Breaking News

ಎರಡು ತಿಂಗಳು ಕಳೆದರೂ ಹರಿಯಾಣದಿಂದ ಮುಂಬೈಗೆ ತಲುಪದ ರೈಲ್ವೆ ಎಂಜಿನ್

Spread the love

ಮುಂಬೈ (ಮಹಾರಾಷ್ಟ್ರ): ಹಣ ಪಾವತಿ ವಿವಾದದಿಂದಾಗಿ ಹರಿಯಾಣದಿಂದ ಮುಂಬೈಗೆ 5 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಎಂಜಿನ್​ ಅನ್ನು ತಲುಪಿಸಲು ಟ್ರಾನ್ಸ್‌ಪೋರ್ಟ್​ ಸಂಸ್ಥೆ ವಿಫಲವಾದ ಕಾರಣ ಮುಂಬೈ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ತನಿಖೆಯನ್ನು ಆರಂಭಿಸಿದ್ದಾರೆ.

ಎರಡು ತಿಂಗಳ ಹಿಂದೆ ಹರಿಯಾಣದ ಕಲ್ಕಾದಲ್ಲಿ ಟ್ರೇಲರ್‌ ಟ್ರಕ್‌ಗೆ ರೈಲ್ವೆ ಎಂಜಿನ್ ಲೋಡ್ ಮಾಡಲಾಗಿತ್ತು.

ಆದರೆ, ಇದುವರೆಗೂ ಮುಂಬೈಗೆ ಎಂಜಿನ್​ ತಲುಪಿಲ್ಲ. ಈ ಬಗ್ಗೆ ಭಾರತೀಯ ರೈಲ್ವೆಯ ಅಧಿಕೃತ ಟ್ರಾನ್ಸ್‌ಪೋರ್ಟರ್ ಅನಿಲ್ ಕುಮಾರ್ ಗುಪ್ತಾ ಅವರು ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ ​ಎಂದು ವಡಾಲಾ ಟಿಟಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಈ ದೂರಿನ ಪ್ರಕಾರ, ಟ್ರಾನ್ಸ್‌ಪೋರ್ಟರ್ ಅನಿಲ್ ಕುಮಾರ್ ಗುಪ್ತಾ ಅವರು ಮುಂಬೈಗೆ ರೈಲ್ವೆ ಎಂಜಿನ್ ತಲುಪಿಸುವ ನಿಟ್ಟಿನಲ್ಲಿ ಪವನ್ ಶರ್ಮಾ ಎಂಬ ಇನ್ನೊಬ್ಬ ಟ್ರಾನ್ಸ್‌ಪೋರ್ಟರ್​ರನ್ನು ನೇಮಿಸಿಕೊಂಡಿದ್ದರು. ಕಲ್ಕಾಗೆ ರೈಲ್ವೆ ಎಂಜಿನ್ ತಲುಪಿಸಲು ಮತ್ತು ಅಲ್ಲಿಂದ ಮುಂಬೈಗೆ ಮತ್ತೊಂದು ಎಂಜಿನ್​ಅನ್ನು ಸಾಗಿಸಲು ಪವನ್ ಶರ್ಮಾ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು. ಅಲ್ಲದೇ, ಈ ಸಂಬಂಧ ಪವನ್​​ ಶರ್ಮಾ ಕಂಪನಿ ಜೊತೆಗೆ 4.25 ಲಕ್ಷ ರೂಪಾಯಿಗಳ ಪಾವತಿಸುವ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದರಲ್ಲಿ 4 ಲಕ್ಷ ರೂ. ಹಣವನ್ನೂ ಪವನ್​​ ಶರ್ಮಾ ಕಂಪನಿಗೆ ಅನಿಲ್ ಕುಮಾರ್ ಗುಪ್ತಾ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.


Spread the love

About Laxminews 24x7

Check Also

ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ

Spread the love ಪಾಲಕರಿಗೆ ನೀವೇ ಸರ್ವಸ್ವ, ಅವರ ಕನಸು ನನಸು ಮಾಡಿ: ಚನ್ನರಾಜ ಹಟ್ಟಿಹೊಳಿ ಹಿರೇಬಾಗೇವಾಡಿ: ಪಾಲಕರಿಗೆ ಮಕ್ಕಳೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ