Home / ರಾಜಕೀಯ / ಎರಡು ತಿಂಗಳು ಕಳೆದರೂ ಹರಿಯಾಣದಿಂದ ಮುಂಬೈಗೆ ತಲುಪದ ರೈಲ್ವೆ ಎಂಜಿನ್

ಎರಡು ತಿಂಗಳು ಕಳೆದರೂ ಹರಿಯಾಣದಿಂದ ಮುಂಬೈಗೆ ತಲುಪದ ರೈಲ್ವೆ ಎಂಜಿನ್

Spread the love

ಮುಂಬೈ (ಮಹಾರಾಷ್ಟ್ರ): ಹಣ ಪಾವತಿ ವಿವಾದದಿಂದಾಗಿ ಹರಿಯಾಣದಿಂದ ಮುಂಬೈಗೆ 5 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಎಂಜಿನ್​ ಅನ್ನು ತಲುಪಿಸಲು ಟ್ರಾನ್ಸ್‌ಪೋರ್ಟ್​ ಸಂಸ್ಥೆ ವಿಫಲವಾದ ಕಾರಣ ಮುಂಬೈ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ತನಿಖೆಯನ್ನು ಆರಂಭಿಸಿದ್ದಾರೆ.

ಎರಡು ತಿಂಗಳ ಹಿಂದೆ ಹರಿಯಾಣದ ಕಲ್ಕಾದಲ್ಲಿ ಟ್ರೇಲರ್‌ ಟ್ರಕ್‌ಗೆ ರೈಲ್ವೆ ಎಂಜಿನ್ ಲೋಡ್ ಮಾಡಲಾಗಿತ್ತು.

ಆದರೆ, ಇದುವರೆಗೂ ಮುಂಬೈಗೆ ಎಂಜಿನ್​ ತಲುಪಿಲ್ಲ. ಈ ಬಗ್ಗೆ ಭಾರತೀಯ ರೈಲ್ವೆಯ ಅಧಿಕೃತ ಟ್ರಾನ್ಸ್‌ಪೋರ್ಟರ್ ಅನಿಲ್ ಕುಮಾರ್ ಗುಪ್ತಾ ಅವರು ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ ​ಎಂದು ವಡಾಲಾ ಟಿಟಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಈ ದೂರಿನ ಪ್ರಕಾರ, ಟ್ರಾನ್ಸ್‌ಪೋರ್ಟರ್ ಅನಿಲ್ ಕುಮಾರ್ ಗುಪ್ತಾ ಅವರು ಮುಂಬೈಗೆ ರೈಲ್ವೆ ಎಂಜಿನ್ ತಲುಪಿಸುವ ನಿಟ್ಟಿನಲ್ಲಿ ಪವನ್ ಶರ್ಮಾ ಎಂಬ ಇನ್ನೊಬ್ಬ ಟ್ರಾನ್ಸ್‌ಪೋರ್ಟರ್​ರನ್ನು ನೇಮಿಸಿಕೊಂಡಿದ್ದರು. ಕಲ್ಕಾಗೆ ರೈಲ್ವೆ ಎಂಜಿನ್ ತಲುಪಿಸಲು ಮತ್ತು ಅಲ್ಲಿಂದ ಮುಂಬೈಗೆ ಮತ್ತೊಂದು ಎಂಜಿನ್​ಅನ್ನು ಸಾಗಿಸಲು ಪವನ್ ಶರ್ಮಾ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು. ಅಲ್ಲದೇ, ಈ ಸಂಬಂಧ ಪವನ್​​ ಶರ್ಮಾ ಕಂಪನಿ ಜೊತೆಗೆ 4.25 ಲಕ್ಷ ರೂಪಾಯಿಗಳ ಪಾವತಿಸುವ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದರಲ್ಲಿ 4 ಲಕ್ಷ ರೂ. ಹಣವನ್ನೂ ಪವನ್​​ ಶರ್ಮಾ ಕಂಪನಿಗೆ ಅನಿಲ್ ಕುಮಾರ್ ಗುಪ್ತಾ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ