Breaking News

ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ; ಹೆಂಡತಿ ಮಗನ ಕೊಂದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

Spread the love

ಕಾರವಾರ (ಉತ್ತರ ಕನ್ನಡ) : ಒಂದೇ ಕುಟುಂಬದ ಮೂವರ ಮೃತದೇಹ ಕಾರವಾರ ಹಾಗೂ ಗೋವಾ ಬಳಿ ಪತ್ತೆಯಾಗಿದ್ದು, ಹೆಂಡತಿ ಮಗನ‌ನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಗೋವಾ ಮೂಲದ ಶ್ಯಾಮ್​ ಪಾಟೀಲ್ (45), ಜ್ಯೋತಿ (38) ಇವರ 12 ವರ್ಷದ ಮಗ ಮೃತಪಟ್ಟವರಾಗಿದ್ದಾರೆ. ಜ್ಯೋತಿ ಹಾಗೂ ಅವರ ಮಗನ ಮೃತದೇಹ ಕಾರವಾರದ ದೇವಭಾಗ ಬೀಚ್ ಬಳಿ ಪತ್ತೆಯಾಗಿವೆ.

ಇನ್ನು ಶ್ಯಾಮ್​ ಪಾಟೀಲ್ ಅವರ ಮೃತದೇಹ ಗೋವಾದ ಕುಕ್ಕಳ್ಳಿ ಪಾಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶ್ಯಾಮ್ ಪಾಟೀಲ್ ಶ್ಯಾಮ್ ಇಂಡಸ್ಟ್ರಿಯಲ್ ಕಂಪನಿ ಹೊಂದಿದ್ದು ಸಾಲ ಮಾಡಿಕೊಂಡಿದ್ದರು ಎನ್ನಲಾಗ್ತಿದೆ. ಇದೇ ಕಾರಣದಿಂದ ಹೆಂಡತಿ ಮಕ್ಕಳನ್ನು ಕಾರವಾರದ ಕಾಳಿನದಿಯಲ್ಲಿ ದೂಡಿ ತಾನು ಗೋವಾ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ದೇವಭಾಗದ ಬಳಿ ತೆರಳಿದ ಚಿತ್ತಾಕುಲ ಪೊಲೀಸರು ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶೈತ್ಯಾಗಾರಕ್ಕೆ ಸಾಗಿಸಿದ್ದಾರೆ. ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ