Breaking News

ಸಾಲ ಮಾಡಿ ಅದನ್ನು ತೀರಿಸಲಾಗದೇ ನೇಣು ಹಾಕಿಕೊಂಡು ರೈತನ ಆತ್ಮಹತ್ಯೆ

Spread the love

ಕೃಷಿ ಚಟುವಟಿಕೆಗಾಗಿ ಸಾಲ ಮಾಡಿ ಅದನ್ನು ತೀರಿಸಲಾಗದೇ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಇರುವ ಸೈಬನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಉಪ್ಪಿನ ಬೆಟಗೇರಿ ಗ್ರಾಮದ ಕಲ್ಲಪ್ಪ ಕುರಗುಂದ (55) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು.ಕೃಷಿ ಚಟುವಟಿಕೆಗಾಗಿ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದ.

ಅಲ್ಲದೇ ತನಗಿದ್ದ ಜಮೀನನ್ನು 7 ಲಕ್ಷ ರೂಪಾಯಿಗೆ ಲೀಸ್‌ನಲ್ಲಿ ಹಾಕಿಕೊಂಡಿದ್ದ. ಮಳೆಯಾಗದ ಕಾರಣ ಕೃಷಿ ಸಾಲ ತೀರಿಸಲಾಗದೇ ಹಾಗೂ ಲೀಸ್‌ನಲ್ಲಿದ್ದ ಹೊಲವನ್ನು ಬಿಡಿಸಿಕೊಳ್ಳಲಾಗದೇ ಕಲ್ಲಪ್ಪ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ