ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಂದು ವ್ಯವಸ್ಥೆಯನ್ನು ಕಲುಷಿತಗೊಳಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾಘಟಬಂಧನ ಸಭೆಗೂ ಮುನ್ನ ಮಾತನಾಡಿದ ಅವರು, 10 ವರ್ಷಗಳ ಹಿಂದೆ ದೇಶದ ಆಡಳಿತ ನಡೆಸಲು ನರೇಂದ್ರ ಮೋದಿಯವರಿಗೆ ಅವಕಾಶ ಸಿಕ್ಕಿತ್ತು.
ಆದರೆ ಅದನ್ನು ಸದುಪಯೋಗಪಡಿಸಿಕೊಳ್ಳುವ ಬದಲಾಗಿ ಅವರು ವ್ಯವಸ್ಥೆಯನ್ನು ಕಲುಷಿತಗೊಳಿಸಲು ಬಳಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜನರ ನಡುವೆ ದ್ವೇಷ ಬೆಳೆಸಲು, ಆರ್ಥಿಕತೆಯನ್ನು ಕುಗ್ಗಿಸಲು, ಹಣದುಬ್ಬರದ ಮೂಲಕ ಗರಿಷ್ಠ ಪ್ರಮಾಣದ ಬೆಲೆ ಏರಿಕೆಯನ್ನು ದಾಖಲಿಸಲು ಮೋದಿ ಕೊಡುಗೆ ನೀಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ನಿರುದ್ಯೋಗ ತಾಂಡವವಾಡುತ್ತಿದೆ. ಈ ಸಂದರ್ಭದಲ್ಲಿ ಸಮಾನ ಮನಸ್ಕ ಪಕ್ಷಗಳು ಒಗ್ಗೂಡಿ ಕಲುಷಿತ ವ್ಯವಸ್ಥೆಯನ್ನು ತೊಲಗಿಸುವ ಅಗತ್ಯ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.