Breaking News

ತಹಶೀಲ್ದಾರ್ ಅಶೋಕ್​ ಮಣ್ಣಿಕೇರಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ.

Spread the love

ಬೆಳಗಾವಿ: ಬೆಳಗಾವಿಯ ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಅಶೋಕ್​ ಮಣ್ಣಿಕೇರಿ ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ.

ಇದು ಸಹಜ ಸಾವಲ್ಲ ಎಂದು ಅಶೋಕ್ ಅವರ ಸಹೋದರಿಯರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ.

ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬ ವಾಸವಿತ್ತು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಖಾಸಗಿ ಆಸ್ಪತ್ರೆಗೆ ಅಶೋಕ್​ ಅವರನ್ನು ಪತ್ನಿ ಮತ್ತು ಸಹೋದರ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಅಷ್ಟರಲ್ಲೇ ಅಶೋಕ್ ಮಣ್ಣಿಕೇರಿ ಮೃತಪಟ್ಟಿದ್ದರು.

ಅಶೋಕ್ ಸಾವಿನ ಬಗ್ಗೆ ತನಿಖೆಗೆ‌ ಕುಟುಂಬಸ್ಥರು ಒತ್ತಾಯಿಸಿ, ನಗರದ ಕ್ಯಾಂಪ್ ಠಾಣೆಗೆ ದೂರು ನೀಡಿದ್ದಾರೆ. ಕ್ಯಾಂಪ್ ಠಾಣೆ ಎದುರು ಸ್ನೇಹಿತರು, ಸಂಬಂಧಿಕರು ಜಮಾವಣೆಗೊಂಡಿದ್ದರು. ಪೊಲೀಸ್ ಠಾಣೆಗೆ ಬಂದಿದ್ದ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ಮೇಲೆ ಹಲ್ಲೆಯತ್ನ ನಡೆಯಿತು. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಭೂಮಿ ಹಾಗು ಸ್ಯಾಮ್ಯುಯಲ್‌ ಅವರನ್ನು ರಕ್ಷಿಸಿ ಕರೆದೊಯ್ದಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ