Breaking News

ಪಿಂಚಣಿ ಉಪದಾನ ಪತ್ರಕ್ಕೆ 20 ಲಕ್ಷ ಲಂಚ ಕೇಳಿದ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ

Spread the love

ಮಂಗಳೂರು: ವಯೋ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿಗೆ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಲು 20 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಅನುದಾನಿತ ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

 

ಮಂಗಳೂರು ತಾಲೂಕಿನ ಬಜ್ಪೆ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೋಭಾರಾಣಿ ಎಂಬುವರು ಶಿಕ್ಷಕಿ ಹಾಗೂ ಸದ್ಯ ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಜುಲೈ 31ರಂದು ವಯೋನಿವೃತ್ತಿ ಹೊಂದಲಿದ್ದಾರೆ. ಅವರು ತಮ್ಮ ವಯೋನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ಮೇ 25ರಂದು ಶಾಲೆಯ ಮ್ಯಾನೇಜ್‌ಮೆಂಟ್‌ನ ಸಂಚಾಲಕರಾದ ಜ್ಯೋತಿ ಎನ್. ಪೂಜಾರಿ ಅವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಕೋರಿದ್ದರು.

ಆದರೆ ಸಂಚಾಲಕರಾದ ಜ್ಯೋತಿ.ಎನ್. ಪೂಜಾರಿ ಅವರು ಸ್ವೀಕೃತಿಯನ್ನು ನಂತರ ನೀಡುವುದಾಗಿ ತಿಳಿಸಿ, ಪಿಂಚಣಿ ಉಪದಾನ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಶೋಭಾರಾಣಿ ಅವರಿಗೆ ಸತಾಯಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕಳುಹಿಸಬೇಕಾದರೆ ರೂಪಾಯಿ 20 ಲಕ್ಷ ಲಂಚ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆ ನಂತರ ಪುನಃ ಶೋಭಾರಾಣಿ ಅವರು ಜುಲೈ 5ರಂದು ವಾಪಸ್​​ ಮ್ಯಾನೇಜ್‌ಮೆಂಟ್‌ನ ಸಂಚಾಲಕರ ವಾಸದ ಮನೆ ಬಳಿ ಹೋಗಿ ಸಂಚಾಲಕರಾದ ಜ್ಯೋತಿ ಎನ್. ಪೂಜಾರಿ ಅವರನ್ನು ಭೇಟಿ ಮಾಡಿ ತನ್ನ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಿ ಕಳುಹಿಸಿಕೊಡುವಂತೆ ಕೋರಿದ್ದಾರೆ. ಆಗ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡುವಾಗಲೇ ಜ್ಯೋತಿ ಅವರು 5 ಲಕ್ಷ ರೂಪಾಯಿ ಕೊಡುವಂತೆ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ