Breaking News

ಶೀತ, ಕೆಮ್ಮು, ಗಂಟಲು ನೋವು.. ವಿಶ್ರಾಂತಿಗೆ ಜಾರಿದ ಸಿಎಂ

Spread the love

ಬೆಂಗಳೂರು: ಶೀತ, ಕೆಮ್ಮು, ಗಂಟಲು ನೋವಿನಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ಜಾರಿದ್ದಾರೆ. ನಿನ್ನೆಯಿಂದಲೇ ಸಿದ್ದರಾಮಯ್ಯ ಅವರಿಗೆ ಶೀತ ಕಾಣಿಸಿಕೊಂಡು ಕೆಮ್ಮು ಇತ್ತು.

ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು ಯಾರನ್ನೂ ಭೇಟಿ ಮಾಡುತ್ತಿಲ್ಲ.

ಅವರ ಭೇಟಿಗೆ ಬಂದ ಅಧಿಕಾರಿಗಳು ಮತ್ತು ರಾಜಕಾರಣಿಗಳು ವಾಪಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರ ಇಂದಿನ ಕಾರ್ಯಕ್ರಮಗಳು ರದ್ದಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಹಲವಾರು ಬಾರಿ ಸಿದ್ದರಾಮಯ್ಯ ಅವರು ಕೆಮ್ಮುತ್ತಲೇ ಬಜೆಟ್ ಭಾಷಣವನ್ನು ಓದಿದ್ದರು.

ಹವಾಮಾನದಿಂದಾಗಿ ಅವರಿಗೆ ನಿನ್ನೆಯೇ ಶೀತ ಕಾಣಿಸಿಕೊಂಡಿದ್ದು, ಅದನ್ನು ಲೆಕ್ಕಿಸದೇ ಸಿಎಂ ಬಜೆಟ್​ಅನ್ನು ಮೂರು ಗಂಟೆಗಳ ಕಾಲ ಓದಿ ಮುಗಿಸಿದ್ದರು. ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಜೆಟ್​ಗೆ ಸಂಬಂಧಿಸಿದಂತೆ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ್ದ ಸಿದ್ದರಾಮಯ್ಯ ಅವರು ಬಳಿಕ ತಮ್ಮ ನಿವಾಸಕ್ಕೆ ತೆರಳಿದ್ದರು. ರಾತ್ರಿಯಿಂದ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ