Breaking News

ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

Spread the love

ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ರಾಯಚೂರು ತಾಲೂಕಿನ ನಡೆದಿದೆ. ಬೇವಿನ ಗಿಡಕ್ಕೆ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದ ಇಡಪನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ರಾಯಚೂರಿನ ರಿಮ್ಸ್‌ನ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಬಾಲಕಿಯ ಪೊಷಕರು, ”ನಾವು ವ್ಯಾಪಾರಕ್ಕೆ ಹೋಗಿದ್ದ ವೇಳೆ ನಮ್ಮ ಮಗಳನ್ನು ಮೂವರು ಯುವಕರು ಅತ್ಯಾಚಾರ ಮಾಡಿ, ಮರಕ್ಕೆ ನೇಣು ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಕಲಬುರಗಿಯಲ್ಲೂ ನಡೆದಿದ್ದ ಘಟನೆ: ಇತ್ತೀಚೆಗಷ್ಟೇಪ್ರೇಮಿಗಳಿಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ಡೊಂಗರಗಾಂವ್ ಗ್ರಾಮದಲ್ಲಿ ನಡೆದಿತ್ತು. ಪಾಂಡುರಂಗ್ ಕಿಣ್ಣಿ(20) ಹಾಗೂ ಮೃತರನ್ನು ಅಕ್ಷತಾ ಭರಣಿ (19) ಎಂದು ಗುರುತಿಸಲಾಗಿತ್ತು. ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರು ಪ್ರೇಮಿಗಳ ಶವಗಳು ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಕುಟುಂಬಸ್ಥರ ವಿರೋಧದಿಂದ ಸಾವಿಗೆ ಶರಣಾಗಿರಬಹುದೆಂದು ಪೊಲೀಸರು ಶಂಕಿಸಿದ್ದರು


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ