Breaking News

ಚಂದ್ರಯಾನ 3 ತಂಡದಲ್ಲಿದ್ದ ಚಿಕ್ಕಮಗಳೂರಿನ ಡಾ.ನಂದಿನಿ

Spread the love

ಚಿಕ್ಕಮಗಳೂರು: ಇಡೀ ಪ್ರಪಂಚವೇ ಕಾತರದಿಂದ ಕಾಯುತ್ತಿದ್ದ, ಭಾರತದ ಕನಸಿನ ಯೋಜನೆ ಚಂದ್ರಯಾನ 3 ನಿನ್ನೆಯಷ್ಟೆ ಇಸ್ರೋ ಕೇಂದ್ರದಿಂದ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಗೆ ಉಡಾವಣೆಗೊಂಡಿದೆ.

ಚಂದ್ರಯಾನ 3 ಯೋಜನೆ ಹಾಗೂ ಇದರ ಯಶಸ್ವಿ ಉಡಾವಣೆಯ ಹಿಂದೆ ಹಲವಾರು ವಿಜ್ಞಾನಿಗಳ ಪರಿಶ್ರಮವಿದೆ. ದೇಶದ ಬೇರೆ ಬೇರೆ ಜಿಲ್ಲೆಗಳ ವಿಜ್ಞಾನಿಗಳು ಈ ಯೋಜನೆಗಾಗಿ ಹಗಲು ಇರುಳು ಕೆಲಸ ಮಾಡಿದ್ದಾರೆ.

ಇದೀಗ ಆಂಧ್ರಪ್ರದೇಶದ ಶ್ರೀ ಹರಿಕೋಟಾ ಸತೀಶ್‌ ಧವನ್‌ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಉಡಾವಣೆ ಮಾಡಿದ ಚಂದ್ರಯಾನ 3 ರ ತಂಡದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಯುವತಿ ಭಾಗವಹಿಸಿದ್ದು, ಜಿಲ್ಲೆಯ ಜನರ ಸಂತಸ ಸಂಭ್ರಮಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ಜಿಲ್ಲೆಯ, ಬಾಳೆಹೊನ್ನೂರು ಸಮೀಪದ ತುಪ್ಪೂರು ಗ್ರಾಮದ ಯುವತಿ ಇರುವುದು ಆ ಜಿಲ್ಲೆಗೆ ಮಾತ್ರವಲ್ಲದೇ ನಮ್ಮ ರಾಜ್ಯಕ್ಕೆ ಹೆಮ್ಮೆ ತಂದಿದೆ.ಬಾಳೆಹೊನ್ನೂರು ನಗರದಲ್ಲಿ ಕಾಫಿ ವ್ಯವಹಾರ ಮಾಡುತ್ತಿರುವ ಕೇಶವ ಮೂರ್ತಿ, ಮಂಗಳ ದಂಪತಿಯ ಪುತ್ರಿ ಡಾ. ಕೆ. ನಂದಿನಿ ಚಂದ್ರಯಾನ 3 ತಂಡದಲ್ಲಿ ಇದ್ದು, ನಿನ್ನೆ ನಡೆದ ಯಶಸ್ವಿ ಉಡಾವಣೆಯಲ್ಲಿಯೂ ಈಕೆ ಪಾಲ್ಗೊಂಡಿರುವುದು ಆಕೆಯ ಕುಟುಂಬಸ್ಥರು ಸೇರಿದಂತೆ ಸ್ಥಳೀಯರಲ್ಲಿ ಸಂತೋಷ ಹಾಗೂ ಸಂಭ್ರಮ ಸಡಗರ ತರಿಸಿದೆ. ಡಾ. ನಂದಿನಿ ಕಳೆದ 8 ವರ್ಷಗಳಿಂದ ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇವರು 2019 ರ ಚಂದ್ರಯಾನ 2 ರ ತಂಡದಲ್ಲೂ ಭಾಗವಹಿಸಿದ್ದರು. ಸತತ ಎರಡನೇ ಬಾರಿಯೂ ಕಾರ್ಯ ನಿರ್ವಹಿಸಿ ಬಾಳೆಹೊನ್ನೂರಿಗೆ ಕೀರ್ತಿ ತರುವುದರ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ