Breaking News

ಮುಂಗಾರು ಮಳೆ ವಿಳಂಬವಾಗಿದ್ದರಿಂದ ಎಲೆಕೋಸು ಇಳುವರಿ ಕುಂಠಿತವಾಗಿದ್ದು, ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೇ ರೈತರ ನಷ್ಟ

Spread the love

ಹಾವೇರಿ: ಜಿಲ್ಲೆಯ ರೈತರು ಅತ್ಯುತ್ತಮವಾದ ಎಲೆಕೋಸು ಬೆಳೆಯುತ್ತಾರೆ.

ಇಲ್ಲಿ ಬೆಳೆಯುವ ಎಲೆಕೋಸಿಗೆ ಮಧ್ಯಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚು ಬೇಡಿಕೆ ಇದ್ದು, ಜಿಲ್ಲೆಯಿಂದ ದೊಡ್ಡ ಪ್ರಮಾಣದಲ್ಲಿ ಎಲೆಕೋಸು ರಫ್ತಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನೂರಾರು ರೈತರು ಕೆಲ ವರ್ಷಗಳಿಂದ ಎಲೆಕೋಸು ಬೆಳೆಯುತ್ತಿದ್ದಾರೆ. ಆದರೆ, ಪ್ರತಿವರ್ಷ ಉತ್ತಮ ಆದಾಯಗಳಿಸುತ್ತಿದ್ದ ಎಲೆಕೋಸು ಬೆಳೆಗಾರರು ಈ ವರ್ಷ ನಷ್ಟದ ಹಾದಿಯಲ್ಲಿದ್ದಾರೆ.

ಈ ಬಾರಿ ಮುಂಗಾರು ಮಳೆ ವಿಳಂಬದಿಂದ ಎಲೆಕೋಸು ಫಸಲು ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲಾ. ಮುಂಗಾರು ಮಳೆ ವಿಳಂಬ ಎಲೆಕೋಸು ಬೆಳೆಗಾರರಿಗೆ ಹಲವು ಸಮಸ್ಯೆಗಳನ್ನು ಉಂಟುಮಾಡಿದೆ. ಬೇಸಿಗೆ ಕಾಲದಲ್ಲಿ ನಾಟಿ ಮಾಡಿದ್ದ ಎಲೆಕೋಸು ಬೆಳೆ ಮುಂಗಾರು ಮಳೆಗೆ ಉತ್ತಮವಾಗಿ ಬರುತ್ತಿತ್ತು. ಆದರೆ ಈ ಬಾರಿ ಮುಂಗಾರು ಮಳೆ ವಿಳಂಬವಾಗಿರುವುದರಿಂದ ಇಳುವರಿಯಲ್ಲಿ ಕುಂಠಿತವಾಗಿದೆ. ಪ್ರತಿವರ್ಷ ಎಕರೆಗೆ 25 ರಿಂದ 30 ಟನ್ ಬರುತ್ತಿದ್ದ ಎಸೆಕೋಸು ಈ ವರ್ಷ ಎಕರೆಗೆ 15 ರಿಂದ 20 ಟನ್ ಬಂದಿದೆ.

ಎಸೆಕೋಸು ಗಡ್ಡೆಗಳ ಗಾತ್ರ ಸಹ ಸಣ್ಣದಾಗಿದ್ದು, ವ್ಯಾಪಾರಿಗಳು ಈ ರೀತಿಯ ಎಲೆಕೋಸು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ ಬಾಯಿಗೆ ಬಂದ ದರದಲ್ಲಿ ಬೆಲೆ ನಿಗಧಿ ಮಾಡುತ್ತಿದ್ದಾರೆ. ಕಳೆದ ವರ್ಷ 8ರಿಂದ 10 ರೂಪಾಯಿಗೆ ಕೆಜಿ ಖರೀದಿಸುತ್ತಿದ್ದ ವರ್ತಕರು ಈ ವರ್ಷ 3 ರೂಪಾಯಿ ನಾಲ್ಕು ರೂಪಾಯಿಗೆ ಕೆಜಿಯಂತೆ ಖರೀದಿಸುತ್ತಿದ್ದಾರೆ. ಕಡಿಮೆ ಗಾತ್ರದ ಎಲೆಕೋಸನ್ನು ಕೆಜಿಗೆ ಒಂದು ರೂಪಾಯಿಯಂತೆ ಖರೀದಿ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ವಿರೋಧಿಸಿ ಪ್ರತಿಭಟನೆ

Spread the loveಬೆಳಗಾವಿ: ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ