Breaking News

ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

Spread the love

ಹಾವೇರಿ: ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರೈತರನ್ನ ಮನೆಹಾಳರನ್ನಾಗಿ ಮಾಡುವ ಕಾನೂನು ಇದ್ದರೇನು? ಬಿಟ್ಟರೇನು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿಯ ಗೋ ಹತ್ಯೆ ನಿಷೇಧ ಕಾನೂನು ಮಾಡುವ ಸರ್ಕಾರಗಳಿಗೆ, ವ್ಯಕ್ತಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು. ಯಾವ ಹಸು ಗೋಶಾಲೆಗೆ ಹೋಗಬೇಕು, ಯಾವ ಹಸು ಕಸಾಯಿಖಾನೆಗೆ ಹೋಗಬೇಕು ಎನ್ನುವ ಕುರಿತಂತೆ ತಿಳಿವಳಿಕೆ ಇರಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಎಂಬುವ ಪದ ಬಹಳ ಭಾವನಾತ್ಮಕವಾದುದು. ಇದನ್ನ ಬ್ಲಾಕ್ ಮೇಲ್ ಎಂತಲೂ ಕರೆಯುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ