Breaking News

ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ನಕಲಿ APP

Spread the love

ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣ ಗಳಲ್ಲಿ ನಕಲಿ ಅಪ್ಲಿಕೇಷನ್‌ ಗಳು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಜಾಗೃತೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

 

ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ.

ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾವುದೇ ಹೆಲ್ಪ್ ಡೆಸ್ಕ್‌ನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ, ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು.

ಸಾರ್ವಜನಿಕರು ಇಂತಹ ನಕಲಿ ‌ಅಪ್ಲಿಕೇಷನ್‌ ಗಳ ಮೂಲಕ ತಮ್ಮ ವೈಯಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸ ಹೋಗಬಾರದು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡ್ ಅಪ್ಲಿಕೇಷನ್‌ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಈ ಯೋಜನೆ ಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ