Breaking News

ಊರಿಗೆ ತೆರಳಲು ನಿಲ್ಲಿಸದ ಬಸ್​ಗೆ ಕಲ್ಲೆಸೆದ ಮಹಿಳೆ.. 5000 ದಂಡ,

Spread the love

ಕೊಪ್ಪಳ: ತನ್ನ ಊರಿಗೆ ತೆರಳಲು ಯಾವುದೊಂದು ಬಸ್​ ನಿಲ್ಲಿಸದ ಕಾರಣ, ಕೊಪ್ಪಳದಿಂದ – ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್​ಗೆ ಮಹಿಳೆಯೊಬ್ಬರು ಕಲ್ಲೆಸೆದ ಘಟನೆ ಕೊಪ್ಪಳದಲ್ಲಿ ಜರುಗಿದೆ.

ಕೊಪ್ಪಳದ ಹೊಸಲಿಂಗಾಪುರ ಬಳಿ ಈ ಘಟನೆ ನಡೆದಿದೆ. ಇಲಕಲ್ಲ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬಾಕೆ ಕೊಪ್ಪಳದ ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಹುಲಿಗೆಮ್ಮನ ದರ್ಶನ ಪಡೆದು ಲಿಂಗಾಪುರ ಬಳಿ ಬಸ್​ಗಾಗಿ ಮಳೆಯಲ್ಲಿ ಕಾದು ಕುಳಿತಿದ್ದ ಲಕ್ಷ್ಮಿಗೆ ತನ್ನ ಊರಿಗೆ ತೆರಳಲು ಯಾವೊಂದು ಬಸ್ ನಿಲ್ಲಿಸದ ಕಾರಣ ಕೋಪ ಬಂದು ಬಸ್​ಗೆ ಕಲ್ಲೆಸೆದಿದ್ದಾರೆ. ಪರಿಣಾಮ ಬಸ್​ನ ಕಿಟಕಿ ಕೆಳಗಿನ ಗಾಜು ಒಡೆದಿದೆ.

5000 ರೂ ದಂಡ ಕಟ್ಟಿದ ಮಹಿಳೆ: ಕೊಪ್ಪಳ ಘಟಕದ KA-35, F-252 ಬಸ್​ನ ಗ್ಲಾಸ್ ಡ್ಯಾಮೇಜ್ ಆದ ಕಾರಣ, ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಗೆ ಬಸ್​ ನಿರ್ವಾಹಕರು ಬಸ್​ ಅನ್ನು ಪ್ಯಾಸೆಂಜರ್ ಸಮೇತ ಬಸ್ ನಿಲ್ಲಿಸಿ ದೂರು ನೀಡಲು ಮುಂದಾಗಿದ್ದರು. ಆದರೆ ಡಿಪೋ ಮ್ಯಾನೇಜರ್ 5000ರೂ, ದಂಡ ಕೇಳಿದ್ದಾರೆ. ಇಲ್ಲವಾದಲ್ಲಿ ಎಫ್ ಐ ಆರ್ ಮಾಡುವುದಾಗಿ ಲಕ್ಷ್ಮಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಬಳಿಕ ಮಾಡಿದ ತಪ್ಪಿಗೆ ಕ್ಷಮೆ ಕೇಳಿ ಪೊಲೀಸರಿಗೆ ಮನವಿ ಮಾಡಿ ಕೊನೆಗೆ 5000 ದಂಡ ಕಟ್ಟಿ ಅದೇ ಬಸ್​ಲ್ಲಿ ಲಕ್ಷ್ಮಿ ತೆರಳಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ