Breaking News

ಳ್ಳರಿಂದ ತರಕಾರಿ ರಕ್ಷಿಸಲು ಪಾಳಿಯಲ್ಲಿ ಕಾವಲು ಕಾಯುತ್ತಿರುವ ರೈತ‌!

Spread the love

ದಾವಣಗೆರೆ: ಇದೀಗ ಟೊಮೆಟೊ ತರಕಾರಿಗಳಲ್ಲೇ ರಾಜ ಎನ್ನಿಸಿಕೊಳ್ಳುವ ಪರಿಸ್ಥಿತಿ ಇದೆ.

ಏಕೆಂದರೆ ಬೆಲೆ ಗಗನಕ್ಕೇರಿದೆ. ಇನ್ನೊಂದೆಡೆ, ರೈತರು ಬೆಳೆ ಬೆಳೆಯುತ್ತಿರುವ ಜಮೀನುಗಳಲ್ಲೇ ಮೊಕ್ಕಾಂ ಹೂಡುವಂತಾಗಿದೆ. ಕಳ್ಳರ ಕಾಟದಿಂದ ಬೇಸತ್ತಿರುವ ಅವರಿಗೆ ಟೊಮೆಟೊ ರಕ್ಷಣೆ ಮಾಡುವುದು ತಲೆನೋವಾಗಿ ಪರಿಣಮಿಸಿದೆ. ದಾವಣಗೆರೆಯ ರೈತರು ಎರಡು ನಾಯಿಗಳೊಂದಿಗೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ.

ಮಾಯಕೊಂಡ ಹೋಬಳಿಯಲ್ಲಿ ಟೊಮೆಟೊ ಹೆಚ್ಚಾಗಿ ಬೆಳೆಯುತ್ತಾರೆ. ಸುತ್ತಮುತ್ತಲ ಗ್ರಾಮದ‌ ಜಮೀನುಗಳಲ್ಲಿ ಬೆಳೆಯುವ ತರಕಾರಿ ವಿದೇಶಗಳಿಗೂ ರಫ್ತಾಗುತ್ತದೆ. ಈಗಂತೂ ಟೊಮೆಟೊಗೆ ಬೆಲೆ ಕೇಳುವಂತಿಲ್ಲ. ಪ್ರತಿ ಕೆಜಿಗೆ 100ರಿಂದ 150 ರೂಪಾಯಿವರೆಗೆ ಇದೆ. ಬೆಲೆ ಏರಿಕೆಯಾದ್ದರಿಂದ ಜಮೀನುಗಳಲ್ಲಿ ಕಳ್ಳರ ಕಾಟವೂ ಹೆಚ್ಚಾಗಿದೆ. ಹೀಗಾಗಿ ಕೊಡಗನೂರು ಗ್ರಾಮದ ರೈತರು ಶ್ವಾನಗಳೊಂದಿಗೆ ಹಗಲು, ರಾತ್ರಿ ಬೆಳೆ ರಕ್ಷಣೆ ಮಾಡುತ್ತಿದ್ದಾರೆ.

ಕೊಡಗನೂರು ಗ್ರಾಮದ ಶರಣಪ್ಪ ಹಾಗೂ ಶರತ್ ಎಂಬಿಬ್ಬರು ರೈತರು ತಲಾ ಒಂದೊಂದು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದಾರೆ. ಶ್ವಾನ ಹಾಗೂ ಇವರ ಕುಟುಂಬ ಕಾವಲಿದ್ರೂ ಕೂಡ ಐದಾರು ಬಾಕ್ಸ್ ಟೊಮೆಟೊ ಕಳ್ಳತನ‌ವಾಗಿದೆಯಂತೆ. ಕೊಡಗನೂರು ಗ್ರಾಮದ ರೈತ ಮಹಿಳೆ ಪ್ರೇಮ ಕೂಡಾ ತಮ್ಮ ಒಂದೆಕರೆ ಜಮೀನಿನಲ್ಲಿ ಟೊಮೆಟೊ ಬೆಳೆದು ಕಾವಲು ಕಾಯುತ್ತಿದ್ದಾರೆ. ಇವರು ಈಗಾಗಲೇ 200 ಬಾಕ್ಸ್ ಟೊಮೆಟೊ ಮಾರುಕಟ್ಟೆ ತಲುಪಿಸಿದ್ದಾರೆ. ಹೊಲವನ್ನು ಇವರ ಪತಿ, ಮಕ್ಕಳು ಒಬ್ಬೊಬ್ಬರು ಒಂದೊಂದು ಪಾಳಿಯಂತೆ ಕಾವಲು ಕಾಯುತ್ತಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’

Spread the love ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ