನೋಡಿ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ. ಜನರಿಗೆ ಗ್ಯಾರಂಟಿ ಯೋಜನೆ ಸಿಗುತ್ತೆ ಇಲ್ಲೋ ಅನ್ನೋದು ನಾನು ಮಾತಾಡುವುದಕ್ಕಿಂತ ಸುಮ್ಮನೆ ಕುಳಿತು ನೋಡುವ ಕೆಲಸ ಮಾಡ್ತೇವಿ. ವೇಟ್ ಆಯಂಡ್ ವಾಚ್ ಮಾಡಿ ಆ ಮೇಲೆ ಮಾತನಾಡುತ್ತೇವೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

 


Spread the love

About Laxminews 24x7

Check Also

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರಧಾನ

Spread the loveವಿಕಲಚೇತನರನ್ನು ಆರ್ಥಿಕವಾಗಿ ಸ್ವಾಲವಂಬಿಗಳನ್ನಾಗಿ ಮಾಡಲು ಡಿಯಾಜಿಯೊ ಇಂಡಿಯಾ, ಅಂಗವಿಕಲ ವ್ಯಕ್ತಿಗಳ ಕೌಶಲ್ಯ ಮಂಡಳಿ ಸಹಭಾಗಿತ್ವದಲ್ಲಿ ಕೌಶಲ್ಯ ತರಬೇತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ