Breaking News

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವಂತೆ ಒತ್ತಾಯ

Spread the love

ಬೆಳಗಾವಿ : ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿರುವ ಪ್ರಸ್ತುತ ಕಾಂಗ್ರೆಸ್ ಸರ್ಕಾರ ತಾವೇ ಘೋಷಿಸಿದ 6ನೇ ಗ್ಯಾರಂಟಿ ಏಕೆ ಜಾರಿಗೆ ತರುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಈ ಬಜೆಟ್​ನಲ್ಲಿ ತಾವು ಕೊಟ್ಟ ಮಾತಿನಂತೆ ನಮ್ಮ ವೇತನ ಹೆಚ್ಚಿಸಲು ಆದೇಶ ಹೊರಡಿಸಬೇಕು ಎಂದು ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಹೌದು, ಕಡಿಮೆ ವೇತನದಲ್ಲಿ ನಾವೆಲ್ಲಾ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಪ್ರತಿ ಬಾರಿ‌ ಚುನಾವಣೆ ಬಂದಾಗಲೂ ನಮಗೆ ರಾಜಕೀಯ ಪಕ್ಷಗಳು ಹೊಸ ಆಸೆ ಚಿಗುರೊಡೆಯುವಂತೆ ಮಾಡುತ್ತವೆ. ಆದರೆ, ಗೆದ್ದ ಬಳಿಕ ಆ ಬಗ್ಗೆ ಮರೆತು ಬಿಡುತ್ತಾರೆ. ಈಗ ಗ್ಯಾರಂಟಿ ಯೋಜನೆಗಳ ಮೂಲಕ‌ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವಾದರೂ ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂಬುದು ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷೆ ದೊಡ್ಡವ್ವ ಪೂಜಾರಿ, ಚುನಾವಣೆಗೂ ಮುಂಚೆ 15 ಸಾವಿರ ರೂ. ವೇತನ ಕೊಡುತ್ತೇವೆ ಎಂದಿದ್ದಾರೆ. ಆದರೆ, 21 ಸಾವಿರ ವೇತನ ನೀಡಬೇಕು ಎನ್ನುವುದು ನಮ್ಮ ಬೇಡಿಕೆ. ಎಷ್ಟು ಕೊಡುತ್ತಾರೆ ನೋಡಬೇಕಿದೆ. ಇನ್ನು 2019ರಲ್ಲಿ ನಮಗೆ ಕೊಟ್ಟಿದ್ದ ಮೊಬೈಲ್​ಗಳು ಹಾಳಾಗಿ ಹೋಗಿವೆ. ಅದೇ ಮೊಬೈಲ್ ಗಳಿಂದಲೇ ಸಿಎನ್‌ಎಸ್, ಗೃಹಲಕ್ಷ್ಮೀ, ಗೃಹಜ್ಯೋತಿ ಸೇರಿ ಸರ್ಕಾರದ ವಿವಿಧ ಇಲಾಖೆಯ ಸರ್ವೇಗಳನ್ನು ಮಾಡುವಂತೆ ಅಧಿಕಾರಿಗಳು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಜುಲೈ 10ರಂದು ಆ‌ ಮೊಬೈಲ್ ವಾಪಸ್​​ ಕೊಡಲಿದ್ದೇವೆ. ಹೀಗಾಗಿ ಸುಪ್ರೀಂಕೋರ್ಟ್ ಆದೇಶದ ಪ್ರಕಾರ, 2023ರಲ್ಲಿ ನಿವೃತ್ತಿ ಹೊಂದಿದವರಿಗೂ ಪಿಂಚಣಿ ನೀಡಬೇಕು. ಬಾಕಿ ಇರುವ ಕಟ್ಟಡ ಬಾಡಿಗೆ ತಕ್ಷಣವೇ ಒದಗಿಸಬೇಕು. ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ